Homeಮುಖಪುಟಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! - ಆರೋಪ

ಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! – ಆರೋಪ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಫೋನ್ ಕರೆಗಳ ಮೇಲೆ ನಿಗಾ ಇಡಲಾಗುತ್ತಿದೆ ಮತ್ತು ಕೇಂದ್ರೀಯ ಸಂಸ್ಥೆಗಳು ಅವರ ಚಲನವಲನಗಳ ಮೇಲೆ ನಿಗಾ ಇಡುತ್ತಿವೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಸಿಎಂ ಫಡ್ನವೀಸ್ ಮತ್ತು ಶಿಂಧೆ ನಡುವಿನ ಹದಗೆಟ್ಟ ಸಂಬಂಧಗಳು ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತವಿದ್ದರೂ ಅದನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

“ಶಿಂಧೆ ಮತ್ತು ಅವರ ಸಹಚರರ ಮೇಲೆ ಕಣ್ಗಾವಲು ನಡೆಸಲಾಗುತ್ತಿದೆ ಎಂದು ಶಾಸಕರೊಬ್ಬರು ನನಗೆ ತಿಳಿಸಿದ್ದಾರೆ” ಶಿವಸೇನಾ (ಯುಬಿಟಿ) ಮುಖವಾಣಿ ಸಾಮ್ನಾದಲ್ಲಿ ತಮ್ಮ ವಾರದ ಅಂಕಣ ರೋಖ್ಥೋಕ್‌ನಲ್ಲಿ ಸಂಜಯತ್ ರಾವತ್ ಬರೆದಿದ್ದಾರೆ.

ನವೆಂಬರ್ 2024 ರ ವಿಧಾನಸಭಾ ಚುನಾವಣೆಯ ನಂತರ ತಮ್ಮನ್ನು ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗಿಲ್ಲ ಎಂಬ ವಿಚಾರವನ್ನು ಶಿಂಧೆಗೆ ಒಪ್ಪಿಕೊಳ್ಳಲು ಆಗುತ್ತಿಲ್ಲ. ಅವರು ಆ ಸ್ಥಾನವನ್ನು ಮರಳಿ ಪಡೆಯಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ. ಈ ವಾಸ್ತವವನ್ನು ಸಿಎಂ ಫಡ್ನವೀಸ್ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆಯಲ್ಲಿ, ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು.

“ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ಬೆಂಬಲಿತ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಡುವೆ ಈಗ ನಿಜವಾದ ಸಂವಹನವಿಲ್ಲ. ಇದು ಈಗ ಸಾರ್ವಜನಿಕರಿಗೆ ಮನರಂಜನೆಯ ವಿಷಯವಾಗಿ ಮಾರ್ಪಟ್ಟಿದೆ” ಎಂದು ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

ಶಿಂಧೆ ಅವರ ಭದ್ರಕೋಟೆಯಾದ ಥಾಣೆಯ ಮೇಲಿನ ರಾಜಕೀಯ ನಿಯಂತ್ರಣವನ್ನು ಬಿಜೆಪಿ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ನೆರೆಯ ಪಾಲ್ಘರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಬಿಜೆಪಿ ಸಚಿವ ಗಣೇಶ್ ನಾಯಕ್ ಅವರನ್ನು ನೇಮಕ ಮಾಡಿರುವುದು ಈ ತಂತ್ರದ ಭಾಗವಾಗಿದೆ ರಾವತ್ ಅವರು ಅಭಿಪ್ರಾಯಪಟ್ಟಿದ್ದಾರೆ.

“ಶಿಂಧೆ ಕೇವಲ ಪುರಸಭೆಯ ಕೌನ್ಸಿಲರ್ ಆಗಿದ್ದಾಗ ನಾಯಕ್ ಆಗಲೇ ಮೊದಲ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಶಿಂಧೆಯವರ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ರಾವತ್ ಲೇಖನದಲ್ಲಿ ಬರೆದಿದ್ದಾರೆ.

ಇತ್ತೀಚೆಗಷ್ಟೆ ಥಾಣೆಯಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಬೇಕೆಂದು ಬಯಸುವುದಾಗಿ ನಾಯಕ್ ಹೇಳಿದ್ದು, ಸಂಭಾವ್ಯ ಅಧಿಕಾರ ಉಳಿಸುವ ಹೋರಾಟದ ಬಗ್ಗೆ ಸುಳಿವು ನೀಡಿದೆ. ಅವರು ನಗರದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಡೆಸುವ ಯೋಜನೆಗಳನ್ನು ಸಹ ಘೋಷಿಸಿದ್ದರು. ಅವರ ಈ ನಡೆಯು ಬಿಜೆಪಿಯು ಶಿಂಧೆಯ ಪ್ರಾಬಲ್ಯಕ್ಕೆ ಹಿನ್ನಡೆಯುಂಟು ಮಾಡಲು ತಯಾರಿ ನಡೆಸುತ್ತಿದೆ ಎಂಬ ಊಹಾಪೋಹಗಳು ಎದ್ದಿತ್ತು.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಪಾತ್ರ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದು, ಅವರು ಪ್ರಮುಖ ಕ್ಯಾಬಿನೆಟ್ ಸಭೆಗಳಿಗೆ ಆಗಾಗ್ಗೆ ಗೈರುಹಾಜರಾಗುತ್ತಾರೆ ಮತ್ತು ಹಾಜರಿದ್ದರೂ, ಆಗಾಗ್ಗೆ ತಡವಾಗಿ ಬರುತ್ತಾರೆ. “ಜನವರಿ 30 ರಂದು, ಅವರು ವಿಶ್ವ ವ್ಯಾಪಾರ ಕೇಂದ್ರದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಗೆ ಎರಡೂವರೆ ಗಂಟೆ ತಡವಾಗಿ ಬಂದರು” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರ ವಿಧಾನಸಭಾ ಚುನಾವಣೆಯನ್ನು ಶಿಂಧೆ ನೇತೃತ್ವದಲ್ಲಿಯೇ ಎದುರಿಸಲಾಗುವುದು ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಶಿಂಧೆ ಅವರ ಬಣದ ಹಿರಿಯ ಶಾಸಕರನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಈ ಭರವಸೆಯಿಂದ ಉತ್ತೇಜಿತರಾದ ಶಿಂಧೆ, ಪ್ರಚಾರದ ಸಮಯದಲ್ಲಿ ಅಪಾರ ಪ್ರಮಾಣದ ಹಣವನ್ನು ಖರ್ಚು ಮಾಡಿದ್ದಾರೆ ಎಂದು ನಂಬಲಾಗಿದೆ. ಆದಾಗ್ಯೂ, ಚುನಾವಣೆ ಮುಗಿದ ನಂತರ ಅಮಿತ್ ಶಾ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದಾಗಿ ಶಿಂಧೆಗೆ ತಾನು ಮೋಸ ಹೋಗಿದ್ದು ಮತ್ತು ರಾಜಕೀಯವಾಗಿ ಮೂಲೆಗುಂಪಾಗಿದ್ದೇನೆ ಎಂದು ಭಾವಿಸಿದ್ದಾರೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...