Homeಮುಖಪುಟ'ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

- Advertisement -
- Advertisement -

ಇನ್ನೇನು ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಣಾಳಿಕೆಯಲ್ಲಿ “ಹಿಂದೂ ಮಹಾಸಭಾದ ಅಧ್ಯಕ್ಷನಾಗಿದ್ದ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವುದಾಗಿ” ಬಿಜೆಪಿ ಹೇಳಿದೆ. ಇದಕ್ಕೆ ಎಲ್ಲೆಡೆಯಿಂದ ಸಾಕಷ್ಟು ವಿರೋಧ ಕೇಳಿಬಂದಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಸೇರ್ಪಡೆಯಾದ ಈ ವಿಷಯಕ್ಕೆ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಸ್ವಲ್ಪ ಕಟುವಾಗಿಯೇ ವ್ಯಂಗ್ಯವಾಡಿದ್ದಾರೆ. “ದೇಶದ ನಾಗರಿಕರಿಗೆ ಕೊಡುವ ಅತ್ಯುನ್ನತ ಗೌರವ ಪ್ರಶಸ್ತಿ ಭಾರತರತ್ನವನ್ನು ಬೇಕಿದ್ದರೆ ನೇರವಾಗಿ ನಾಥೂರಾಮ್ ಗೋಡ್ಸೆಗೆ ನೀಡಲಿ” ಎಂದು ಟೀಕಿಸಿದ್ದಾರೆ.

ನಾಗ್ಪುರದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮನೀಶ್ ತಿವಾರಿ, ’ಸಾವರ್ಕರ್ ಅವರು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂಬ ಆರೋಪಗಳಿದ್ದವು. ಆದರೆ ನಾಥೂರಾಮ್ ಗೋಡ್ಸೆ ನೇರವಾಗಿಯೇ ಗಾಂಧೀಜಿಯವರನ್ನು ಹತ್ಯೆಗೈದು ಸಿಕ್ಕಿಬಿದ್ದ ಅಪರಾಧಿಯಾಗಿದ್ದಾನೆ. ಈಗ ನಾವು ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಎನ್.ಡಿ.ಎ ಸರ್ಕಾರ ಬೇಕಿದ್ದರೆ ಸಾವರ್ಕರ್ ಬದಲು ನಾಥೂರಾಮ್ ಗೋಡ್ಸೆಗೆ ನೇರವಾಗಿ ಭಾರತರತ್ನ ನೀಡಲಿ’ ಎಂದು ವ್ಯಂಗ್ಯವಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮನೀಶ್ ತಿವಾರಿ, ಬಿಜೆಪಿ ಸರ್ಕಾರ ಭಾರತರತ್ನಕ್ಕೆ ಗೋಡ್ಸೆ ಬದಲಿಗೆ ಸಾವರ್ಕರ್ ನ್ನು ಆಯ್ಕೆ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಗಾಂಧೀಜಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಕ್ಕೆ ಸಾವರ್ಕರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಲಾಗಿತ್ತು ಎಂದು ಬರೆದಿದ್ದಾರೆ.

ಸಾರ್ವರ್ಕರ್‌ ಅಂಡಮಾನ್‌ ಜೈಲಿನಲ್ಲಿ ರಾಜಕೀಯ ಖೈದಿಯಾಗಿದ್ದ ವೇಳೆ ಬ್ರಿಟೀಷರಿಗೆ “ಇನ್ನೆಂದೂ ಸ್ವಾತಂತ್ರ್ಯ ಹೋರಾಟದಲ್ಲಿ ತಪ್ಪೊಪ್ಪಿಗೆ ಬರೆದುಕೊಟ್ಟಿದ್ದ ದ್ರೋಹಿಯಾಗಿದ್ದಾರೆ” ಅಂತವರಿಗೆ ಭಾರತ ರತ್ನ ನೀಡುವ ಮೂಲಕ ಆ ಪ್ರಶಸ್ತಿಗೆ ಅವಮಾನ ಮಾಡುತ್ತಿದ್ದಾರೆ ಎಂದು ನೂರಾರು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಎರಡು ದಿನದ ಹಿಂದಷ್ಟೇ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಕೂಡ ಭಾರತರತ್ನ ವಿಚಾರವಾಗಿ ಮಾತನಾಡಿ, ಸದ್ಯ ನಾಥೂರಾಮ್ ಗೋಡ್ಸೆ ಹೆಸರು ಉಲ್ಲೇಖಿಸಿಲ್ಲ ಎಂದು ಲೇವಡಿ ಮಾಡಿದ್ದರು. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾವರ್ಕರ್ ಬಗ್ಗೆ ಗೊತ್ತಿದೆ. ಗಾಂಧಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪ ಅವರ ಮೇಲಿತ್ತು. ಈಗ ಬಿಜೆಪಿ ಸರ್ಕಾರ ಅಂಥವರಿಗೆ ಭಾರತರತ್ನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಗೋಡ್ಸೆ ಹೆಸರು ಭಾರತರತ್ನಕ್ಕೆ ಆಯ್ಕೆಯಾಗದಿದ್ದರೆ ಸಾಕು ಎಂದು ಕಳವಳ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...