Homeಮುಖಪುಟದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

- Advertisement -
- Advertisement -

ತನ್ನ ಹೊಲವನ್ನು ಹದಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ದೇವರ ವಿಗ್ರಹಕ್ಕೆ ಹಾನಿ ಮಾಡಿದಕ್ಕಾಗಿ ರೈತರೊಬ್ಬರಿಗೆ 21 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅಮಗಾಂವ್ ತಹಸಿಲ್‌ ವ್ಯಾಪ್ತಿಯ ಸಿತೇಪಾರ್‌ ಗ್ರಾಮದಲ್ಲಿ ನಡೆದಿದೆ. ದಂಡವನ್ನು ಕಟ್ಟದಿದ್ದರೇ ಸಾಮಾಜಿಕ ಬಹಿಷ್ಕಾರ ಹಾಕುವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಾಯಿತಿ ನಿರ್ಣಯ ಮತ್ತು ಬೆದರಿಕೆಗೆ ಹೆದರದ ರೈತ ಟಿಕಾರಾಮ್ ಪ್ರೀತಮ್ ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಜೂನ್ 16 ರಂದು ಗ್ರಾಮದ ಸರ್‌ಪಂಚ್ ಮತ್ತು ಇತರ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸೀತೆಪಾರ್ ಗ್ರಾಮದ ನಿವಾಸಿ ಟಿಕಾರಾಮ್ ಪ್ರೀತಮ್ ಪಾರ್ಧಿ ಅವರು ಜೂನ್ 12 ರಂದು ತಮ್ಮ ಜಮೀನಿನಲ್ಲಿ ನೆಲ ಹದಗೊಳಿಸುತ್ತಿದ್ದಾಗ, ದೇವತೆಯ ಕಲ್ಲಿನ ವಿಗ್ರಹಕ್ಕೆ ಆಕಸ್ಮಿಕವಾಗಿ ಹಾನಿಯಾಗಿದೆ. ಈ ದೇವತೆಯನ್ನು ಗ್ರಾಮದವರು ಊರಿನ ಕುಲದೇವತೆ ಎಂದು ನಂಬಿದ್ದು, ತಕ್ಷಣ ಕೆಲಸ ನಿಲ್ಲಿಸುವಂತೆ ರೈತರನ್ನು ಒತ್ತಾಯಿಸಿದ್ದಾರೆ” ಎಂದು ಅಮಗಾಂವ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಿಲಾಸ್ ನಲೆ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಘಟನೆ ಸಂಬಂಧ ರೈತರ ವಿರುದ್ಧ ಪಂಚಾಯಿತಿ ಕರೆಯಲಾಗಿದೆ. ಪಂಚಾಯಿತಿಯಲ್ಲಿ ರೈತ ಪಾರ್ಧಿ ದೇವರ ವಿಗ್ರಹಕ್ಕೆ ಹಾನಿ ಮಾಡಿ ಸ್ಥಳೀಯ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ, ಅವರಿಗೆ 21,000 ರೂ.ಗಳ ದಂಡವನ್ನು ವಿಧಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪಂಚಾಯಿತಿ ವಿಧಿಸಿರುವ ದಂಡವನ್ನು ಪಾವತಿಸಲಿಲ್ಲ ಎಂದರೆ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಂಚಾಯತ್ ತೀರ್ಪು ನೀಡಿದೆ ಎಂದು ರೈತ ಪಾರ್ಧಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ನಾನು ನಿರಪರಾಧಿ ಮತ್ತು ನನ್ನ ಹಣಕಾಸಿನ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ, ಗ್ರಾಮದ ಸರ್‌ಪಂಚ್ ಗೋಪಾಲ್ ಫುಲಿಚಂದ್ ಮೆಶ್ರಾಮ್, ಗ್ರಾಮ ಮಟ್ಟದ ಪೊಲೀಸ್ ಸಹಾಯಕನಾದ ಪೊಲೀಸ್ ಪಾಟೀಲ್, ಉಲ್ಲಾಸ್‌ರಾವ್ ಭೈಯಾಲಾಲ್ ಬಿಸೆನ್, ರಾಜೇಂದ್ರ ಹಿವರ್ಲಾಲ್ ಬಿಸೆನ್, ಪುರನ್‌ಲಾಲ್ ಬಿಸೆನ್, ಯೋಗೇಶ್ ಹಿರಾಲಾಲ್ ಬಿಸೆನ್, ಯಾದವರಾವ್ ಶ್ರೀರಾಮ್ ಬಿಸೆನ್, ಪ್ರತಾಪ್ ಲಖನ್ ವಿರುದ್ಧ ಮಹಾರಾಷ್ಟ್ರದ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2016 ರ  ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...