Homeಮುಖಪುಟ'ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

- Advertisement -
- Advertisement -

ಇನ್ನೇನು ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಣಾಳಿಕೆಯಲ್ಲಿ “ಹಿಂದೂ ಮಹಾಸಭಾದ ಅಧ್ಯಕ್ಷನಾಗಿದ್ದ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವುದಾಗಿ” ಬಿಜೆಪಿ ಹೇಳಿದೆ. ಇದಕ್ಕೆ ಎಲ್ಲೆಡೆಯಿಂದ ಸಾಕಷ್ಟು ವಿರೋಧ ಕೇಳಿಬಂದಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಸೇರ್ಪಡೆಯಾದ ಈ ವಿಷಯಕ್ಕೆ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಸ್ವಲ್ಪ ಕಟುವಾಗಿಯೇ ವ್ಯಂಗ್ಯವಾಡಿದ್ದಾರೆ. “ದೇಶದ ನಾಗರಿಕರಿಗೆ ಕೊಡುವ ಅತ್ಯುನ್ನತ ಗೌರವ ಪ್ರಶಸ್ತಿ ಭಾರತರತ್ನವನ್ನು ಬೇಕಿದ್ದರೆ ನೇರವಾಗಿ ನಾಥೂರಾಮ್ ಗೋಡ್ಸೆಗೆ ನೀಡಲಿ” ಎಂದು ಟೀಕಿಸಿದ್ದಾರೆ.

ನಾಗ್ಪುರದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮನೀಶ್ ತಿವಾರಿ, ’ಸಾವರ್ಕರ್ ಅವರು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂಬ ಆರೋಪಗಳಿದ್ದವು. ಆದರೆ ನಾಥೂರಾಮ್ ಗೋಡ್ಸೆ ನೇರವಾಗಿಯೇ ಗಾಂಧೀಜಿಯವರನ್ನು ಹತ್ಯೆಗೈದು ಸಿಕ್ಕಿಬಿದ್ದ ಅಪರಾಧಿಯಾಗಿದ್ದಾನೆ. ಈಗ ನಾವು ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಎನ್.ಡಿ.ಎ ಸರ್ಕಾರ ಬೇಕಿದ್ದರೆ ಸಾವರ್ಕರ್ ಬದಲು ನಾಥೂರಾಮ್ ಗೋಡ್ಸೆಗೆ ನೇರವಾಗಿ ಭಾರತರತ್ನ ನೀಡಲಿ’ ಎಂದು ವ್ಯಂಗ್ಯವಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮನೀಶ್ ತಿವಾರಿ, ಬಿಜೆಪಿ ಸರ್ಕಾರ ಭಾರತರತ್ನಕ್ಕೆ ಗೋಡ್ಸೆ ಬದಲಿಗೆ ಸಾವರ್ಕರ್ ನ್ನು ಆಯ್ಕೆ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಗಾಂಧೀಜಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಕ್ಕೆ ಸಾವರ್ಕರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಲಾಗಿತ್ತು ಎಂದು ಬರೆದಿದ್ದಾರೆ.

ಸಾರ್ವರ್ಕರ್‌ ಅಂಡಮಾನ್‌ ಜೈಲಿನಲ್ಲಿ ರಾಜಕೀಯ ಖೈದಿಯಾಗಿದ್ದ ವೇಳೆ ಬ್ರಿಟೀಷರಿಗೆ “ಇನ್ನೆಂದೂ ಸ್ವಾತಂತ್ರ್ಯ ಹೋರಾಟದಲ್ಲಿ ತಪ್ಪೊಪ್ಪಿಗೆ ಬರೆದುಕೊಟ್ಟಿದ್ದ ದ್ರೋಹಿಯಾಗಿದ್ದಾರೆ” ಅಂತವರಿಗೆ ಭಾರತ ರತ್ನ ನೀಡುವ ಮೂಲಕ ಆ ಪ್ರಶಸ್ತಿಗೆ ಅವಮಾನ ಮಾಡುತ್ತಿದ್ದಾರೆ ಎಂದು ನೂರಾರು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಎರಡು ದಿನದ ಹಿಂದಷ್ಟೇ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಕೂಡ ಭಾರತರತ್ನ ವಿಚಾರವಾಗಿ ಮಾತನಾಡಿ, ಸದ್ಯ ನಾಥೂರಾಮ್ ಗೋಡ್ಸೆ ಹೆಸರು ಉಲ್ಲೇಖಿಸಿಲ್ಲ ಎಂದು ಲೇವಡಿ ಮಾಡಿದ್ದರು. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾವರ್ಕರ್ ಬಗ್ಗೆ ಗೊತ್ತಿದೆ. ಗಾಂಧಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪ ಅವರ ಮೇಲಿತ್ತು. ಈಗ ಬಿಜೆಪಿ ಸರ್ಕಾರ ಅಂಥವರಿಗೆ ಭಾರತರತ್ನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಗೋಡ್ಸೆ ಹೆಸರು ಭಾರತರತ್ನಕ್ಕೆ ಆಯ್ಕೆಯಾಗದಿದ್ದರೆ ಸಾಕು ಎಂದು ಕಳವಳ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....