Homeಮುಖಪುಟಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ ಭಾವಚಿತ್ರದ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಿದ್ದಾರೆ.

ವಿವಾದಿತ ವೀಡಿಯೊ ವೈರಲ್ ಆದ ಬಳಿಕ, ಕಾಲೇಜಿನಲ್ಲಿ ಬಹುಧರ್ಮೀಯ ನಿಯೋಗದ ರಚನೆಗೆ ಕಾರಣವಾಯಿತು. ಯಾವುದೇ ತರಗತಿಗೆ ಅಡ್ಡಿಪಡಿಸದೆ ಪ್ರಾರ್ಥನೆ ಸಲ್ಲಿಸಿದರೂ ವಿದ್ಯಾರ್ಥಿಗಳು ಮಾನಸಿಕವಾಗಿ ತೊಂದರೆಗೊಳಗಾಗಿದ್ದರಿಂದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಥಾಣೆಯ ಕಲ್ಯಾಣ್ ಪೂರ್ವದ ಐಡಿಯಲ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನವೆಂಬರ್ 21 ರಂದು ಘಟನೆ ನಡೆದಿದೆ. ವಿದ್ಯಾರ್ಥಿಗಳ ಪ್ರಾರ್ಥನೆಗಾಗಿ ಖಾಲಿ ತರಗತಿಯನ್ನು ಬಳಸಲು ಅನುಮತಿಸಲಾಗಿತ್ತು. ಆದರೆ, ಸಹ ವಿದ್ಯಾರ್ಥಿಯೊಬ್ಬರು ಪ್ರಾರ್ಥನೆ ಮಾಡುವುದನ್ನು ರೆಕಾರ್ಡ್ ಮಾಡಿ, ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾನೆ. ಇದರಿಂದಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ. ಶೈಕ್ಷಣಿಕ ಚಟುವಟಿಕೆಯ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸಹ ವಿವಾದ ಸೃಷ್ಟಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ.

ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಈ ಘಟನೆಯಿಂದಾಗಿ, ಸಾಮಾಜಿಕ ಕಾರ್ಯಕರ್ತ ದುರ್ಗೇಶ್ ಗಾಯಕ್ವಾಡ್, ಸಮೀರ್ ಖುರೇಷಿ, ಮೊಯಿನ್ ಡಾನ್, ಸಾಲಿಮ್ ಶೇಖ್, ಆನಂದ್ ಕುಮಾರ್, ಅಶ್ಫಾಕ್ ಶೇಖ್, ಜಮೀರ್ ಖಾನ್, ಅಲ್ತಮಾಶ್ ಕಾರ್ಟೆ ಮತ್ತು ಶೆಹಜಾದ್ ಸಾಗರ್ ಅವರು ನವೆಂಬರ್ 27 ರಂದು ಕಾಲೇಜು ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ವಿದ್ಯಾರ್ಥಿಗಳನ್ನು ಬೆದರಿಸಿದವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್‌) ಸಲ್ಲಿಸಲು, ವೀಡಿಯೊ ರೆಕಾರ್ಡಿಂಗ್ ಮತ್ತು ಪ್ರಸಾರಕ್ಕೆ ಕಾರಣವಾದ ವಿದ್ಯಾರ್ಥಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಿ, ಬಾಧಿತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮತ್ತು ಎಲ್ಲಾ ಧರ್ಮದ ವಿದ್ಯಾರ್ಥಿಗಳು ಭಯವಿಲ್ಲದೆ ಧಾರ್ಮಿಕ ಆಚರಣೆಗೆ ಸ್ಥಳ ನಿಗದಿಪಡಿಸುವಂತೆ ಒತ್ತಾಯಿಸುವ ಮೂಲಕ ಗುಂಪು ಮನವಿ ಪತ್ರ ಸಲ್ಲಿಸಿತು.

ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತನಾಡಲು ಇಷ್ಟವಿಲ್ಲದ ಕಾರಣ, ಭಾವನಾತ್ಮಕವಾಗಿ ತೊಂದರೆಗೀಡಾದ ಕಾರಣ ಅವರನ್ನು ಭೇಟಿ ಮಾಡುವಲ್ಲಿ ತೊಂದರೆಯಾಗಿದೆ ಎಂದು ನಿಯೋಗ ಹೇಳಿಕೊಂಡಿದೆ. ಆದರೆ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ಸಾಲಿಮ್ ಶೇಖ್, ಈ ಘರ್ಷಣೆಯನ್ನು ನಾಗರಿಕರ ಧಾರ್ಮಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿ ಎಂದು ಬಣ್ಣಿಸಿದರು. ಭದ್ರತೆಯನ್ನು ಬಲಪಡಿಸುವ ಜೊತೆಗೆ ಮುಂದೆ ಈ ರೀತಿಯ ಘಟನೆಗಳನ್ನು ತಡೆಯಲು ಕ್ರಮ ತಗೆದುಕೊಳ್ಳಬೇಕು ಎಂದು ಕಾಲೇಜು ಮತ್ತು ಅಧಿಕಾರಿಗಳನ್ನು ಒತ್ತಾಯಿಸಿದರು.

ಕಾಲೇಜು ಅಧಿಕಾರಿಗಳು ಭದ್ರತೆಯಲ್ಲಿನ ಲೋಪಗಳನ್ನು ಒಪ್ಪಿಕೊಂಡರು. ಹೆಚ್ಚಿದ ಗಸ್ತು, ಸಿಸಿಟಿವಿ ಪರೀಕ್ಷೆ ಮತ್ತು ಸಾಮರಸ್ಯ ವರ್ಧನೆಯ ಪ್ರಯತ್ನಗಳ ಮೂಲಕ ಸುಧಾರಣೆಗಳನ್ನು ಭರವಸೆ ನೀಡಿದರು. ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ನೀಡಲು ಸಹ ಬದ್ಧರಾಗಿದ್ದೇವೆ. ಆದರೆ ಪೊಲೀಸ್ ದೂರು ದಾಖಲಿಸುವ ಬಗ್ಗೆ ಕಾನೂನು ಸಮಾಲೋಚನೆಗಳು ನಡೆಯುತ್ತಿವೆ ಎಂದು ದೃಢಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...