Homeಮುಖಪುಟಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

ಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಇತ್ತೀಚಿನ ಹೇಳಿಕೆಗಳಿಗೆ ರಾಜಕೀಯ ವಿರೋಧ ಹೆಚ್ಚುತ್ತಿವೆ. ಈ ನಡುವೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕಾರ್ಮಿಕರು ಸೋಮವಾರ ಮುಂಬೈನ ಹ್ಯಾಬಿಟೇಟ್ ಸ್ಟುಡಿಯೋಗೆ ಆಗಮಿಸಿದ್ದಾರೆ. ಈ ವೇಳೆ ಅವರು ನಿಯಮ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳದ ಕೆಲವು ಭಾಗಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ ಎಂದು NDTV ವರದಿ ಮಾಡಿದೆ. ಮಹಾರಾಷ್ಟ್ರ ಡಿಸಿಎಂ

ವರದಿಯ ಪ್ರಕಾರ, BMC ಅಧಿಕಾರಿಗಳು ಅಧಿಕೃತ ವಿವರಗಳನ್ನು ನೀಡದ ಕಾರಣ, ಈ ಆಪಾದಿತ ಉಲ್ಲಂಘನೆಗಳ ನಿಖರ ಸ್ವರೂಪ ಸ್ಪಷ್ಟವಾಗಿಲ್ಲ. ಆದಾಗ್ಯೂ, ಹಲವಾರು ಅಧಿಕಾರಿಗಳು ಖಾರ್‌ನಲ್ಲಿರುವ ಯುನಿಕಾಂಟಿನೆಂಟಲ್ ಹೋಟೆಲ್ ಒಳಗೆ ಇರುವ ಸ್ಥಳಕ್ಕೆ ಸುತ್ತಿಗೆಗಳನ್ನು ಹಿಡಿದು ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಈ ಮಧ್ಯೆ, ಶಿಂಧೆ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾದ ತನ್ನ ‘ಗದ್ದಾರ್’ ಅಥವಾ ‘ದೇಶದ್ರೋಹಿ’ ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಗಳು ನಿರ್ದೇಶಿಸಿದರೆ ಮಾತ್ರ ತಾನು ಕ್ಷಮೆಯಾಚಿಸುತ್ತೇನೆ ಎಂದು ಕುನಾಲ್ ಹೇಳಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಮಹಾರಾಷ್ಟ್ರ ಡಿಸಿಎಂ

ಈ ನಡುವೆ ಕುನಾಲ್ ಅವರು ಇತ್ತಿಚೆಗಿನ ಟ್ವೀಟ್‌ನಲ್ಲಿ ಭಾರತ ಸಂವಿಧಾನದ ಪ್ರತಿಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದು, ಮುಂದುವರೆಯಲು ಇರುವ ಒಂದೇ ಒಂದು ದಾರಿ ಎಂದು ಬರೆದುಕೊಂಡಿದ್ದಾರೆ ಅಷ್ಟೆ ಅಲ್ಲದೆ ಮತ್ತೊಂದು ಪೋಸ್ಟ್‌ನಲ್ಲಿ ವಿವಾದಾತ್ಮಕ ವಿಡಿಯೊವನ್ನು ಕೂಡಾ ಅವರು ಪೋಸ್ಟ್ ಮಾಡಿದ್ದಾರೆ.

ತನ್ನ ಹೇಳಿಕೆಗೆ ಕುನಾಲ್ ಕ್ಷಮೆಯಾಚಿಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಗ್ರಹದ ನಡುವೆ ಕುನಾಲ್ ಅವರು ಈ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಮಟ್ಟದ ಹಾಸ್ಯ ಮತ್ತು ಉಪಮುಖ್ಯಮಂತ್ರಿಯನ್ನು ಅವಮಾನಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಶಿಂಧೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೊತೆಗೆ ಶಿಂಧೆ ಅವರನ್ನು “ಗದ್ದಾರ್” (ದೇಶದ್ರೋಹಿ) ಎಂದು ನಿಂದನೆ ಮಾಡಿರುವುದನ್ನು ವಿರೋಧಿಸಿ ಕುನಾಲ್ ಅವರು ಪ್ರದರ್ಶನ ನೀಡಿದ್ದ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೋ ಮತ್ತು ಸ್ಟುಡಿಯೋ ಇರುವ ಹೋಟೆಲ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಪೊಲೀಸರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಇರುವ ಹೋಟೆಲ್ ಯುನಿಕಾಂಟಿನೆಂಟಲ್ ಹೊರಗೆ ಭಾನುವಾರ ರಾತ್ರಿ ಹಲವಾರು ಶಿವಸೇನಾ ಕಾರ್ಯಕರ್ತರು ಜಮಾಯಿಸಿದ್ದರು. ಅವರು ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ಶಿಂಧೆ ಅವರೊಂದಿಗೆ ಕ್ಷಮೆಯಾಚಿಸದಿದ್ದರೆ ಪಕ್ಷದ ಕಾರ್ಯಕರ್ತರು ಕುನಾಲ್‌ ಅವರನ್ನು ಬೀದಿಗಳಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಶಿವಸೇನಾ ಶಾಸಕ ಮುರ್ಜಿ ಪಟೇಲ್ ಹೇಳಿದ್ದಾರೆ.

ಶಿಂಧೆ ಕಾರ್ಯಕರ್ತರು ತಮ್ಮ ಆವರಣವನ್ನು ಧ್ವಂಸ ಮಾಡಿದ ನಂತರ ಸೋಮವಾರ ಕಾರ್ಯಕ್ರಮ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ ಮುಚ್ಚುವುದಾಗಿ ಘೋಷಿಸಿತು. ಈ ಬಗ್ಗೆ ಸೋಮವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸ್ಟುಡಿಯೋ, “ನಮ್ಮನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ವಿಧ್ವಂಸಕ ಕೃತ್ಯಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಚಿಂತಿತರಾಗಿದ್ದೇವೆ ಮತ್ತು ತೀವ್ರವಾಗಿ ಭೀತರಾಗಿದ್ದೇವೆ. ಕಲಾವಿದರ ಅಭಿಪ್ರಾಯಗಳು ಮತ್ತು ಸೃಜನಶೀಲ ಆಯ್ಕೆಗಳಿಗೆ ಅವರೆ ಜವಾಬ್ದಾರರಾಗಿದ್ದು, ಅವರ ಪ್ರದರ್ಶನದ ವಿಷಯದಲ್ಲಿ ತಾನು ಎಂದಿಗೂ ಭಾಗಿಯಾಗಿಲ್ಲ” ಎಂದು ಹೇಳಿದೆ.

“ಆದರೆ ಇತ್ತೀಚಿನ ಘಟನೆಗಳು, ನಾವು ಪ್ರದರ್ಶಕರ ಪ್ರತಿನಿಧಿಗಳಾಗಿರುವಂತೆಯೇ ಪ್ರತಿ ಬಾರಿಯೂ ನಮ್ಮನ್ನು ಹೇಗೆ ದೂಷಿಸಲಾಗುತ್ತದೆ ಮತ್ತು ಗುರಿಯಾಗಿಸಲಾಗುತ್ತದೆ ಎಂಬುದರ ಕುರಿತು ಪುನರ್ವಿಮರ್ಶೆ ಮಾಡುವಂತೆ ಮಾಡಿದೆ. ನಮ್ಮನ್ನು ಮತ್ತು ನಮ್ಮ ಆಸ್ತಿಯನ್ನು ಅಪಾಯಕ್ಕೆ ಸಿಲುಕಿಸದೆ ಮುಕ್ತ ಅಭಿವ್ಯಕ್ತಿಗೆ ವೇದಿಕೆಯನ್ನು ಒದಗಿಸುವ ಅತ್ಯುತ್ತಮ ಮಾರ್ಗವನ್ನು ನಾವು ಕಂಡುಕೊಳ್ಳುವವರೆಗೆ ನಾವು ಸ್ಟುಡಿಯೊ ಮುಚ್ಚುತ್ತಿದ್ದೇವೆ. ಎಲ್ಲಾ ಕಲಾವಿದರು, ಪ್ರೇಕ್ಷಕರು ಮತ್ತು ಪಾಲುದಾರರನ್ನು ಚರ್ಚಿಸಲು ಮತ್ತು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಾವು ಆಹ್ವಾನಿಸುತ್ತೇವೆ. ಪ್ರದರ್ಶಕರ ಹಕ್ಕುಗಳನ್ನು ಗೌರವಿಸಲು ನಿಮ್ಮ ಮಾರ್ಗದರ್ಶನವನ್ನು ಕೋರುತ್ತೇವೆ” ಎಂದು ಅದರ ಟಿಪ್ಪಣಿ ಹೇಳಿದೆ.

ಸೋಮವಾರ ಹಾಕಿದ್ದ ಪೋಸ್ಟ್‌ನಲ್ಲಿ “ಕುನಾಲ್ ಕಾಮ್ರಾ ಅವರ ಇತ್ತೀಚಿನ ವೀಡಿಯೊ ತಯಾರಿಕೆಯಲ್ಲಿ ಹ್ಯಾಬಿಟ್ಯಾಟ್ ಭಾಗಿಯಾಗಿಲ್ಲ. ಅದು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ನಾವು ಅನುಮೋದಿಸುವುದಿಲ್ಲ” ಎಂದು ಅದು ಹೇಳಿತ್ತು. ಕುನಾಲ್‌ ಅವರ ಪ್ರದರ್ಶನ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ, ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಪ್ರದರ್ಶನವನ್ನು ಚಿತ್ರೀಕರಿಸಿದ್ದ ಅದೇ ಸ್ಥಳವಾಗಿದ್ದು, ಕಳೆದ ತಿಂಗಳು ದೊಡ್ಡ ವಿವಾದಕ್ಕೆ ಈ ಸ್ಥಳ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...