Homeಮುಖಪುಟಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! - ಆರೋಪ

ಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! – ಆರೋಪ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಫೋನ್ ಕರೆಗಳ ಮೇಲೆ ನಿಗಾ ಇಡಲಾಗುತ್ತಿದೆ ಮತ್ತು ಕೇಂದ್ರೀಯ ಸಂಸ್ಥೆಗಳು ಅವರ ಚಲನವಲನಗಳ ಮೇಲೆ ನಿಗಾ ಇಡುತ್ತಿವೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಸಿಎಂ ಫಡ್ನವೀಸ್ ಮತ್ತು ಶಿಂಧೆ ನಡುವಿನ ಹದಗೆಟ್ಟ ಸಂಬಂಧಗಳು ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತವಿದ್ದರೂ ಅದನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

“ಶಿಂಧೆ ಮತ್ತು ಅವರ ಸಹಚರರ ಮೇಲೆ ಕಣ್ಗಾವಲು ನಡೆಸಲಾಗುತ್ತಿದೆ ಎಂದು ಶಾಸಕರೊಬ್ಬರು ನನಗೆ ತಿಳಿಸಿದ್ದಾರೆ” ಶಿವಸೇನಾ (ಯುಬಿಟಿ) ಮುಖವಾಣಿ ಸಾಮ್ನಾದಲ್ಲಿ ತಮ್ಮ ವಾರದ ಅಂಕಣ ರೋಖ್ಥೋಕ್‌ನಲ್ಲಿ ಸಂಜಯತ್ ರಾವತ್ ಬರೆದಿದ್ದಾರೆ.

ನವೆಂಬರ್ 2024 ರ ವಿಧಾನಸಭಾ ಚುನಾವಣೆಯ ನಂತರ ತಮ್ಮನ್ನು ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗಿಲ್ಲ ಎಂಬ ವಿಚಾರವನ್ನು ಶಿಂಧೆಗೆ ಒಪ್ಪಿಕೊಳ್ಳಲು ಆಗುತ್ತಿಲ್ಲ. ಅವರು ಆ ಸ್ಥಾನವನ್ನು ಮರಳಿ ಪಡೆಯಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ. ಈ ವಾಸ್ತವವನ್ನು ಸಿಎಂ ಫಡ್ನವೀಸ್ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆಯಲ್ಲಿ, ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು.

“ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ಬೆಂಬಲಿತ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಡುವೆ ಈಗ ನಿಜವಾದ ಸಂವಹನವಿಲ್ಲ. ಇದು ಈಗ ಸಾರ್ವಜನಿಕರಿಗೆ ಮನರಂಜನೆಯ ವಿಷಯವಾಗಿ ಮಾರ್ಪಟ್ಟಿದೆ” ಎಂದು ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

ಶಿಂಧೆ ಅವರ ಭದ್ರಕೋಟೆಯಾದ ಥಾಣೆಯ ಮೇಲಿನ ರಾಜಕೀಯ ನಿಯಂತ್ರಣವನ್ನು ಬಿಜೆಪಿ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ನೆರೆಯ ಪಾಲ್ಘರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಬಿಜೆಪಿ ಸಚಿವ ಗಣೇಶ್ ನಾಯಕ್ ಅವರನ್ನು ನೇಮಕ ಮಾಡಿರುವುದು ಈ ತಂತ್ರದ ಭಾಗವಾಗಿದೆ ರಾವತ್ ಅವರು ಅಭಿಪ್ರಾಯಪಟ್ಟಿದ್ದಾರೆ.

“ಶಿಂಧೆ ಕೇವಲ ಪುರಸಭೆಯ ಕೌನ್ಸಿಲರ್ ಆಗಿದ್ದಾಗ ನಾಯಕ್ ಆಗಲೇ ಮೊದಲ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಶಿಂಧೆಯವರ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ರಾವತ್ ಲೇಖನದಲ್ಲಿ ಬರೆದಿದ್ದಾರೆ.

ಇತ್ತೀಚೆಗಷ್ಟೆ ಥಾಣೆಯಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಬೇಕೆಂದು ಬಯಸುವುದಾಗಿ ನಾಯಕ್ ಹೇಳಿದ್ದು, ಸಂಭಾವ್ಯ ಅಧಿಕಾರ ಉಳಿಸುವ ಹೋರಾಟದ ಬಗ್ಗೆ ಸುಳಿವು ನೀಡಿದೆ. ಅವರು ನಗರದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಡೆಸುವ ಯೋಜನೆಗಳನ್ನು ಸಹ ಘೋಷಿಸಿದ್ದರು. ಅವರ ಈ ನಡೆಯು ಬಿಜೆಪಿಯು ಶಿಂಧೆಯ ಪ್ರಾಬಲ್ಯಕ್ಕೆ ಹಿನ್ನಡೆಯುಂಟು ಮಾಡಲು ತಯಾರಿ ನಡೆಸುತ್ತಿದೆ ಎಂಬ ಊಹಾಪೋಹಗಳು ಎದ್ದಿತ್ತು.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಪಾತ್ರ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದು, ಅವರು ಪ್ರಮುಖ ಕ್ಯಾಬಿನೆಟ್ ಸಭೆಗಳಿಗೆ ಆಗಾಗ್ಗೆ ಗೈರುಹಾಜರಾಗುತ್ತಾರೆ ಮತ್ತು ಹಾಜರಿದ್ದರೂ, ಆಗಾಗ್ಗೆ ತಡವಾಗಿ ಬರುತ್ತಾರೆ. “ಜನವರಿ 30 ರಂದು, ಅವರು ವಿಶ್ವ ವ್ಯಾಪಾರ ಕೇಂದ್ರದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಗೆ ಎರಡೂವರೆ ಗಂಟೆ ತಡವಾಗಿ ಬಂದರು” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರ ವಿಧಾನಸಭಾ ಚುನಾವಣೆಯನ್ನು ಶಿಂಧೆ ನೇತೃತ್ವದಲ್ಲಿಯೇ ಎದುರಿಸಲಾಗುವುದು ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಶಿಂಧೆ ಅವರ ಬಣದ ಹಿರಿಯ ಶಾಸಕರನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಈ ಭರವಸೆಯಿಂದ ಉತ್ತೇಜಿತರಾದ ಶಿಂಧೆ, ಪ್ರಚಾರದ ಸಮಯದಲ್ಲಿ ಅಪಾರ ಪ್ರಮಾಣದ ಹಣವನ್ನು ಖರ್ಚು ಮಾಡಿದ್ದಾರೆ ಎಂದು ನಂಬಲಾಗಿದೆ. ಆದಾಗ್ಯೂ, ಚುನಾವಣೆ ಮುಗಿದ ನಂತರ ಅಮಿತ್ ಶಾ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದಾಗಿ ಶಿಂಧೆಗೆ ತಾನು ಮೋಸ ಹೋಗಿದ್ದು ಮತ್ತು ರಾಜಕೀಯವಾಗಿ ಮೂಲೆಗುಂಪಾಗಿದ್ದೇನೆ ಎಂದು ಭಾವಿಸಿದ್ದಾರೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...