Homeಮುಖಪುಟಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

ಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಇತ್ತೀಚಿನ ಹೇಳಿಕೆಗಳಿಗೆ ರಾಜಕೀಯ ವಿರೋಧ ಹೆಚ್ಚುತ್ತಿವೆ. ಈ ನಡುವೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕಾರ್ಮಿಕರು ಸೋಮವಾರ ಮುಂಬೈನ ಹ್ಯಾಬಿಟೇಟ್ ಸ್ಟುಡಿಯೋಗೆ ಆಗಮಿಸಿದ್ದಾರೆ. ಈ ವೇಳೆ ಅವರು ನಿಯಮ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳದ ಕೆಲವು ಭಾಗಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ ಎಂದು NDTV ವರದಿ ಮಾಡಿದೆ. ಮಹಾರಾಷ್ಟ್ರ ಡಿಸಿಎಂ

ವರದಿಯ ಪ್ರಕಾರ, BMC ಅಧಿಕಾರಿಗಳು ಅಧಿಕೃತ ವಿವರಗಳನ್ನು ನೀಡದ ಕಾರಣ, ಈ ಆಪಾದಿತ ಉಲ್ಲಂಘನೆಗಳ ನಿಖರ ಸ್ವರೂಪ ಸ್ಪಷ್ಟವಾಗಿಲ್ಲ. ಆದಾಗ್ಯೂ, ಹಲವಾರು ಅಧಿಕಾರಿಗಳು ಖಾರ್‌ನಲ್ಲಿರುವ ಯುನಿಕಾಂಟಿನೆಂಟಲ್ ಹೋಟೆಲ್ ಒಳಗೆ ಇರುವ ಸ್ಥಳಕ್ಕೆ ಸುತ್ತಿಗೆಗಳನ್ನು ಹಿಡಿದು ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಈ ಮಧ್ಯೆ, ಶಿಂಧೆ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾದ ತನ್ನ ‘ಗದ್ದಾರ್’ ಅಥವಾ ‘ದೇಶದ್ರೋಹಿ’ ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಗಳು ನಿರ್ದೇಶಿಸಿದರೆ ಮಾತ್ರ ತಾನು ಕ್ಷಮೆಯಾಚಿಸುತ್ತೇನೆ ಎಂದು ಕುನಾಲ್ ಹೇಳಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಮಹಾರಾಷ್ಟ್ರ ಡಿಸಿಎಂ

ಈ ನಡುವೆ ಕುನಾಲ್ ಅವರು ಇತ್ತಿಚೆಗಿನ ಟ್ವೀಟ್‌ನಲ್ಲಿ ಭಾರತ ಸಂವಿಧಾನದ ಪ್ರತಿಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದು, ಮುಂದುವರೆಯಲು ಇರುವ ಒಂದೇ ಒಂದು ದಾರಿ ಎಂದು ಬರೆದುಕೊಂಡಿದ್ದಾರೆ ಅಷ್ಟೆ ಅಲ್ಲದೆ ಮತ್ತೊಂದು ಪೋಸ್ಟ್‌ನಲ್ಲಿ ವಿವಾದಾತ್ಮಕ ವಿಡಿಯೊವನ್ನು ಕೂಡಾ ಅವರು ಪೋಸ್ಟ್ ಮಾಡಿದ್ದಾರೆ.

ತನ್ನ ಹೇಳಿಕೆಗೆ ಕುನಾಲ್ ಕ್ಷಮೆಯಾಚಿಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಗ್ರಹದ ನಡುವೆ ಕುನಾಲ್ ಅವರು ಈ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಮಟ್ಟದ ಹಾಸ್ಯ ಮತ್ತು ಉಪಮುಖ್ಯಮಂತ್ರಿಯನ್ನು ಅವಮಾನಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಶಿಂಧೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೊತೆಗೆ ಶಿಂಧೆ ಅವರನ್ನು “ಗದ್ದಾರ್” (ದೇಶದ್ರೋಹಿ) ಎಂದು ನಿಂದನೆ ಮಾಡಿರುವುದನ್ನು ವಿರೋಧಿಸಿ ಕುನಾಲ್ ಅವರು ಪ್ರದರ್ಶನ ನೀಡಿದ್ದ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೋ ಮತ್ತು ಸ್ಟುಡಿಯೋ ಇರುವ ಹೋಟೆಲ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಪೊಲೀಸರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಇರುವ ಹೋಟೆಲ್ ಯುನಿಕಾಂಟಿನೆಂಟಲ್ ಹೊರಗೆ ಭಾನುವಾರ ರಾತ್ರಿ ಹಲವಾರು ಶಿವಸೇನಾ ಕಾರ್ಯಕರ್ತರು ಜಮಾಯಿಸಿದ್ದರು. ಅವರು ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ಶಿಂಧೆ ಅವರೊಂದಿಗೆ ಕ್ಷಮೆಯಾಚಿಸದಿದ್ದರೆ ಪಕ್ಷದ ಕಾರ್ಯಕರ್ತರು ಕುನಾಲ್‌ ಅವರನ್ನು ಬೀದಿಗಳಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಶಿವಸೇನಾ ಶಾಸಕ ಮುರ್ಜಿ ಪಟೇಲ್ ಹೇಳಿದ್ದಾರೆ.

ಶಿಂಧೆ ಕಾರ್ಯಕರ್ತರು ತಮ್ಮ ಆವರಣವನ್ನು ಧ್ವಂಸ ಮಾಡಿದ ನಂತರ ಸೋಮವಾರ ಕಾರ್ಯಕ್ರಮ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ ಮುಚ್ಚುವುದಾಗಿ ಘೋಷಿಸಿತು. ಈ ಬಗ್ಗೆ ಸೋಮವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸ್ಟುಡಿಯೋ, “ನಮ್ಮನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ವಿಧ್ವಂಸಕ ಕೃತ್ಯಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಚಿಂತಿತರಾಗಿದ್ದೇವೆ ಮತ್ತು ತೀವ್ರವಾಗಿ ಭೀತರಾಗಿದ್ದೇವೆ. ಕಲಾವಿದರ ಅಭಿಪ್ರಾಯಗಳು ಮತ್ತು ಸೃಜನಶೀಲ ಆಯ್ಕೆಗಳಿಗೆ ಅವರೆ ಜವಾಬ್ದಾರರಾಗಿದ್ದು, ಅವರ ಪ್ರದರ್ಶನದ ವಿಷಯದಲ್ಲಿ ತಾನು ಎಂದಿಗೂ ಭಾಗಿಯಾಗಿಲ್ಲ” ಎಂದು ಹೇಳಿದೆ.

“ಆದರೆ ಇತ್ತೀಚಿನ ಘಟನೆಗಳು, ನಾವು ಪ್ರದರ್ಶಕರ ಪ್ರತಿನಿಧಿಗಳಾಗಿರುವಂತೆಯೇ ಪ್ರತಿ ಬಾರಿಯೂ ನಮ್ಮನ್ನು ಹೇಗೆ ದೂಷಿಸಲಾಗುತ್ತದೆ ಮತ್ತು ಗುರಿಯಾಗಿಸಲಾಗುತ್ತದೆ ಎಂಬುದರ ಕುರಿತು ಪುನರ್ವಿಮರ್ಶೆ ಮಾಡುವಂತೆ ಮಾಡಿದೆ. ನಮ್ಮನ್ನು ಮತ್ತು ನಮ್ಮ ಆಸ್ತಿಯನ್ನು ಅಪಾಯಕ್ಕೆ ಸಿಲುಕಿಸದೆ ಮುಕ್ತ ಅಭಿವ್ಯಕ್ತಿಗೆ ವೇದಿಕೆಯನ್ನು ಒದಗಿಸುವ ಅತ್ಯುತ್ತಮ ಮಾರ್ಗವನ್ನು ನಾವು ಕಂಡುಕೊಳ್ಳುವವರೆಗೆ ನಾವು ಸ್ಟುಡಿಯೊ ಮುಚ್ಚುತ್ತಿದ್ದೇವೆ. ಎಲ್ಲಾ ಕಲಾವಿದರು, ಪ್ರೇಕ್ಷಕರು ಮತ್ತು ಪಾಲುದಾರರನ್ನು ಚರ್ಚಿಸಲು ಮತ್ತು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಾವು ಆಹ್ವಾನಿಸುತ್ತೇವೆ. ಪ್ರದರ್ಶಕರ ಹಕ್ಕುಗಳನ್ನು ಗೌರವಿಸಲು ನಿಮ್ಮ ಮಾರ್ಗದರ್ಶನವನ್ನು ಕೋರುತ್ತೇವೆ” ಎಂದು ಅದರ ಟಿಪ್ಪಣಿ ಹೇಳಿದೆ.

ಸೋಮವಾರ ಹಾಕಿದ್ದ ಪೋಸ್ಟ್‌ನಲ್ಲಿ “ಕುನಾಲ್ ಕಾಮ್ರಾ ಅವರ ಇತ್ತೀಚಿನ ವೀಡಿಯೊ ತಯಾರಿಕೆಯಲ್ಲಿ ಹ್ಯಾಬಿಟ್ಯಾಟ್ ಭಾಗಿಯಾಗಿಲ್ಲ. ಅದು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ನಾವು ಅನುಮೋದಿಸುವುದಿಲ್ಲ” ಎಂದು ಅದು ಹೇಳಿತ್ತು. ಕುನಾಲ್‌ ಅವರ ಪ್ರದರ್ಶನ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ, ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಪ್ರದರ್ಶನವನ್ನು ಚಿತ್ರೀಕರಿಸಿದ್ದ ಅದೇ ಸ್ಥಳವಾಗಿದ್ದು, ಕಳೆದ ತಿಂಗಳು ದೊಡ್ಡ ವಿವಾದಕ್ಕೆ ಈ ಸ್ಥಳ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...