Homeಮುಖಪುಟಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ 'ಮತ ಕಳ್ಳತನ'ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ...

ಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ ಆಗ್ರಹ

- Advertisement -
- Advertisement -

ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ “ಮತ ಕಳ್ಳತನ” ನಡೆದಿದ್ದು, ಇದನ್ನು ಚುನಾವಣಾ ಆಯೋಗವು  “ಮುಚ್ಚಿಹಾಕುತ್ತಿದೆ”. ಆಯೋಗವು ಚುನಾವಣೆಗೆ ಸಂಬಂಧಿಸಿ ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆ ಸಂದರ್ಭದಲ್ಲಿ ಕಡ್ಡಾಯ ಪರಿಶೀಲನೆ ನಡೆಸಲಾಗಿಲ್ಲ. ಅಲ್ಲದೇ ಆರು ತಿಂಗಳ ಅವಧಿಯಲ್ಲಿ ಸುಮಾರು 29,000 ಮತದಾರರನ್ನು ಸೇರಿಸಲಾಗಿದೆ ಎಂದು ವರದಿಯೊಂದು ಸೂಚಿಸಿದ ನಂತರ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆ.  

ಮಹಾರಾಷ್ಟ್ರ ಚುನಾವಣೆಗಳ ಮೊದಲು 2024ರ ನಂತರದ ಕರಡು ಮತದಾರರ ಪಟ್ಟಿಗಳ ಪ್ರತಿಗಳನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೀಡಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳ ಪ್ರಕಟಣೆಯ ನಡುವೆ 19,27,508ರಷ್ಟು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ತಪ್ಪಾದ ಸೇರ್ಪಡೆಗಳು ಅಥವಾ ಅಳಿಸುವಿಕೆ ಕುರಿತು ಕೇವಲ 89 ಮನವಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. 

ರಾಹುಲ್ ಮತದಾರರ ಪಟ್ಟಿಗಾಗಿ “ಸಂಪೂರ್ಣ ಪಾರದರ್ಶಕತೆ” ಗಾಗಿ ಪದೇ ಪದೇ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಆಯೋಗವು ಮೆಷಿನ್-ರೀಡೆಬಲ್ ಮತದಾರರ ಪಟ್ಟಿಗಳನ್ನು ಬಹಿರಂಗಪಡಿಸಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ನಮ್ಮ ಚುನಾವಣಾ ವ್ಯವಸ್ಥೆಯ ಸಮಗ್ರತೆಯು ಅಧಃಪತನಕ್ಕೆ ತಲುಪಿದೆ. ಇದನ್ನು ಆಡಳಿತ ಪಕ್ಷದ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಅಲ್ಲವಲ್ಲದೆ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ನ್ಯೂಸ್‌ಲಾಂಡ್ರಿ ತನ್ನ ವರದಿಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಆರು ತಿಂಗಳಲ್ಲಿ 29,219 ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಹೇಳಿದೆ. ಇದು 8.25%ರಷ್ಟು ಹೆಚ್ಚಳವಾಗಿದೆ. ಇದು ಕಡ್ಡಾಯ  ಪರಿಶೀಲನೆಗಳಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ 4% ಹೆಚ್ಚಳದ ಮಿತಿಗಿಂತ ಹೆಚ್ಚಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಪರಿಶೀಲನೆಗಳನ್ನು ಮಾಡಲಾಗಿಲ್ಲ ಎಂದು ವರದಿ ಹೇಳಿದೆ.

ಕನಿಷ್ಠ 4,000 ಮತದಾರರಿಗೆ ವಿಳಾಸಗಳಿಲ್ಲ ಎಂದು ವರದಿ ಹೇಳಿದೆ. 70% ಮತಗಟ್ಟೆಗಳಲ್ಲಿ 4%ಕ್ಕಿಂತ ಹೆಚ್ಚು ಮತ ಸೇರ್ಪಡೆಗಳಿದ್ದರೆ, 26 ಮತಗಟ್ಟೆಗಳಲ್ಲಿ 20%ಕ್ಕಿಂತ ಹೆಚ್ಚು ಮತ್ತು ನಾಲ್ಕು ಮತಗಟ್ಟೆಗಳಲ್ಲಿ 40%ಕ್ಕಿಂತ ಹೆಚ್ಚು ಸೇರ್ಪಡೆಗಳಿವೆ ಎಂದು ಅದು ಹೇಳಿದೆ. ಚುನಾವಣಾ ಆಯೋಗವು ಈ ಹೇಳಿಕೆಗಳನ್ನು ನಿರಾಕರಿಸಿದೆ.

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...