Homeಮುಖಪುಟಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

- Advertisement -
- Advertisement -

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಅಂಕಿ ಅಂಶ ಮತ್ತು ಅದರ ಕರಡು ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳ ಬಗ್ಗೆ ವಿಪಕ್ಷ ಕಾಂಗ್ರೆಸ್‌ ಎತ್ತಿದ್ದ ಆರೋಪಗಳನ್ನು ಚುನಾವಣಾ ಆಯೋಗ ಶನಿವಾರ ತಳ್ಳಿಹಾಕಿದೆ. ಚುನಾವಣೆಯ ಪ್ರತಿ ಹಂತದಲ್ಲೂ ಸ್ಪರ್ಧಿಸುತ್ತಿರುವ ಎಲ್ಲಾ ಪಕ್ಷಗಳು, ಅವರ ಅಭ್ಯರ್ಥಿಗಳು ಮತ್ತು ಏಜೆಂಟರ ಪಾಲ್ಗೊಳ್ಳುವಿಕೆಯೊಂದಿಗೆ ಪಾರದರ್ಶಕ ಚುನಾವಣಾ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಎಂದು ಚುನಾವಣಾ ಆಯೋಗವು ಕಾಂಗ್ರೆಸ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ. ಮಹಾರಾಷ್ಟ್ರ ಮತದಾನದ

ಈ ಬಗ್ಗೆ ಮತ್ತಷ್ಟು ಚರ್ಚಿಸಲು ಪಕ್ಷದ ನಿಯೋಗವನ್ನು ಚುನಾವಣಾ ಆಯೋಗವು ಡಿಸೆಂಬರ್ 3 ರಂದು ಆಹ್ವಾನಿಸಿದೆ. ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಪ್ರಕ್ರಿಯೆಗಳಿಗೆ ಸಂಬಂಧಿಸಿದ ದತ್ತಾಂಶಗಳಲ್ಲಿ “ಗಂಭೀರ ಅಸಂಗತತೆಗಳು” ಇವೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಜ್ಞಾಪಕ ಪತ್ರವನ್ನು ಸಲ್ಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಂತಿಮ ಮತದಾರರ ಪಟ್ಟಿಯಿಂದ ಪ್ರತಿ ಕ್ಷೇತ್ರದಲ್ಲಿ 10,000 ಕ್ಕೂ ಹೆಚ್ಚು ಮತದಾರರ ಹೆಸರವನ್ನು ಅನಿಯಂತ್ರಿತವಾಗಿ ಅಳಿಸಲಾಗಿದ್ದು, ನಂತರ ಸೇರ್ಪಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿತ್ತು. “ಮಹಾರಾಷ್ಟ್ರದಲ್ಲಿ ಜುಲೈ 2024 ರಿಂದ ನವೆಂಬರ್ 2024 ರ ನಡುವೆ ಮತದಾರರ ಪಟ್ಟಿಗೆ ಅಂದಾಜು 47 ಲಕ್ಷ ಮತದಾರರನ್ನು ಸೇರಿಸಲಾಗಿದೆ” ಎಂದು ಪಕ್ಷವು ತನ್ನ ಜ್ಞಾಪಕ ಪತ್ರದಲ್ಲಿ ಹೇಳಿಕೊಂಡಿದೆ.

ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪು ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು 50 ಅಸೆಂಬ್ಲಿ ಸ್ಥಾನಗಳಲ್ಲಿ 47 ಅನ್ನು ಗೆದ್ದಿದ್ದು, ಅಲ್ಲಿ ಸರಾಸರಿ 50,000 ಮತದಾರರು ಹೆಚ್ಚಾಗಿದ್ದಾರೆ ಎಂದು ಪತ್ರವೂ ಹೇಳಿತ್ತು. ಮಹಾರಾಷ್ಟ್ರ ಮತದಾನದ

ಮಹಾರಾಷ್ಟ್ರದ 288 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು 41 ಕ್ಷೇತ್ರಗಳಲ್ಲಿ ಗೆದ್ದಿದೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿಯ ಪಕ್ಷಗಳಾದ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಒಟ್ಟು 46 ಸ್ಥಾನಗಳನ್ನು ಅಷ್ಟೆ ಗೆದ್ದಿದೆ.

ಶುಕ್ರವಾರ ಸಲ್ಲಿಸಿದ ತನ್ನ ಜ್ಞಾಪಕ ಪತ್ರದಲ್ಲಿ, ಮತದಾನದ ದಿನದಂದು ರಾತ್ರಿ 11.30 ಕ್ಕೆ ಚುನಾವಣಾ ಆಯೋಗವು ಘೋಷಿಸಿದ ಮತದಾನದ ಶೇಕಡಾವಾರು ಪ್ರಮಾಣವು ಸಂಜೆ 5 ಕ್ಕೆ ಘೋಷಿಸಿದ ಅಂತಿಮ ಮತದಾರರ ಶೇಕಡಾವಾರುವರೆಗೆ ವಿವರಿಸಲಾಗದ ಹೆಚ್ಚಳವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಚುನಾವಣಾ ಆಯೋಗದಿಂದ ವಿವರಣೆಯನ್ನು ಕೇಳಿದೆ.

ನವೆಂಬರ್ 20 ರಂದು, ಮಹಾರಾಷ್ಟ್ರದಲ್ಲಿ ಮತದಾನದ ದಿನ, ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಸಂಜೆ 5 ಗಂಟೆಗೆ 58.22% ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ. ಅದೇ ದಿನ ರಾತ್ರಿ 11.30 ರ ಹೊತ್ತಿಗೆ ಮತದಾನದ ಪ್ರಮಾಣವು 65.02% ಕ್ಕೆ ಏರಿತು ಮತ್ತು ನವೆಂಬರ್ 21 ರ ವೇಳೆಗೆ 66.05% ತಲುಪಿತ್ತು.

“ಈ ವ್ಯತ್ಯಾಸವು ಮಹಾರಾಷ್ಟ್ರದಾದ್ಯಂತ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ ವಿಧಾನದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಸಾಮಾನ್ಯ ಜ್ಞಾನದ ದೃಷ್ಟಿಕೋನದಿಂದ, ಮತದಾನದ ಮುಕ್ತಾಯದ ಗಂಟೆಯಲ್ಲಿ 70 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿರುವುದು ಚುನಾವಣಾ ಇತಿಹಾಸದಲ್ಲಿ ಕೇಳರಿಯದ ಸಂಗತಿಯಾಗಿದೆ.” ಎಂದು ಕಾಂಗ್ರೆಸ್ ಹೇಳಿತ್ತು.

ಇದನ್ನೂ ಓದಿ: ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...