Homeಮುಖಪುಟಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ 'ಮತ ಕಳ್ಳತನ'ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ...

ಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ ಆಗ್ರಹ

- Advertisement -
- Advertisement -

ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ “ಮತ ಕಳ್ಳತನ” ನಡೆದಿದ್ದು, ಇದನ್ನು ಚುನಾವಣಾ ಆಯೋಗವು  “ಮುಚ್ಚಿಹಾಕುತ್ತಿದೆ”. ಆಯೋಗವು ಚುನಾವಣೆಗೆ ಸಂಬಂಧಿಸಿ ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆ ಸಂದರ್ಭದಲ್ಲಿ ಕಡ್ಡಾಯ ಪರಿಶೀಲನೆ ನಡೆಸಲಾಗಿಲ್ಲ. ಅಲ್ಲದೇ ಆರು ತಿಂಗಳ ಅವಧಿಯಲ್ಲಿ ಸುಮಾರು 29,000 ಮತದಾರರನ್ನು ಸೇರಿಸಲಾಗಿದೆ ಎಂದು ವರದಿಯೊಂದು ಸೂಚಿಸಿದ ನಂತರ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆ.  

ಮಹಾರಾಷ್ಟ್ರ ಚುನಾವಣೆಗಳ ಮೊದಲು 2024ರ ನಂತರದ ಕರಡು ಮತದಾರರ ಪಟ್ಟಿಗಳ ಪ್ರತಿಗಳನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೀಡಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳ ಪ್ರಕಟಣೆಯ ನಡುವೆ 19,27,508ರಷ್ಟು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ತಪ್ಪಾದ ಸೇರ್ಪಡೆಗಳು ಅಥವಾ ಅಳಿಸುವಿಕೆ ಕುರಿತು ಕೇವಲ 89 ಮನವಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. 

ರಾಹುಲ್ ಮತದಾರರ ಪಟ್ಟಿಗಾಗಿ “ಸಂಪೂರ್ಣ ಪಾರದರ್ಶಕತೆ” ಗಾಗಿ ಪದೇ ಪದೇ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಆಯೋಗವು ಮೆಷಿನ್-ರೀಡೆಬಲ್ ಮತದಾರರ ಪಟ್ಟಿಗಳನ್ನು ಬಹಿರಂಗಪಡಿಸಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ನಮ್ಮ ಚುನಾವಣಾ ವ್ಯವಸ್ಥೆಯ ಸಮಗ್ರತೆಯು ಅಧಃಪತನಕ್ಕೆ ತಲುಪಿದೆ. ಇದನ್ನು ಆಡಳಿತ ಪಕ್ಷದ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಅಲ್ಲವಲ್ಲದೆ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ನ್ಯೂಸ್‌ಲಾಂಡ್ರಿ ತನ್ನ ವರದಿಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಆರು ತಿಂಗಳಲ್ಲಿ 29,219 ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಹೇಳಿದೆ. ಇದು 8.25%ರಷ್ಟು ಹೆಚ್ಚಳವಾಗಿದೆ. ಇದು ಕಡ್ಡಾಯ  ಪರಿಶೀಲನೆಗಳಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ 4% ಹೆಚ್ಚಳದ ಮಿತಿಗಿಂತ ಹೆಚ್ಚಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಪರಿಶೀಲನೆಗಳನ್ನು ಮಾಡಲಾಗಿಲ್ಲ ಎಂದು ವರದಿ ಹೇಳಿದೆ.

ಕನಿಷ್ಠ 4,000 ಮತದಾರರಿಗೆ ವಿಳಾಸಗಳಿಲ್ಲ ಎಂದು ವರದಿ ಹೇಳಿದೆ. 70% ಮತಗಟ್ಟೆಗಳಲ್ಲಿ 4%ಕ್ಕಿಂತ ಹೆಚ್ಚು ಮತ ಸೇರ್ಪಡೆಗಳಿದ್ದರೆ, 26 ಮತಗಟ್ಟೆಗಳಲ್ಲಿ 20%ಕ್ಕಿಂತ ಹೆಚ್ಚು ಮತ್ತು ನಾಲ್ಕು ಮತಗಟ್ಟೆಗಳಲ್ಲಿ 40%ಕ್ಕಿಂತ ಹೆಚ್ಚು ಸೇರ್ಪಡೆಗಳಿವೆ ಎಂದು ಅದು ಹೇಳಿದೆ. ಚುನಾವಣಾ ಆಯೋಗವು ಈ ಹೇಳಿಕೆಗಳನ್ನು ನಿರಾಕರಿಸಿದೆ.

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...