Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...