Homeಮುಖಪುಟದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

- Advertisement -
- Advertisement -

ತನ್ನ ಹೊಲವನ್ನು ಹದಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ದೇವರ ವಿಗ್ರಹಕ್ಕೆ ಹಾನಿ ಮಾಡಿದಕ್ಕಾಗಿ ರೈತರೊಬ್ಬರಿಗೆ 21 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅಮಗಾಂವ್ ತಹಸಿಲ್‌ ವ್ಯಾಪ್ತಿಯ ಸಿತೇಪಾರ್‌ ಗ್ರಾಮದಲ್ಲಿ ನಡೆದಿದೆ. ದಂಡವನ್ನು ಕಟ್ಟದಿದ್ದರೇ ಸಾಮಾಜಿಕ ಬಹಿಷ್ಕಾರ ಹಾಕುವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಾಯಿತಿ ನಿರ್ಣಯ ಮತ್ತು ಬೆದರಿಕೆಗೆ ಹೆದರದ ರೈತ ಟಿಕಾರಾಮ್ ಪ್ರೀತಮ್ ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಜೂನ್ 16 ರಂದು ಗ್ರಾಮದ ಸರ್‌ಪಂಚ್ ಮತ್ತು ಇತರ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸೀತೆಪಾರ್ ಗ್ರಾಮದ ನಿವಾಸಿ ಟಿಕಾರಾಮ್ ಪ್ರೀತಮ್ ಪಾರ್ಧಿ ಅವರು ಜೂನ್ 12 ರಂದು ತಮ್ಮ ಜಮೀನಿನಲ್ಲಿ ನೆಲ ಹದಗೊಳಿಸುತ್ತಿದ್ದಾಗ, ದೇವತೆಯ ಕಲ್ಲಿನ ವಿಗ್ರಹಕ್ಕೆ ಆಕಸ್ಮಿಕವಾಗಿ ಹಾನಿಯಾಗಿದೆ. ಈ ದೇವತೆಯನ್ನು ಗ್ರಾಮದವರು ಊರಿನ ಕುಲದೇವತೆ ಎಂದು ನಂಬಿದ್ದು, ತಕ್ಷಣ ಕೆಲಸ ನಿಲ್ಲಿಸುವಂತೆ ರೈತರನ್ನು ಒತ್ತಾಯಿಸಿದ್ದಾರೆ” ಎಂದು ಅಮಗಾಂವ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಿಲಾಸ್ ನಲೆ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಘಟನೆ ಸಂಬಂಧ ರೈತರ ವಿರುದ್ಧ ಪಂಚಾಯಿತಿ ಕರೆಯಲಾಗಿದೆ. ಪಂಚಾಯಿತಿಯಲ್ಲಿ ರೈತ ಪಾರ್ಧಿ ದೇವರ ವಿಗ್ರಹಕ್ಕೆ ಹಾನಿ ಮಾಡಿ ಸ್ಥಳೀಯ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ, ಅವರಿಗೆ 21,000 ರೂ.ಗಳ ದಂಡವನ್ನು ವಿಧಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪಂಚಾಯಿತಿ ವಿಧಿಸಿರುವ ದಂಡವನ್ನು ಪಾವತಿಸಲಿಲ್ಲ ಎಂದರೆ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಂಚಾಯತ್ ತೀರ್ಪು ನೀಡಿದೆ ಎಂದು ರೈತ ಪಾರ್ಧಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ನಾನು ನಿರಪರಾಧಿ ಮತ್ತು ನನ್ನ ಹಣಕಾಸಿನ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ, ಗ್ರಾಮದ ಸರ್‌ಪಂಚ್ ಗೋಪಾಲ್ ಫುಲಿಚಂದ್ ಮೆಶ್ರಾಮ್, ಗ್ರಾಮ ಮಟ್ಟದ ಪೊಲೀಸ್ ಸಹಾಯಕನಾದ ಪೊಲೀಸ್ ಪಾಟೀಲ್, ಉಲ್ಲಾಸ್‌ರಾವ್ ಭೈಯಾಲಾಲ್ ಬಿಸೆನ್, ರಾಜೇಂದ್ರ ಹಿವರ್ಲಾಲ್ ಬಿಸೆನ್, ಪುರನ್‌ಲಾಲ್ ಬಿಸೆನ್, ಯೋಗೇಶ್ ಹಿರಾಲಾಲ್ ಬಿಸೆನ್, ಯಾದವರಾವ್ ಶ್ರೀರಾಮ್ ಬಿಸೆನ್, ಪ್ರತಾಪ್ ಲಖನ್ ವಿರುದ್ಧ ಮಹಾರಾಷ್ಟ್ರದ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2016 ರ  ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...