Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...