Homeಮುಖಪುಟಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

ಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

- Advertisement -
- Advertisement -

ಎಲ್ಲಾ ಸಮುದಾಯಗಳ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ಜಾತಿ ಗಣತಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸೊಲ್ಲಾಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ”ಬಿಹಾರ ಸರ್ಕಾರ ಆ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಿತು. ಅದರಂತೆ ನಮ್ಮ ರಾಜ್ಯದಲ್ಲೂ ಜಾತಿ ಗಣತಿ ನಡೆಯಲಿ ಎನ್ನುವುದು ನನ್ನ ಅಭಿಪ್ರಾಯವಿದೆ” ಎಂದು ಪವಾರ್ ಹೇಳಿದ್ದಾರೆ.

”ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಪ್ರಯೋಜನಗಳನ್ನು ನೀಡುವುದರಿಂದ OBC, SC, STಗಳು, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗ ಇತ್ಯಾದಿಗಳ ನಿಖರವಾದ ಜನಸಂಖ್ಯೆಯನ್ನು ನಾವು ತಿಳಿದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ಜಾತಿ ಗಣತಿ ನಡೆಸಬೇಕು” ಎಂದು ಅಜಿತ್ ಪವಾರ್ ಹೇಳಿದರು.

”ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಬಗ್ಗೆ ವಿವರಗಳನ್ನು ಕೇಳಿದ್ದೇವೆ” ಎಂದು ಪವಾರ್ ಹೇಳಿದರು.

”ಸರ್ಕಾರವು ಜಾತಿ ಸಮೀಕ್ಷೆಯನ್ನು ಎಂದಿಗೂ ವಿರೋಧಿಸಿಲ್ಲ ಎನ್ನುವುದಾಗಿ ಫಡ್ನವೀಸ್ ಹೇಳಿದರು. ಬಿಹಾರದಲ್ಲಿ ಬಂದಂತಹ ತೊಂದರೆಗಳು ಇಲ್ಲಿ ಉದ್ಭವಿಸದಂತೆ ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

ಜನವರಿಯಲ್ಲಿ ಪ್ರಾರಂಭವಾದ ಬಿಹಾರ ಸಮೀಕ್ಷೆಯ ಫಲಿತಾಂಶಗಳನ್ನು ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾಗಿದೆ. ಇತರ ಹಿಂದುಳಿದ ವರ್ಗಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯ 63% ಕ್ಕಿಂತ ಹೆಚ್ಚು ಇದ್ದಾರೆ ಎಂದು ಅದು ಬಹಿರಂಗಪಡಿಸಿತು. ಬಿಹಾರದ ಒಟ್ಟು ಜನಸಂಖ್ಯೆಯ 13.07 ಕೋಟಿಗಿಂತ ಸ್ವಲ್ಪ ಹೆಚ್ಚು ಜನಸಂಖ್ಯೆಯಲ್ಲಿ, ಅತ್ಯಂತ ಹಿಂದುಳಿದ ವರ್ಗಗಳು 36% ಅನ್ನು ಒಳಗೊಂಡಿವೆ, ಇದು ಅತಿದೊಡ್ಡ ಸಾಮಾಜಿಕ ವಿಭಾಗವಾಗಿದೆ, ನಂತರ ಇತರ ಹಿಂದುಳಿದ ವರ್ಗಗಳು 27.13% ಜನಸಂಖ್ಯೆ ಇದೆ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಮರಾಠ ಕೋಟಾ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕ: ಪವಾರ್

”ಮರಾಠರಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಬಗ್ಗೆ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿದೆ” ಎಂದು ಪವಾರ್ ಸೋಮವಾರ ಹೇಳಿದ್ದಾರೆ.

”ಸಧ್ಯಕ್ಕೆ ನಮ್ಮ ರಾಜ್ಯದಲ್ಲಿ 62% ಕ್ಕಿಂತ ಹೆಚ್ಚಿನ ಮೀಸಲಾತಿ ಕೋಟಾವನ್ನು ನೀಡುವ ವಿಚಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದೆ. ಅದು ಕಾನೂನುಬದ್ಧವಾಗಿ ಮಾಡಬೇಕಿದೆ” ಎಂದು ಪವಾರ್ ಹೇಳಿದರು.

”ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ-ಪಾಟೀಲ್ ಅವರು ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರವನ್ನು ಕೋರಿದ್ದರೆ, ಒಬಿಸಿಗಳು ಯಾವುದೇ ಸಮುದಾಯವನ್ನು ವರ್ಗಕ್ಕೆ ಸೇರಿಸಬಾರದು ಎಂದು ಒತ್ತಾಯಿಸಿ ಜ್ಞಾಪಕ ಪತ್ರಗಳನ್ನು ಸಲ್ಲಿಸಿದ್ದಾರೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಮೀಸಲಾತಿ ನೀಡಲು ವಿಫಲವಾದರೆ ಅಕ್ಟೋಬರ್ 25 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭಾನುವಾರ ಜಾರಂಗೆ-ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ ಕಿಶೋರ್ ಕುಮಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...