- Advertisement -
- Advertisement -
ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ವಿಮಾನದಲ್ಲಿ ಒಟ್ಟು 6 ಮಂದಿ ಇದ್ದರು. ಈ ಪೈಕಿ ಅಜಿತ್ ಪವಾರ್, ಅವರ ಆಪ್ತ ಕಾರ್ಯದರ್ಶಿ, ಇಬ್ಬರು ಪೈಲಟ್ಗಳು ಮತ್ತು ಒಬ್ಬರು ಕ್ಯಾಬಿನ್ ಕ್ರ್ಯೂ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಜಿತ್ ಪವಾರ್ ಚುನಾವಣಾ ಪ್ರಚಾರಕ್ಕೆ ಬಾರಾಮತಿಗೆ ತೆರಳಿದ್ದರು. ಲ್ಯಾಂಡಿಂಗ್ ವೇಳೆ ವಿಮಾನ ಪತನಗೊಂಡಿದೆ ಎಂದು ವರದಿಗಳು ಹೇಳಿವೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…


