Homeಮುಖಪುಟಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಉತ್ತರ ಕ್ಷೇತ್ರದಲ್ಲಿ 33 ಅಭ್ಯರ್ಥಿಗಳು ಕಣದಲ್ಲಿದ್ದು, ಇದು ಅತೀ ಹೆಚ್ಚು ಅಭ್ಯರ್ಥಿಗಳು ಇರುವ ಕ್ಷೇತ್ರ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಹೇಳಿವೆ. ಅದಾಗ್ಯೂ, ರಾಜ್ಯದ ನಂದೂರ್ಬಾರ್ ಜಿಲ್ಲೆಯ ಶಾಹದಾ ಅತ್ಯಂತ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ್ದು, ಕ್ಷೇತ್ರದಲ್ಲು ಕೇವಲ ಮೂವರು ಅಭ್ಯರ್ಥಿಗಳು  ಮಾತ್ರ ಕಣದಲ್ಲಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ, ರಾಜ್ಯದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗ ಹೇಳಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 30 ರಂದು ನವೀಕರಿಸಿದ ಮತದಾರರ ಪಟ್ಟಿಯ ಪ್ರಕಾರ, ರಾಜ್ಯದಲ್ಲಿ 5,00,22,739 ಪುರುಷರು ಮತ್ತು 4,49,96,279 ಮಹಿಳೆಯರು ಸೇರಿದಂತೆ ಒಟ್ಟು 9,70,25,119 ಮತದಾರರಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ 9.7 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿದೆ, ಅವರಲ್ಲಿ 22,22,704 ಮಂದಿ 18-19 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಚುನಾವಣಾ ಆಯೋಗದ (EC) ಅಧಿಕಾರಿಯೊಬ್ಬರು ಮಂಗಳವಾರ ನವೀಕರಿಸಿದ ಮತದಾರರ ಪಟ್ಟಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯದಲ್ಲಿ 6,101 ಟ್ರಾನ್ಸ್‌ಜೆಂಡರ್ ಮತದಾರರು, 6.41 ಲಕ್ಷ ವಿಶೇಷ ಚೇತನ ಮತ್ತು 1.16 ಲಕ್ಷ ಸೇವಾ ಮತದಾರರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಚೊಕ್ಕಲಿಂಗಂ ಹೇಳಿದ್ದಾರೆ.

ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ಬಹುಮಹಡಿ ಮತ್ತು ವಸತಿ ಸಂಕೀರ್ಣಗಳಲ್ಲಿ 1,181 ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ ಕೊಳೆಗೇರಿಗಳಲ್ಲಿ 210 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಇಒ ತಿಳಿಸಿದರು.

1,00,186 ಮತಗಟ್ಟೆಗಳಿಗೆ 2,21,600 ಬ್ಯಾಲೆಟ್ ಯೂನಿಟ್‌ಗಳು, 1,21,886 ಕಂಟ್ರೋಲ್ ಯೂನಿಟ್‌ಗಳು ಮತ್ತು 1,32,094 ವಿವಿಪ್ಯಾಟ್‌ಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ 142 ಸಾಮಾನ್ಯ ವೀಕ್ಷಕರು, 41 ಪೊಲೀಸ್ ವೀಕ್ಷಕರು ಮತ್ತು 71 ಮೇಲ್ವಿಚಾರಕರು ಇದ್ದಾರೆ ಎಂದು ಸಿಇಒ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...