Homeಮುಖಪುಟಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ 'ಮತ ಕಳ್ಳತನ'ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ...

ಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ ಆಗ್ರಹ

- Advertisement -
- Advertisement -

ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ “ಮತ ಕಳ್ಳತನ” ನಡೆದಿದ್ದು, ಇದನ್ನು ಚುನಾವಣಾ ಆಯೋಗವು  “ಮುಚ್ಚಿಹಾಕುತ್ತಿದೆ”. ಆಯೋಗವು ಚುನಾವಣೆಗೆ ಸಂಬಂಧಿಸಿ ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆ ಸಂದರ್ಭದಲ್ಲಿ ಕಡ್ಡಾಯ ಪರಿಶೀಲನೆ ನಡೆಸಲಾಗಿಲ್ಲ. ಅಲ್ಲದೇ ಆರು ತಿಂಗಳ ಅವಧಿಯಲ್ಲಿ ಸುಮಾರು 29,000 ಮತದಾರರನ್ನು ಸೇರಿಸಲಾಗಿದೆ ಎಂದು ವರದಿಯೊಂದು ಸೂಚಿಸಿದ ನಂತರ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆ.  

ಮಹಾರಾಷ್ಟ್ರ ಚುನಾವಣೆಗಳ ಮೊದಲು 2024ರ ನಂತರದ ಕರಡು ಮತದಾರರ ಪಟ್ಟಿಗಳ ಪ್ರತಿಗಳನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೀಡಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳ ಪ್ರಕಟಣೆಯ ನಡುವೆ 19,27,508ರಷ್ಟು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ತಪ್ಪಾದ ಸೇರ್ಪಡೆಗಳು ಅಥವಾ ಅಳಿಸುವಿಕೆ ಕುರಿತು ಕೇವಲ 89 ಮನವಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. 

ರಾಹುಲ್ ಮತದಾರರ ಪಟ್ಟಿಗಾಗಿ “ಸಂಪೂರ್ಣ ಪಾರದರ್ಶಕತೆ” ಗಾಗಿ ಪದೇ ಪದೇ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಆಯೋಗವು ಮೆಷಿನ್-ರೀಡೆಬಲ್ ಮತದಾರರ ಪಟ್ಟಿಗಳನ್ನು ಬಹಿರಂಗಪಡಿಸಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ನಮ್ಮ ಚುನಾವಣಾ ವ್ಯವಸ್ಥೆಯ ಸಮಗ್ರತೆಯು ಅಧಃಪತನಕ್ಕೆ ತಲುಪಿದೆ. ಇದನ್ನು ಆಡಳಿತ ಪಕ್ಷದ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಅಲ್ಲವಲ್ಲದೆ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ನ್ಯೂಸ್‌ಲಾಂಡ್ರಿ ತನ್ನ ವರದಿಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಆರು ತಿಂಗಳಲ್ಲಿ 29,219 ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಹೇಳಿದೆ. ಇದು 8.25%ರಷ್ಟು ಹೆಚ್ಚಳವಾಗಿದೆ. ಇದು ಕಡ್ಡಾಯ  ಪರಿಶೀಲನೆಗಳಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ 4% ಹೆಚ್ಚಳದ ಮಿತಿಗಿಂತ ಹೆಚ್ಚಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಪರಿಶೀಲನೆಗಳನ್ನು ಮಾಡಲಾಗಿಲ್ಲ ಎಂದು ವರದಿ ಹೇಳಿದೆ.

ಕನಿಷ್ಠ 4,000 ಮತದಾರರಿಗೆ ವಿಳಾಸಗಳಿಲ್ಲ ಎಂದು ವರದಿ ಹೇಳಿದೆ. 70% ಮತಗಟ್ಟೆಗಳಲ್ಲಿ 4%ಕ್ಕಿಂತ ಹೆಚ್ಚು ಮತ ಸೇರ್ಪಡೆಗಳಿದ್ದರೆ, 26 ಮತಗಟ್ಟೆಗಳಲ್ಲಿ 20%ಕ್ಕಿಂತ ಹೆಚ್ಚು ಮತ್ತು ನಾಲ್ಕು ಮತಗಟ್ಟೆಗಳಲ್ಲಿ 40%ಕ್ಕಿಂತ ಹೆಚ್ಚು ಸೇರ್ಪಡೆಗಳಿವೆ ಎಂದು ಅದು ಹೇಳಿದೆ. ಚುನಾವಣಾ ಆಯೋಗವು ಈ ಹೇಳಿಕೆಗಳನ್ನು ನಿರಾಕರಿಸಿದೆ.

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...