Homeಮುಖಪುಟಮಹಾರಾಷ್ಟ್ರ ಚುನಾವಣೆ | ಪತಿಯ ಸೋಲಿಗೆ ಇವಿಎಂ ಕಾರಣ ಎಂದ ನಟಿ ಸ್ವರಾ ಭಾಸ್ಕರ್

ಮಹಾರಾಷ್ಟ್ರ ಚುನಾವಣೆ | ಪತಿಯ ಸೋಲಿಗೆ ಇವಿಎಂ ಕಾರಣ ಎಂದ ನಟಿ ಸ್ವರಾ ಭಾಸ್ಕರ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪತಿ ಫಹಾದ್ ಅಹ್ಮದ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಸ್ವರಾ ಭಾಸ್ಕರ್, ಇವಿಎಂ ದುರ್ಬಳಕೆ ಮತ್ತು ಯಂತ್ರಗಳ ಬ್ಯಾಟರಿ ಮಟ್ಟವನ್ನು ಪ್ರಶ್ನಿಸಿದ್ದಾರೆ. ಅನುಶಕ್ತಿ ನಗರದಿಂದ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಹಾದ್ ಅವರು ಎನ್‌ಸಿಪಿ (ಅಜಿತ್ ಪವಾರ್)ಬಣದ ನವಾಬ್ ಮಲಿಕ್ ಅವರ ಪುತ್ರಿ ಸನಾ ಮಲಿಕ್ ವಿರುದ್ಧ ಸೋತಿದ್ದಾರೆ. ಪತಿಯ ಸೋಲಿಗೆ

ಅನುಶಕ್ತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಫಹಾದ್ ಅಹ್ಮದ್ ಅವರು ನಿರಂತರ ಮುನ್ನಡೆಯಲ್ಲಿದ್ದರು. ಆದರೆ, 99% ಬ್ಯಾಟರಿ ಚಾರ್ಜ್ ಇದ್ದ ಇವಿಎಂಗಳನ್ನು ತೆರೆದ ನಂತರ ಅವರು ಹಠಾತ್ತನೆ ಹಿನ್ನಡೆ ಅನುಭವಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಸ್ವರ ಭಾಸ್ಕರ್ ಆರೋಪಿಸಿದ್ದಾರೆ. ಪತಿಯ ಸೋಲಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಡೀ ದಿನ ಮತ ಚಲಾವಣೆ ಆಗಿರುವ ಯಂತ್ರಗಳು 99% ಬ್ಯಾಟರಿ ಚಾರ್ಜ್ ಇರುವುದು ಹೇಗೆ ಸಾಧ್ಯ? 99% ಚಾರ್ಜ್ ಇರುವ ಎಲ್ಲಾ ಬ್ಯಾಟರಿಗಳು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಾಕೆ ಮತಗಳನ್ನು ನೀಡುತ್ತವೆ” ಎಂದು ಸ್ವರ ಭಾಸ್ಕರ್ ಪ್ರಶ್ನಿಸಿದ್ದಾರೆ.

 

ಅಭ್ಯರ್ಥಿ ಫಹಾದ್ ಅಹ್ಮದ್ ಕೂಡ ಇದೇ ರೀತಿಯ ಆರೋಪಗಳನ್ನು ಎತ್ತಿದ್ದು, ಎಣಿಕೆಯ 16 ನೇ ಸುತ್ತಿನವರೆಗೂ ತಾನು ಸ್ಥಿರ ಮುನ್ನಡೆ ಕಾಯ್ದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ನಂತರ 99% ಬ್ಯಾಟರಿ ಚಾರ್ಜ್ ಇರುವ ಇವಿಎಂಗಳನ್ನು ಬಳಸಲಾಯಿತು. ಇದು ತನ್ನ ಎದುರಾಳಿಗೆ ಮುನ್ನಡೆ ಸಾಧಿಸಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಆರೋಪಿಸಿದ್ದಾರೆ.

ಫಹಾದ್ ಅಹ್ಮದ್ ಅವರು 16, 17, 18 ಮತ್ತು 19 ರ ಸುತ್ತುಗಳ ಮರುಎಣಿಕೆಗೆ ಒತ್ತಾಯಿಸಿದ್ದಾರೆ. ಅನುಶಕ್ತಿ ನಗರವು ಮುಂಬೈ ದಕ್ಷಿಣ-ಮಧ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್‌ಎಸ್‌ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್‌ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...