Homeಮುಖಪುಟರಾಜ್ ಠಾಕ್ರೆ, ಸೋಲಿನಿಂದ ಕಲಿತ ಪಾಠವೆ..? ಹೊಸ ಆಟವೆ..?

ರಾಜ್ ಠಾಕ್ರೆ, ಸೋಲಿನಿಂದ ಕಲಿತ ಪಾಠವೆ..? ಹೊಸ ಆಟವೆ..?

- Advertisement -
ಹೆಚ್ಚಿನ ರಾಜಕೀಯ ಪಂಡಿತರು ಮಹಾರಾಷ್ಟ್ರದ ಸ್ಪರ್ಧೆಯಿಂದ ಹೊರಗೆಸೆದಿದ್ದ ರಾಜ್ ಠಾಕ್ರೆ ಮತ್ತೆ ಕಣದಲ್ಲಿದ್ದಾರೆ. ಆದರೆ ಅವರು ಹುಲಿ ವೇಷದ ಜತೆಗೆ ಬರುವ ಕೋವಿಯವನೇ ಅಥವಾ ನಿಜವಾದ ಹುಲಿಯೇ? ಯಾಕೆಂದರೆ ಕಳೆದ ಬಾರಿ 2009ರಲ್ಲಿ ಅಧಿಕಾರಕ್ಕೆ ಬರಲು ನೇರವಾಗಿ ಮತದಾರರನ್ನು ಕೋರುವಷ್ಟು ಆತ್ಮವಿಶ್ವಾಸವನ್ನು ರಾಜ್ ಠಾಕ್ರೆ ಹೊಂದಿದ್ದರು. ಆದರೆ ಈ ಬಾರಿ ಪ್ರತಿಪಕ್ಷದ ಭಾಗವನ್ನಾಗಿ ಮಾಡಿ ಎಂದು ಕೋರುತ್ತಿದ್ದಾರೆ. ಹಾಗಾದರೆ ಬದಲಾಗಿರುವುದು ಏನು?
2009ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ ಠಾಕ್ರೆ ಪಕ್ಷ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್) 13 ಸ್ಥಾನಗಳನ್ನು ಗಳಿಸಿತ್ತು. ಆದರೆ, 2014ರಲ್ಲಿ ಕೇವಲ ಒಂದು ಸ್ಥಾನವನ್ನಷ್ಟೇ ಗಳಿಸಿ ಭಾರೀ ಹೊಡೆತ ತಿಂದಿತ್ತು. ಕಾಲಕ್ರಮೇಣ ಕಾರ್ಯಕರ್ತರು ಪಕ್ಷದ ಕೈಬಿಟ್ಟರು. ಪಕ್ಷ ವಾಸ್ತವ ಸ್ಥಿತಿಯೊಂದಿಗಿನ ಸಂಪರ್ಕ ಕಳೆದುಕೊಂಡಿತು. ಎಂಎನ್‌ಎಸ್ ರಾಜಕೀಯವಾಗಿ ಲೆಕ್ಕಕ್ಕಿಲ್ಲದ ಪಕ್ಷವಾಯಿತು.
‘ಮ.ನ.ಸೇ ರಾಜ್ ಕರ್ನೇವಾಲ’ (ಮನದಿಂದ ರಾಜ್ಯಭಾರ ಮಾಡುವವನು) ಎಂಬ ಸ್ವಯಂ ಘೋಷಣೆಯನ್ನು ಹೊಂದಿರುವ ರಾಜ್ ಠಾಕ್ರೆ ಕಳೆದ ಬಾರಿಯ ವೈಫಲ್ಯದಿಂದ ಚೇತರಿಸಿಕೊಳ್ಳಲು ಈ ಬಾರಿ ಯಾವ ಯೋಜನೆ ಹಾಕಿದ್ದಾರೆ? ಅದೂ ಕೂಡಾ ಕಳೆದ ಬಾರಿ ಗೆದ್ದಿದ್ದ ಏಕೈಕ ಶಾಸಕನೂ ಕಳೆದ ತಿಂಗಳು ಶಿವಸೇನೆಗೆ ಹಾರಿರುವಾಗ, ತಾಂತ್ರಿಕವಾಗಿ ಅವರ ಪಕ್ಷಕ್ಕೆ ಶಾಸಕರೂ ಇಲ್ಲ, ಸಂಸದರೂ ಇಲ್ಲ. ಬೃಹತ್ ಮುಂಬಯಿ ಮಹಾನಗರ ಪಾಲಿಕೆಯ ಚುನಾವಣೆಗಳಲ್ಲಿ ಪಕ್ಷವು 2012ರಲ್ಲಿ 27 ಸ್ಥಾನಗಳನ್ನು ಗೆದ್ದಿತ್ತು. 2017ರಲ್ಲಿ ಕೇವಲ ಏಳಕ್ಕೆ ಇಳಿದಿತ್ತು. ಅದರಲ್ಲೂ ಆರು ಮಂದಿ ಪಕ್ಷದ ನಾಯಕರು ಶಿವಸೇನೆಗೆ ಜಿಗಿದರು. 2009ರಿಂದ 2009ರತ ತನಕ  ಪಕ್ಷದ ಅವನತಿ ಈ ರೀತಿಯಲ್ಲಿ ಆಗಿದೆ. ಒಬ್ಬೊಬ್ಬರಾಗಿ ಪಕ್ಷದ ನಾಯಕರು ಮತ್ತು ಕಾರ್ಪೊರೇಟರ್‌ಗಳು ಠಾಕ್ರೆಗೆ ಕೈಕೊಟ್ಟಿದ್ದಾರೆ. ಇದರಿಂದ ಪಕ್ಷವು ಸಾಮಾನ್ಯ ಮತದಾರರೊಂದಿಗೆ ಸಂಪರ್ಕ ಕಳೆದುಕೊಂಡಿದೆ.
ಈ ಬಾರಿ ಎಂ‌ಎನ್ಎಸ್, ಕಾಂಗ್ರೆಸ್ ಜತೆಗೆ ಮೈತ್ರಿ ಹೊಂದಿರುವ ಶರದ್ ಪವಾರ್ ಅವರ ಎನ್‌ಸಿಪಿ ಜತೆ ತಾಂತ್ರಿಕವಾಗಿ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತದೆ. ಉದಾಹರಣೆಗೆ ಪುಣೆಯ ಪ್ರತಿಷ್ಟಿತ ಕೊತ್ರೂಡ್ ಕ್ಷೇತ್ರವನ್ನು ತೆಗೆದುಕೊಳ್ಳಬಹುದು. ಅಲ್ಲಿ ಎನ್‌ಸಿಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಎಂಎನ್‌ಎಸ್ ಪಕ್ಷವನ್ನು ಬೆಂಬಲಿಸುತ್ತಿದೆ.
ಮಾತಿನ ಹುಲಿ..?
ಬಾಳಾ ಠಾಕ್ರೆಯ ಮಾತಿನ ಶೈಲಿ, ಮತ್ತೆ ಮತ್ತೆ ಬೈಗುಳಗಳ ಬಳಕೆ, ಪ್ರಚೋದನಕಾರಿ ಪದಗಳು ಠಾಕ್ರೆಯ ಹಿಂಬಾಲಕರನ್ನು ಹಾಗೆಯೇ ಉಳಿಸಿವೆ. ಆದುದರಿಂದ ಜನರು ‘ಮುಂದೇನು?’ ಎಂದು ಕಾಯುತ್ತಿದ್ದಾರೆ.
ಇತ್ತೀಚೆಗೆ “ಮಾತು ಕೃತಿಗೆ ಇಳಿಯುತ್ತಿಲ್ಲ” ಎಂಬ ಗೊಣಗು ಕಾರ್ಯಕರ್ತರದ್ದಾಗಿದೆ. ಅಧಿಕಾರ ಇಲ್ಲದುದರಿಂದ ಅವರು ಏನನ್ನೂ ಮಾಡಲು ಸಾಧ್ಯವಿರಲಿಲ್ಲ ಎಂದು ಯಾರಾದರೂ ವಾದಿಸಬಹುದು. ಆದರೆ, 2012ರಲ್ಲಿ ಮಹತ್ವದ ನಾಸಿಕ್ ಮಹಾನಗರಪಾಲಿಕೆ ಚುನಾವಣೆಗಳಲ್ಲಿ ಗೆದ್ದಾಗ ಎಂಎನ್‌ಎಸ್‌ಗೆ ಒಂದು ಒಳ್ಳೆಯ ಅವಕಾಶ ಇತ್ತು. ಆದರೆ ಅದು ಉಳಿಯಲಿಲ್ಲ. ಮತದಾರರು ಅದರ ಸದಸ್ಯ ಬಲವನ್ನು 2012ರ 40ರಿಂದ 2017ರಲ್ಲಿ ಕೇವಲ ಐದಕ್ಕಿಳಿಸಿದರು. ಭಾಷಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದರೂ ಠಾಕ್ರೆ ಮಾತುಗಳು ಆಕ್ರೋಶವನ್ನು ಹುಟ್ಟುಹಾಕಿದರೂ ಸಹ ಮತವಾಗಿ ಪರಿವರ್ತನೆ ಆಗುತ್ತಿಲ್ಲ ಎಂಬುದನ್ನು ತೋರಿಸುತ್ತದೆ. ಈ ಸಲ ರಾಜ್ ಠಾಕ್ರೆಯ ತಂತ್ರ ಎಂದರೆ, ತನ್ನ ಧ್ವನಿ, ದೃಶ್ಯ ಮತ್ತು ಭಾಷಣಗಳಿಂದ ಮತದಾರರನ್ನು ಆಕರ್ಷಿಸುವುದು ಮಾತ್ರವಲ್ಲ, ತನ್ನ ಗುರಿಯ ಬಗ್ಗೆ ಕಟುವಾದ ಸತ್ಯವನ್ನು ಹೇಳುವುದು. ಅದೆಂದರೆ…
ಪ್ರತಿಪಕ್ಷದ ಹುಡುಗ..!
“ಅವನು ಪ್ರತಿಪಕ್ಷಗಳ ಮುಖವಾಣಿ” ಎಂಬುದು ರಾಜ್ ಠಾಕ್ರೆಯ ಬಗ್ಗೆ ಬಿಜೆಪಿ ಮತ್ತು ಶಿವಸೇನೆಯ ಟೀಕೆ. ಇದಕ್ಕೆ ಕಾರಣವೆಂದರೆ ಕಳೆದ ಲೋಕಸಭಾ ಚುನಾವಣೆಯ ವೇಳೆ ವೈರಲ್ ಆದ ಅವರ ಭಾಷಣಗಳ ವಿಡಿಯೋಗಳು. ಅವುಗಳು ಧ್ವನಿ ಮತ್ತು ದೃಶ್ಯಗಳ ಮೂಲಕ ಮೋದಿ-ಫಡ್ನವೀಸ್ ಸರಕಾರಗಳ ಸುಳ್ಳುಗಳನ್ನು ಬಯಲಿಗೆಳೆದಿದ್ದವು. ತಾನು ಪ್ರತಿಪಕ್ಷಗಳ ಪರ ಪ್ರಚಾರ ಮಾಡುತ್ತಿಲ್ಲ ಎಂದು ರಾಜ್ ಠಾಕ್ರೆ ಹೇಳಿಕೊಂಡರೂ, ಅವರು ಪ್ರತಿಪಕ್ಷಗಳಿಗೆ ನೀಡಿದ ಹಿಂಬಾಗಿಲ ಬೆಂಬಲವು ಅವರನ್ನು ಮತ್ತೆ ಮುಖ್ಯವಾಹಿನಿಯ ರಾಜಕಾರಣಕ್ಕೆ ತಂದಿತ್ತು. ಇಂತಹ ನಡೆಯನ್ನು ರಾಜ್ ಠಾಕ್ರೆಯಂತವರಿಂದ ಯಾರೂ ನಿರೀಕ್ಷಿಸಿರಲಿಲ್ಲ.
ಗೂಂಡಾ ರಾಜ್..? ನೇತಾ ರಾಜ್..?
“ಲಾತೊಂಕಿ ಭೂತ್ ಬಾತೊಂ ಸೆ ನಹೀ ಮಾನ್‌ತಿ” (ಒದೆಯ ಭೂತ ಮಾತಿಗೆ ಬಗ್ಗದು) ಎಂಬುದು ಎಂಎನ್‌ಎಸ್‌ನ ಘೋಷಣೆಯಾಗಿತ್ತು. ಮುಂಬಯಿಯ ರಸ್ತೆಗಳಲ್ಲಿ ಉತ್ತರ ಭಾರತೀಯರ ವಿರುದ್ಧದ ಹಿಂಸಾಚಾರ ಆತನಿಗೆ “ಗೂಂಡಾ ರಾಜ್” ಎಂಬ ಅಡ್ಡಹೆಸರು ತಂದುಕೊಟ್ಟಿತ್ತು. ಅವರು ಈ ಸಲ ಅದನ್ನು ಮರೆಸಲು ಯತ್ನಿಸುತ್ತಿರುವಂತಿದೆ. ಇತ್ತೀಚಿನ ನಿದರ್ಶನ ಎಂದರೆ, ಅವರು ಜಾರಿ ನಿರ್ದೇಶನಾಲಯ (ಇಡಿ)ದ ಜಾಲದಲ್ಲಿ ಸಿಲುಕಿ ಹಾಕಿಕೊಂಡಿರುವುದು ಅಥವಾ ಸಿಲುಕಿಸಿರುವುದು. ಕಪ್ಪುಹಣವನ್ನು ಬಿಳಿಗೊಳಿಸಿದ ಐಎಲ್ ಎಂಡ್ ಎಫ್‌ಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳಿಸಿತ್ತು. ಆಗ ಎಂಎನ್‌ಎಸ್ ಕಾರ್ಯಕರ್ತರು ಮುಂಬಯಿ ಬಂದ್‌ಗೆ ಕರೆ ನೀಡಿದ್ದರು. ಆದರೆ, ರಾಜ್ ಠಾಕ್ರೆ ಶಾಂತಿ ಕಾಪಾಡುವಂತೆ ಸಾರ್ವಜನಿಕವಾಗಿ ಕರೆ ನೀಡಿ, ಇದು ತನ್ನ ಬಾಯಿ ಮುಚ್ಚಿಸಲು ಕೇಂದ್ರ ಸರಕಾರದ ಇನ್ನೊಂದು ತಂತ್ರ ಎಂದು ಕರೆದಿದ್ದರು. ರಾಜ್ ಠಾಕ್ರೆಯ ಹಿಂಸಾತ್ಮಕ ಹಿನ್ನೆಲೆಯು ಆತನಿಗೆ ಪತ್ರಿಕೆಗಳಲ್ಲಿ ಕೆಟ್ಟ ಹೆಸರು ತಂದುಕೊಟ್ಟಿದ್ದು ಮಾತ್ರವಲ್ಲ, ಆತ ಕೆಲಸ ಮಾಡಬಲ್ಲ ವ್ಯಕ್ತಿಯಾಗಿದ್ದರೂ, ಅಧಿಕಾರದಲ್ಲಿರಲು ಸೂಕ್ತ ವ್ಯಕ್ತಿಯಲ್ಲ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಿತ್ತು.
ರಾಜ್ ಠಾಕ್ರೆಯನ್ನು ಬಿಟ್ಟುಹೋದ ಬಹಳಷ್ಟು ನಾಯಕರ ದೂರು ಎಂದರೆ, ಆತ ಕೈಗೆ ಸಿಗುವುದಿಲ್ಲ ಎಂಬುದಾಗಿತ್ತು. ಕಳೆದ ಲೋಕಸಭಾ ಚುನಾವಣೆಯ ವೇಳೆ ಆತನ ‘ಬಿಗಿತ’ವೇ ಲೋಕಸಭಾ ಚುನಾವಣೆ ವೇಳೆಗೆ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದಿಂದ ಎಂಎನ್‌ಎಸ್ ಪಕ್ಷವನ್ನು ಹೊರಗಿಡಲಾಗಿತ್ತು. ಆದರೆ, ಈಗ ಎನ್‌ಸಿಪಿ ಜತೆ ಮೈತ್ರಿ ಮತ್ತು ಬಿಜೆಪಿ-ಶಿವಸೇನೆಯ ವಿರುದ್ಧ ವಾಗ್ದಾಳಿ, ಅವರ ಮನೋಭಾವ ಬದಲಾಗಿದೆ ಎಂಬುದನ್ನು ತೋರಿಸುತ್ತದೆ.
ತಡವಾಯಿತೆ..?
ಹಿಂದಿನ ಲೋಕಸಭಾ ಚುನಾವಣೆಯ ವೇಳೆಯೂ, ಈಗಿನ ವಿಧಾನಸಭಾ ಚುನಾವಣೆಯ ವೇಳೆಯೂ ಅವರು, ನಿಲ್ಲುತ್ತಾರೋ ಇಲ್ಲವೋ ಎಂಬ ಹಂತದಲ್ಲಿ ಕಣಕ್ಕಿಳಿದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೂ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೂಡಾ ಎರಡೇ ವಾರಗಳ ಹಿಂದೆ ಬಂತು. ಆಗಲೇ ಕಾಂಗ್ರೆಸ್-ಎನ್‌ಸಿಪಿ ಮತ್ತು ಬಿಜೆಪಿ-ಶಿವಸೇನಾ ಮೈತ್ರಿಕೂಟಗಳು ಪ್ರಚಾರ ಆರಂಭಿಸಿದ್ದವು!
ಇದು ಕಾರ್ಯಕರ್ತರಿಗೆ ಕೂಡಾ ಸಿದ್ಧತೆಗೆ ಕಡಿಮೆ ಸಮಯ ಕೊಟ್ಟರೂ, ಅವರು ಕಳೆದ ಚುನಾವಣೆಯಲ್ಲಿ ಮಾಡಿದಂತೆ ಮೋದಿ-ಶಾ ದುಷ್ಟಕೂಟದ ಬಗ್ಗೆ ತನ್ನ ಭಾಷಣಗಳ ಮೂಲಕ ದಾಳಿ ನಡೆಸುತ್ತಾ, ತಾನು ಹಿಂದಿನಿಂದಲೂ ಇದಕ್ಕೆ ಸಿದ್ಧನಾಗಿದ್ದೆ ಎಂದು ತೋರಿಸುತ್ತಿದ್ದಾರೆ. ಏನೇ ಇದ್ದರೂ ಮಹಾರಾಷ್ಟ್ರ ರಾಜಕಾರಣದಲ್ಲಿ ಮಾತಿನ ಬಲ ಇರುವ ಒಬ್ಬ ‘ಠಾಕ್ರೆ’ಯನ್ನು ಕಡೆಗಣಿಸುವಂತಿಲ್ಲ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...