Homeಮುಖಪುಟಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

ಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಇತ್ತೀಚಿನ ಹೇಳಿಕೆಗಳಿಗೆ ರಾಜಕೀಯ ವಿರೋಧ ಹೆಚ್ಚುತ್ತಿವೆ. ಈ ನಡುವೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕಾರ್ಮಿಕರು ಸೋಮವಾರ ಮುಂಬೈನ ಹ್ಯಾಬಿಟೇಟ್ ಸ್ಟುಡಿಯೋಗೆ ಆಗಮಿಸಿದ್ದಾರೆ. ಈ ವೇಳೆ ಅವರು ನಿಯಮ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳದ ಕೆಲವು ಭಾಗಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ ಎಂದು NDTV ವರದಿ ಮಾಡಿದೆ. ಮಹಾರಾಷ್ಟ್ರ ಡಿಸಿಎಂ

ವರದಿಯ ಪ್ರಕಾರ, BMC ಅಧಿಕಾರಿಗಳು ಅಧಿಕೃತ ವಿವರಗಳನ್ನು ನೀಡದ ಕಾರಣ, ಈ ಆಪಾದಿತ ಉಲ್ಲಂಘನೆಗಳ ನಿಖರ ಸ್ವರೂಪ ಸ್ಪಷ್ಟವಾಗಿಲ್ಲ. ಆದಾಗ್ಯೂ, ಹಲವಾರು ಅಧಿಕಾರಿಗಳು ಖಾರ್‌ನಲ್ಲಿರುವ ಯುನಿಕಾಂಟಿನೆಂಟಲ್ ಹೋಟೆಲ್ ಒಳಗೆ ಇರುವ ಸ್ಥಳಕ್ಕೆ ಸುತ್ತಿಗೆಗಳನ್ನು ಹಿಡಿದು ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಈ ಮಧ್ಯೆ, ಶಿಂಧೆ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾದ ತನ್ನ ‘ಗದ್ದಾರ್’ ಅಥವಾ ‘ದೇಶದ್ರೋಹಿ’ ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಗಳು ನಿರ್ದೇಶಿಸಿದರೆ ಮಾತ್ರ ತಾನು ಕ್ಷಮೆಯಾಚಿಸುತ್ತೇನೆ ಎಂದು ಕುನಾಲ್ ಹೇಳಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಮಹಾರಾಷ್ಟ್ರ ಡಿಸಿಎಂ

ಈ ನಡುವೆ ಕುನಾಲ್ ಅವರು ಇತ್ತಿಚೆಗಿನ ಟ್ವೀಟ್‌ನಲ್ಲಿ ಭಾರತ ಸಂವಿಧಾನದ ಪ್ರತಿಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದು, ಮುಂದುವರೆಯಲು ಇರುವ ಒಂದೇ ಒಂದು ದಾರಿ ಎಂದು ಬರೆದುಕೊಂಡಿದ್ದಾರೆ ಅಷ್ಟೆ ಅಲ್ಲದೆ ಮತ್ತೊಂದು ಪೋಸ್ಟ್‌ನಲ್ಲಿ ವಿವಾದಾತ್ಮಕ ವಿಡಿಯೊವನ್ನು ಕೂಡಾ ಅವರು ಪೋಸ್ಟ್ ಮಾಡಿದ್ದಾರೆ.

ತನ್ನ ಹೇಳಿಕೆಗೆ ಕುನಾಲ್ ಕ್ಷಮೆಯಾಚಿಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಗ್ರಹದ ನಡುವೆ ಕುನಾಲ್ ಅವರು ಈ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಮಟ್ಟದ ಹಾಸ್ಯ ಮತ್ತು ಉಪಮುಖ್ಯಮಂತ್ರಿಯನ್ನು ಅವಮಾನಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಶಿಂಧೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೊತೆಗೆ ಶಿಂಧೆ ಅವರನ್ನು “ಗದ್ದಾರ್” (ದೇಶದ್ರೋಹಿ) ಎಂದು ನಿಂದನೆ ಮಾಡಿರುವುದನ್ನು ವಿರೋಧಿಸಿ ಕುನಾಲ್ ಅವರು ಪ್ರದರ್ಶನ ನೀಡಿದ್ದ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೋ ಮತ್ತು ಸ್ಟುಡಿಯೋ ಇರುವ ಹೋಟೆಲ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಪೊಲೀಸರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಇರುವ ಹೋಟೆಲ್ ಯುನಿಕಾಂಟಿನೆಂಟಲ್ ಹೊರಗೆ ಭಾನುವಾರ ರಾತ್ರಿ ಹಲವಾರು ಶಿವಸೇನಾ ಕಾರ್ಯಕರ್ತರು ಜಮಾಯಿಸಿದ್ದರು. ಅವರು ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ಶಿಂಧೆ ಅವರೊಂದಿಗೆ ಕ್ಷಮೆಯಾಚಿಸದಿದ್ದರೆ ಪಕ್ಷದ ಕಾರ್ಯಕರ್ತರು ಕುನಾಲ್‌ ಅವರನ್ನು ಬೀದಿಗಳಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಶಿವಸೇನಾ ಶಾಸಕ ಮುರ್ಜಿ ಪಟೇಲ್ ಹೇಳಿದ್ದಾರೆ.

ಶಿಂಧೆ ಕಾರ್ಯಕರ್ತರು ತಮ್ಮ ಆವರಣವನ್ನು ಧ್ವಂಸ ಮಾಡಿದ ನಂತರ ಸೋಮವಾರ ಕಾರ್ಯಕ್ರಮ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ ಮುಚ್ಚುವುದಾಗಿ ಘೋಷಿಸಿತು. ಈ ಬಗ್ಗೆ ಸೋಮವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸ್ಟುಡಿಯೋ, “ನಮ್ಮನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ವಿಧ್ವಂಸಕ ಕೃತ್ಯಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಚಿಂತಿತರಾಗಿದ್ದೇವೆ ಮತ್ತು ತೀವ್ರವಾಗಿ ಭೀತರಾಗಿದ್ದೇವೆ. ಕಲಾವಿದರ ಅಭಿಪ್ರಾಯಗಳು ಮತ್ತು ಸೃಜನಶೀಲ ಆಯ್ಕೆಗಳಿಗೆ ಅವರೆ ಜವಾಬ್ದಾರರಾಗಿದ್ದು, ಅವರ ಪ್ರದರ್ಶನದ ವಿಷಯದಲ್ಲಿ ತಾನು ಎಂದಿಗೂ ಭಾಗಿಯಾಗಿಲ್ಲ” ಎಂದು ಹೇಳಿದೆ.

“ಆದರೆ ಇತ್ತೀಚಿನ ಘಟನೆಗಳು, ನಾವು ಪ್ರದರ್ಶಕರ ಪ್ರತಿನಿಧಿಗಳಾಗಿರುವಂತೆಯೇ ಪ್ರತಿ ಬಾರಿಯೂ ನಮ್ಮನ್ನು ಹೇಗೆ ದೂಷಿಸಲಾಗುತ್ತದೆ ಮತ್ತು ಗುರಿಯಾಗಿಸಲಾಗುತ್ತದೆ ಎಂಬುದರ ಕುರಿತು ಪುನರ್ವಿಮರ್ಶೆ ಮಾಡುವಂತೆ ಮಾಡಿದೆ. ನಮ್ಮನ್ನು ಮತ್ತು ನಮ್ಮ ಆಸ್ತಿಯನ್ನು ಅಪಾಯಕ್ಕೆ ಸಿಲುಕಿಸದೆ ಮುಕ್ತ ಅಭಿವ್ಯಕ್ತಿಗೆ ವೇದಿಕೆಯನ್ನು ಒದಗಿಸುವ ಅತ್ಯುತ್ತಮ ಮಾರ್ಗವನ್ನು ನಾವು ಕಂಡುಕೊಳ್ಳುವವರೆಗೆ ನಾವು ಸ್ಟುಡಿಯೊ ಮುಚ್ಚುತ್ತಿದ್ದೇವೆ. ಎಲ್ಲಾ ಕಲಾವಿದರು, ಪ್ರೇಕ್ಷಕರು ಮತ್ತು ಪಾಲುದಾರರನ್ನು ಚರ್ಚಿಸಲು ಮತ್ತು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಾವು ಆಹ್ವಾನಿಸುತ್ತೇವೆ. ಪ್ರದರ್ಶಕರ ಹಕ್ಕುಗಳನ್ನು ಗೌರವಿಸಲು ನಿಮ್ಮ ಮಾರ್ಗದರ್ಶನವನ್ನು ಕೋರುತ್ತೇವೆ” ಎಂದು ಅದರ ಟಿಪ್ಪಣಿ ಹೇಳಿದೆ.

ಸೋಮವಾರ ಹಾಕಿದ್ದ ಪೋಸ್ಟ್‌ನಲ್ಲಿ “ಕುನಾಲ್ ಕಾಮ್ರಾ ಅವರ ಇತ್ತೀಚಿನ ವೀಡಿಯೊ ತಯಾರಿಕೆಯಲ್ಲಿ ಹ್ಯಾಬಿಟ್ಯಾಟ್ ಭಾಗಿಯಾಗಿಲ್ಲ. ಅದು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ನಾವು ಅನುಮೋದಿಸುವುದಿಲ್ಲ” ಎಂದು ಅದು ಹೇಳಿತ್ತು. ಕುನಾಲ್‌ ಅವರ ಪ್ರದರ್ಶನ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ, ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಪ್ರದರ್ಶನವನ್ನು ಚಿತ್ರೀಕರಿಸಿದ್ದ ಅದೇ ಸ್ಥಳವಾಗಿದ್ದು, ಕಳೆದ ತಿಂಗಳು ದೊಡ್ಡ ವಿವಾದಕ್ಕೆ ಈ ಸ್ಥಳ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...