Homeಮುಖಪುಟಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! - ಆರೋಪ

ಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! – ಆರೋಪ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಫೋನ್ ಕರೆಗಳ ಮೇಲೆ ನಿಗಾ ಇಡಲಾಗುತ್ತಿದೆ ಮತ್ತು ಕೇಂದ್ರೀಯ ಸಂಸ್ಥೆಗಳು ಅವರ ಚಲನವಲನಗಳ ಮೇಲೆ ನಿಗಾ ಇಡುತ್ತಿವೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಸಿಎಂ ಫಡ್ನವೀಸ್ ಮತ್ತು ಶಿಂಧೆ ನಡುವಿನ ಹದಗೆಟ್ಟ ಸಂಬಂಧಗಳು ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತವಿದ್ದರೂ ಅದನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

“ಶಿಂಧೆ ಮತ್ತು ಅವರ ಸಹಚರರ ಮೇಲೆ ಕಣ್ಗಾವಲು ನಡೆಸಲಾಗುತ್ತಿದೆ ಎಂದು ಶಾಸಕರೊಬ್ಬರು ನನಗೆ ತಿಳಿಸಿದ್ದಾರೆ” ಶಿವಸೇನಾ (ಯುಬಿಟಿ) ಮುಖವಾಣಿ ಸಾಮ್ನಾದಲ್ಲಿ ತಮ್ಮ ವಾರದ ಅಂಕಣ ರೋಖ್ಥೋಕ್‌ನಲ್ಲಿ ಸಂಜಯತ್ ರಾವತ್ ಬರೆದಿದ್ದಾರೆ.

ನವೆಂಬರ್ 2024 ರ ವಿಧಾನಸಭಾ ಚುನಾವಣೆಯ ನಂತರ ತಮ್ಮನ್ನು ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗಿಲ್ಲ ಎಂಬ ವಿಚಾರವನ್ನು ಶಿಂಧೆಗೆ ಒಪ್ಪಿಕೊಳ್ಳಲು ಆಗುತ್ತಿಲ್ಲ. ಅವರು ಆ ಸ್ಥಾನವನ್ನು ಮರಳಿ ಪಡೆಯಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ. ಈ ವಾಸ್ತವವನ್ನು ಸಿಎಂ ಫಡ್ನವೀಸ್ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆಯಲ್ಲಿ, ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು.

“ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ಬೆಂಬಲಿತ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಡುವೆ ಈಗ ನಿಜವಾದ ಸಂವಹನವಿಲ್ಲ. ಇದು ಈಗ ಸಾರ್ವಜನಿಕರಿಗೆ ಮನರಂಜನೆಯ ವಿಷಯವಾಗಿ ಮಾರ್ಪಟ್ಟಿದೆ” ಎಂದು ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

ಶಿಂಧೆ ಅವರ ಭದ್ರಕೋಟೆಯಾದ ಥಾಣೆಯ ಮೇಲಿನ ರಾಜಕೀಯ ನಿಯಂತ್ರಣವನ್ನು ಬಿಜೆಪಿ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ನೆರೆಯ ಪಾಲ್ಘರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಬಿಜೆಪಿ ಸಚಿವ ಗಣೇಶ್ ನಾಯಕ್ ಅವರನ್ನು ನೇಮಕ ಮಾಡಿರುವುದು ಈ ತಂತ್ರದ ಭಾಗವಾಗಿದೆ ರಾವತ್ ಅವರು ಅಭಿಪ್ರಾಯಪಟ್ಟಿದ್ದಾರೆ.

“ಶಿಂಧೆ ಕೇವಲ ಪುರಸಭೆಯ ಕೌನ್ಸಿಲರ್ ಆಗಿದ್ದಾಗ ನಾಯಕ್ ಆಗಲೇ ಮೊದಲ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಶಿಂಧೆಯವರ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ರಾವತ್ ಲೇಖನದಲ್ಲಿ ಬರೆದಿದ್ದಾರೆ.

ಇತ್ತೀಚೆಗಷ್ಟೆ ಥಾಣೆಯಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಬೇಕೆಂದು ಬಯಸುವುದಾಗಿ ನಾಯಕ್ ಹೇಳಿದ್ದು, ಸಂಭಾವ್ಯ ಅಧಿಕಾರ ಉಳಿಸುವ ಹೋರಾಟದ ಬಗ್ಗೆ ಸುಳಿವು ನೀಡಿದೆ. ಅವರು ನಗರದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಡೆಸುವ ಯೋಜನೆಗಳನ್ನು ಸಹ ಘೋಷಿಸಿದ್ದರು. ಅವರ ಈ ನಡೆಯು ಬಿಜೆಪಿಯು ಶಿಂಧೆಯ ಪ್ರಾಬಲ್ಯಕ್ಕೆ ಹಿನ್ನಡೆಯುಂಟು ಮಾಡಲು ತಯಾರಿ ನಡೆಸುತ್ತಿದೆ ಎಂಬ ಊಹಾಪೋಹಗಳು ಎದ್ದಿತ್ತು.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಪಾತ್ರ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದು, ಅವರು ಪ್ರಮುಖ ಕ್ಯಾಬಿನೆಟ್ ಸಭೆಗಳಿಗೆ ಆಗಾಗ್ಗೆ ಗೈರುಹಾಜರಾಗುತ್ತಾರೆ ಮತ್ತು ಹಾಜರಿದ್ದರೂ, ಆಗಾಗ್ಗೆ ತಡವಾಗಿ ಬರುತ್ತಾರೆ. “ಜನವರಿ 30 ರಂದು, ಅವರು ವಿಶ್ವ ವ್ಯಾಪಾರ ಕೇಂದ್ರದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಗೆ ಎರಡೂವರೆ ಗಂಟೆ ತಡವಾಗಿ ಬಂದರು” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರ ವಿಧಾನಸಭಾ ಚುನಾವಣೆಯನ್ನು ಶಿಂಧೆ ನೇತೃತ್ವದಲ್ಲಿಯೇ ಎದುರಿಸಲಾಗುವುದು ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಶಿಂಧೆ ಅವರ ಬಣದ ಹಿರಿಯ ಶಾಸಕರನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಈ ಭರವಸೆಯಿಂದ ಉತ್ತೇಜಿತರಾದ ಶಿಂಧೆ, ಪ್ರಚಾರದ ಸಮಯದಲ್ಲಿ ಅಪಾರ ಪ್ರಮಾಣದ ಹಣವನ್ನು ಖರ್ಚು ಮಾಡಿದ್ದಾರೆ ಎಂದು ನಂಬಲಾಗಿದೆ. ಆದಾಗ್ಯೂ, ಚುನಾವಣೆ ಮುಗಿದ ನಂತರ ಅಮಿತ್ ಶಾ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದಾಗಿ ಶಿಂಧೆಗೆ ತಾನು ಮೋಸ ಹೋಗಿದ್ದು ಮತ್ತು ರಾಜಕೀಯವಾಗಿ ಮೂಲೆಗುಂಪಾಗಿದ್ದೇನೆ ಎಂದು ಭಾವಿಸಿದ್ದಾರೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...