ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪತಿ ಫಹಾದ್ ಅಹ್ಮದ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಸ್ವರಾ ಭಾಸ್ಕರ್, ಇವಿಎಂ ದುರ್ಬಳಕೆ ಮತ್ತು ಯಂತ್ರಗಳ ಬ್ಯಾಟರಿ ಮಟ್ಟವನ್ನು ಪ್ರಶ್ನಿಸಿದ್ದಾರೆ. ಅನುಶಕ್ತಿ ನಗರದಿಂದ ಎನ್ಸಿಪಿ (ಎಸ್ಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಹಾದ್ ಅವರು ಎನ್ಸಿಪಿ (ಅಜಿತ್ ಪವಾರ್)ಬಣದ ನವಾಬ್ ಮಲಿಕ್ ಅವರ ಪುತ್ರಿ ಸನಾ ಮಲಿಕ್ ವಿರುದ್ಧ ಸೋತಿದ್ದಾರೆ. ಪತಿಯ ಸೋಲಿಗೆ
ಅನುಶಕ್ತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಫಹಾದ್ ಅಹ್ಮದ್ ಅವರು ನಿರಂತರ ಮುನ್ನಡೆಯಲ್ಲಿದ್ದರು. ಆದರೆ, 99% ಬ್ಯಾಟರಿ ಚಾರ್ಜ್ ಇದ್ದ ಇವಿಎಂಗಳನ್ನು ತೆರೆದ ನಂತರ ಅವರು ಹಠಾತ್ತನೆ ಹಿನ್ನಡೆ ಅನುಭವಿಸಿದ್ದಾರೆ ಎಂದು ಎಕ್ಸ್ನಲ್ಲಿ ಸ್ವರ ಭಾಸ್ಕರ್ ಆರೋಪಿಸಿದ್ದಾರೆ. ಪತಿಯ ಸೋಲಿಗೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಇಡೀ ದಿನ ಮತ ಚಲಾವಣೆ ಆಗಿರುವ ಯಂತ್ರಗಳು 99% ಬ್ಯಾಟರಿ ಚಾರ್ಜ್ ಇರುವುದು ಹೇಗೆ ಸಾಧ್ಯ? 99% ಚಾರ್ಜ್ ಇರುವ ಎಲ್ಲಾ ಬ್ಯಾಟರಿಗಳು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಾಕೆ ಮತಗಳನ್ನು ನೀಡುತ್ತವೆ” ಎಂದು ಸ್ವರ ಭಾಸ್ಕರ್ ಪ್ರಶ್ನಿಸಿದ್ದಾರೆ.
In #AnushaktiNagar vidhaan sabha after a steady lead by @FahadZirarAhmad of NCP-SP.. round 17, 18, 19 suddenly 99% battery charger EVMs are opened and BJP supported NCP-Ajit Pawar candidate takes lead. How can machines that have been voted on ALL day long have 99% charged… https://t.co/GknxDWOb5v
— Swara Bhasker (@ReallySwara) November 23, 2024
ಅಭ್ಯರ್ಥಿ ಫಹಾದ್ ಅಹ್ಮದ್ ಕೂಡ ಇದೇ ರೀತಿಯ ಆರೋಪಗಳನ್ನು ಎತ್ತಿದ್ದು, ಎಣಿಕೆಯ 16 ನೇ ಸುತ್ತಿನವರೆಗೂ ತಾನು ಸ್ಥಿರ ಮುನ್ನಡೆ ಕಾಯ್ದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ನಂತರ 99% ಬ್ಯಾಟರಿ ಚಾರ್ಜ್ ಇರುವ ಇವಿಎಂಗಳನ್ನು ಬಳಸಲಾಯಿತು. ಇದು ತನ್ನ ಎದುರಾಳಿಗೆ ಮುನ್ನಡೆ ಸಾಧಿಸಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಆರೋಪಿಸಿದ್ದಾರೆ.
ಫಹಾದ್ ಅಹ್ಮದ್ ಅವರು 16, 17, 18 ಮತ್ತು 19 ರ ಸುತ್ತುಗಳ ಮರುಎಣಿಕೆಗೆ ಒತ್ತಾಯಿಸಿದ್ದಾರೆ. ಅನುಶಕ್ತಿ ನಗರವು ಮುಂಬೈ ದಕ್ಷಿಣ-ಮಧ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.
ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್ಎಸ್ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್ಪಿ ಮತ್ತು ಆರ್ಎಸ್ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.
ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?
ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?


