Homeಮುಖಪುಟದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

- Advertisement -
- Advertisement -

ತನ್ನ ಹೊಲವನ್ನು ಹದಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ದೇವರ ವಿಗ್ರಹಕ್ಕೆ ಹಾನಿ ಮಾಡಿದಕ್ಕಾಗಿ ರೈತರೊಬ್ಬರಿಗೆ 21 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅಮಗಾಂವ್ ತಹಸಿಲ್‌ ವ್ಯಾಪ್ತಿಯ ಸಿತೇಪಾರ್‌ ಗ್ರಾಮದಲ್ಲಿ ನಡೆದಿದೆ. ದಂಡವನ್ನು ಕಟ್ಟದಿದ್ದರೇ ಸಾಮಾಜಿಕ ಬಹಿಷ್ಕಾರ ಹಾಕುವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಾಯಿತಿ ನಿರ್ಣಯ ಮತ್ತು ಬೆದರಿಕೆಗೆ ಹೆದರದ ರೈತ ಟಿಕಾರಾಮ್ ಪ್ರೀತಮ್ ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಜೂನ್ 16 ರಂದು ಗ್ರಾಮದ ಸರ್‌ಪಂಚ್ ಮತ್ತು ಇತರ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸೀತೆಪಾರ್ ಗ್ರಾಮದ ನಿವಾಸಿ ಟಿಕಾರಾಮ್ ಪ್ರೀತಮ್ ಪಾರ್ಧಿ ಅವರು ಜೂನ್ 12 ರಂದು ತಮ್ಮ ಜಮೀನಿನಲ್ಲಿ ನೆಲ ಹದಗೊಳಿಸುತ್ತಿದ್ದಾಗ, ದೇವತೆಯ ಕಲ್ಲಿನ ವಿಗ್ರಹಕ್ಕೆ ಆಕಸ್ಮಿಕವಾಗಿ ಹಾನಿಯಾಗಿದೆ. ಈ ದೇವತೆಯನ್ನು ಗ್ರಾಮದವರು ಊರಿನ ಕುಲದೇವತೆ ಎಂದು ನಂಬಿದ್ದು, ತಕ್ಷಣ ಕೆಲಸ ನಿಲ್ಲಿಸುವಂತೆ ರೈತರನ್ನು ಒತ್ತಾಯಿಸಿದ್ದಾರೆ” ಎಂದು ಅಮಗಾಂವ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಿಲಾಸ್ ನಲೆ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಘಟನೆ ಸಂಬಂಧ ರೈತರ ವಿರುದ್ಧ ಪಂಚಾಯಿತಿ ಕರೆಯಲಾಗಿದೆ. ಪಂಚಾಯಿತಿಯಲ್ಲಿ ರೈತ ಪಾರ್ಧಿ ದೇವರ ವಿಗ್ರಹಕ್ಕೆ ಹಾನಿ ಮಾಡಿ ಸ್ಥಳೀಯ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ, ಅವರಿಗೆ 21,000 ರೂ.ಗಳ ದಂಡವನ್ನು ವಿಧಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪಂಚಾಯಿತಿ ವಿಧಿಸಿರುವ ದಂಡವನ್ನು ಪಾವತಿಸಲಿಲ್ಲ ಎಂದರೆ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಂಚಾಯತ್ ತೀರ್ಪು ನೀಡಿದೆ ಎಂದು ರೈತ ಪಾರ್ಧಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ನಾನು ನಿರಪರಾಧಿ ಮತ್ತು ನನ್ನ ಹಣಕಾಸಿನ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಪಾರ್ಧಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ, ಗ್ರಾಮದ ಸರ್‌ಪಂಚ್ ಗೋಪಾಲ್ ಫುಲಿಚಂದ್ ಮೆಶ್ರಾಮ್, ಗ್ರಾಮ ಮಟ್ಟದ ಪೊಲೀಸ್ ಸಹಾಯಕನಾದ ಪೊಲೀಸ್ ಪಾಟೀಲ್, ಉಲ್ಲಾಸ್‌ರಾವ್ ಭೈಯಾಲಾಲ್ ಬಿಸೆನ್, ರಾಜೇಂದ್ರ ಹಿವರ್ಲಾಲ್ ಬಿಸೆನ್, ಪುರನ್‌ಲಾಲ್ ಬಿಸೆನ್, ಯೋಗೇಶ್ ಹಿರಾಲಾಲ್ ಬಿಸೆನ್, ಯಾದವರಾವ್ ಶ್ರೀರಾಮ್ ಬಿಸೆನ್, ಪ್ರತಾಪ್ ಲಖನ್ ವಿರುದ್ಧ ಮಹಾರಾಷ್ಟ್ರದ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2016 ರ  ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...