Homeಮುಖಪುಟಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

ಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಇತ್ತೀಚಿನ ಹೇಳಿಕೆಗಳಿಗೆ ರಾಜಕೀಯ ವಿರೋಧ ಹೆಚ್ಚುತ್ತಿವೆ. ಈ ನಡುವೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕಾರ್ಮಿಕರು ಸೋಮವಾರ ಮುಂಬೈನ ಹ್ಯಾಬಿಟೇಟ್ ಸ್ಟುಡಿಯೋಗೆ ಆಗಮಿಸಿದ್ದಾರೆ. ಈ ವೇಳೆ ಅವರು ನಿಯಮ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳದ ಕೆಲವು ಭಾಗಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ ಎಂದು NDTV ವರದಿ ಮಾಡಿದೆ. ಮಹಾರಾಷ್ಟ್ರ ಡಿಸಿಎಂ

ವರದಿಯ ಪ್ರಕಾರ, BMC ಅಧಿಕಾರಿಗಳು ಅಧಿಕೃತ ವಿವರಗಳನ್ನು ನೀಡದ ಕಾರಣ, ಈ ಆಪಾದಿತ ಉಲ್ಲಂಘನೆಗಳ ನಿಖರ ಸ್ವರೂಪ ಸ್ಪಷ್ಟವಾಗಿಲ್ಲ. ಆದಾಗ್ಯೂ, ಹಲವಾರು ಅಧಿಕಾರಿಗಳು ಖಾರ್‌ನಲ್ಲಿರುವ ಯುನಿಕಾಂಟಿನೆಂಟಲ್ ಹೋಟೆಲ್ ಒಳಗೆ ಇರುವ ಸ್ಥಳಕ್ಕೆ ಸುತ್ತಿಗೆಗಳನ್ನು ಹಿಡಿದು ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಈ ಮಧ್ಯೆ, ಶಿಂಧೆ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾದ ತನ್ನ ‘ಗದ್ದಾರ್’ ಅಥವಾ ‘ದೇಶದ್ರೋಹಿ’ ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಗಳು ನಿರ್ದೇಶಿಸಿದರೆ ಮಾತ್ರ ತಾನು ಕ್ಷಮೆಯಾಚಿಸುತ್ತೇನೆ ಎಂದು ಕುನಾಲ್ ಹೇಳಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಮಹಾರಾಷ್ಟ್ರ ಡಿಸಿಎಂ

ಈ ನಡುವೆ ಕುನಾಲ್ ಅವರು ಇತ್ತಿಚೆಗಿನ ಟ್ವೀಟ್‌ನಲ್ಲಿ ಭಾರತ ಸಂವಿಧಾನದ ಪ್ರತಿಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದು, ಮುಂದುವರೆಯಲು ಇರುವ ಒಂದೇ ಒಂದು ದಾರಿ ಎಂದು ಬರೆದುಕೊಂಡಿದ್ದಾರೆ ಅಷ್ಟೆ ಅಲ್ಲದೆ ಮತ್ತೊಂದು ಪೋಸ್ಟ್‌ನಲ್ಲಿ ವಿವಾದಾತ್ಮಕ ವಿಡಿಯೊವನ್ನು ಕೂಡಾ ಅವರು ಪೋಸ್ಟ್ ಮಾಡಿದ್ದಾರೆ.

ತನ್ನ ಹೇಳಿಕೆಗೆ ಕುನಾಲ್ ಕ್ಷಮೆಯಾಚಿಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಗ್ರಹದ ನಡುವೆ ಕುನಾಲ್ ಅವರು ಈ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಮಟ್ಟದ ಹಾಸ್ಯ ಮತ್ತು ಉಪಮುಖ್ಯಮಂತ್ರಿಯನ್ನು ಅವಮಾನಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಶಿಂಧೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೊತೆಗೆ ಶಿಂಧೆ ಅವರನ್ನು “ಗದ್ದಾರ್” (ದೇಶದ್ರೋಹಿ) ಎಂದು ನಿಂದನೆ ಮಾಡಿರುವುದನ್ನು ವಿರೋಧಿಸಿ ಕುನಾಲ್ ಅವರು ಪ್ರದರ್ಶನ ನೀಡಿದ್ದ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೋ ಮತ್ತು ಸ್ಟುಡಿಯೋ ಇರುವ ಹೋಟೆಲ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಪೊಲೀಸರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಇರುವ ಹೋಟೆಲ್ ಯುನಿಕಾಂಟಿನೆಂಟಲ್ ಹೊರಗೆ ಭಾನುವಾರ ರಾತ್ರಿ ಹಲವಾರು ಶಿವಸೇನಾ ಕಾರ್ಯಕರ್ತರು ಜಮಾಯಿಸಿದ್ದರು. ಅವರು ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ಶಿಂಧೆ ಅವರೊಂದಿಗೆ ಕ್ಷಮೆಯಾಚಿಸದಿದ್ದರೆ ಪಕ್ಷದ ಕಾರ್ಯಕರ್ತರು ಕುನಾಲ್‌ ಅವರನ್ನು ಬೀದಿಗಳಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಶಿವಸೇನಾ ಶಾಸಕ ಮುರ್ಜಿ ಪಟೇಲ್ ಹೇಳಿದ್ದಾರೆ.

ಶಿಂಧೆ ಕಾರ್ಯಕರ್ತರು ತಮ್ಮ ಆವರಣವನ್ನು ಧ್ವಂಸ ಮಾಡಿದ ನಂತರ ಸೋಮವಾರ ಕಾರ್ಯಕ್ರಮ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ ಮುಚ್ಚುವುದಾಗಿ ಘೋಷಿಸಿತು. ಈ ಬಗ್ಗೆ ಸೋಮವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸ್ಟುಡಿಯೋ, “ನಮ್ಮನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ವಿಧ್ವಂಸಕ ಕೃತ್ಯಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಚಿಂತಿತರಾಗಿದ್ದೇವೆ ಮತ್ತು ತೀವ್ರವಾಗಿ ಭೀತರಾಗಿದ್ದೇವೆ. ಕಲಾವಿದರ ಅಭಿಪ್ರಾಯಗಳು ಮತ್ತು ಸೃಜನಶೀಲ ಆಯ್ಕೆಗಳಿಗೆ ಅವರೆ ಜವಾಬ್ದಾರರಾಗಿದ್ದು, ಅವರ ಪ್ರದರ್ಶನದ ವಿಷಯದಲ್ಲಿ ತಾನು ಎಂದಿಗೂ ಭಾಗಿಯಾಗಿಲ್ಲ” ಎಂದು ಹೇಳಿದೆ.

“ಆದರೆ ಇತ್ತೀಚಿನ ಘಟನೆಗಳು, ನಾವು ಪ್ರದರ್ಶಕರ ಪ್ರತಿನಿಧಿಗಳಾಗಿರುವಂತೆಯೇ ಪ್ರತಿ ಬಾರಿಯೂ ನಮ್ಮನ್ನು ಹೇಗೆ ದೂಷಿಸಲಾಗುತ್ತದೆ ಮತ್ತು ಗುರಿಯಾಗಿಸಲಾಗುತ್ತದೆ ಎಂಬುದರ ಕುರಿತು ಪುನರ್ವಿಮರ್ಶೆ ಮಾಡುವಂತೆ ಮಾಡಿದೆ. ನಮ್ಮನ್ನು ಮತ್ತು ನಮ್ಮ ಆಸ್ತಿಯನ್ನು ಅಪಾಯಕ್ಕೆ ಸಿಲುಕಿಸದೆ ಮುಕ್ತ ಅಭಿವ್ಯಕ್ತಿಗೆ ವೇದಿಕೆಯನ್ನು ಒದಗಿಸುವ ಅತ್ಯುತ್ತಮ ಮಾರ್ಗವನ್ನು ನಾವು ಕಂಡುಕೊಳ್ಳುವವರೆಗೆ ನಾವು ಸ್ಟುಡಿಯೊ ಮುಚ್ಚುತ್ತಿದ್ದೇವೆ. ಎಲ್ಲಾ ಕಲಾವಿದರು, ಪ್ರೇಕ್ಷಕರು ಮತ್ತು ಪಾಲುದಾರರನ್ನು ಚರ್ಚಿಸಲು ಮತ್ತು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಾವು ಆಹ್ವಾನಿಸುತ್ತೇವೆ. ಪ್ರದರ್ಶಕರ ಹಕ್ಕುಗಳನ್ನು ಗೌರವಿಸಲು ನಿಮ್ಮ ಮಾರ್ಗದರ್ಶನವನ್ನು ಕೋರುತ್ತೇವೆ” ಎಂದು ಅದರ ಟಿಪ್ಪಣಿ ಹೇಳಿದೆ.

ಸೋಮವಾರ ಹಾಕಿದ್ದ ಪೋಸ್ಟ್‌ನಲ್ಲಿ “ಕುನಾಲ್ ಕಾಮ್ರಾ ಅವರ ಇತ್ತೀಚಿನ ವೀಡಿಯೊ ತಯಾರಿಕೆಯಲ್ಲಿ ಹ್ಯಾಬಿಟ್ಯಾಟ್ ಭಾಗಿಯಾಗಿಲ್ಲ. ಅದು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ನಾವು ಅನುಮೋದಿಸುವುದಿಲ್ಲ” ಎಂದು ಅದು ಹೇಳಿತ್ತು. ಕುನಾಲ್‌ ಅವರ ಪ್ರದರ್ಶನ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ, ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಪ್ರದರ್ಶನವನ್ನು ಚಿತ್ರೀಕರಿಸಿದ್ದ ಅದೇ ಸ್ಥಳವಾಗಿದ್ದು, ಕಳೆದ ತಿಂಗಳು ದೊಡ್ಡ ವಿವಾದಕ್ಕೆ ಈ ಸ್ಥಳ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...