Homeಮುಖಪುಟಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ ಭಾವಚಿತ್ರದ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಿದ್ದಾರೆ.

ವಿವಾದಿತ ವೀಡಿಯೊ ವೈರಲ್ ಆದ ಬಳಿಕ, ಕಾಲೇಜಿನಲ್ಲಿ ಬಹುಧರ್ಮೀಯ ನಿಯೋಗದ ರಚನೆಗೆ ಕಾರಣವಾಯಿತು. ಯಾವುದೇ ತರಗತಿಗೆ ಅಡ್ಡಿಪಡಿಸದೆ ಪ್ರಾರ್ಥನೆ ಸಲ್ಲಿಸಿದರೂ ವಿದ್ಯಾರ್ಥಿಗಳು ಮಾನಸಿಕವಾಗಿ ತೊಂದರೆಗೊಳಗಾಗಿದ್ದರಿಂದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಥಾಣೆಯ ಕಲ್ಯಾಣ್ ಪೂರ್ವದ ಐಡಿಯಲ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನವೆಂಬರ್ 21 ರಂದು ಘಟನೆ ನಡೆದಿದೆ. ವಿದ್ಯಾರ್ಥಿಗಳ ಪ್ರಾರ್ಥನೆಗಾಗಿ ಖಾಲಿ ತರಗತಿಯನ್ನು ಬಳಸಲು ಅನುಮತಿಸಲಾಗಿತ್ತು. ಆದರೆ, ಸಹ ವಿದ್ಯಾರ್ಥಿಯೊಬ್ಬರು ಪ್ರಾರ್ಥನೆ ಮಾಡುವುದನ್ನು ರೆಕಾರ್ಡ್ ಮಾಡಿ, ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾನೆ. ಇದರಿಂದಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ. ಶೈಕ್ಷಣಿಕ ಚಟುವಟಿಕೆಯ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸಹ ವಿವಾದ ಸೃಷ್ಟಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ.

ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಈ ಘಟನೆಯಿಂದಾಗಿ, ಸಾಮಾಜಿಕ ಕಾರ್ಯಕರ್ತ ದುರ್ಗೇಶ್ ಗಾಯಕ್ವಾಡ್, ಸಮೀರ್ ಖುರೇಷಿ, ಮೊಯಿನ್ ಡಾನ್, ಸಾಲಿಮ್ ಶೇಖ್, ಆನಂದ್ ಕುಮಾರ್, ಅಶ್ಫಾಕ್ ಶೇಖ್, ಜಮೀರ್ ಖಾನ್, ಅಲ್ತಮಾಶ್ ಕಾರ್ಟೆ ಮತ್ತು ಶೆಹಜಾದ್ ಸಾಗರ್ ಅವರು ನವೆಂಬರ್ 27 ರಂದು ಕಾಲೇಜು ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ವಿದ್ಯಾರ್ಥಿಗಳನ್ನು ಬೆದರಿಸಿದವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್‌) ಸಲ್ಲಿಸಲು, ವೀಡಿಯೊ ರೆಕಾರ್ಡಿಂಗ್ ಮತ್ತು ಪ್ರಸಾರಕ್ಕೆ ಕಾರಣವಾದ ವಿದ್ಯಾರ್ಥಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಿ, ಬಾಧಿತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮತ್ತು ಎಲ್ಲಾ ಧರ್ಮದ ವಿದ್ಯಾರ್ಥಿಗಳು ಭಯವಿಲ್ಲದೆ ಧಾರ್ಮಿಕ ಆಚರಣೆಗೆ ಸ್ಥಳ ನಿಗದಿಪಡಿಸುವಂತೆ ಒತ್ತಾಯಿಸುವ ಮೂಲಕ ಗುಂಪು ಮನವಿ ಪತ್ರ ಸಲ್ಲಿಸಿತು.

ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತನಾಡಲು ಇಷ್ಟವಿಲ್ಲದ ಕಾರಣ, ಭಾವನಾತ್ಮಕವಾಗಿ ತೊಂದರೆಗೀಡಾದ ಕಾರಣ ಅವರನ್ನು ಭೇಟಿ ಮಾಡುವಲ್ಲಿ ತೊಂದರೆಯಾಗಿದೆ ಎಂದು ನಿಯೋಗ ಹೇಳಿಕೊಂಡಿದೆ. ಆದರೆ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ಸಾಲಿಮ್ ಶೇಖ್, ಈ ಘರ್ಷಣೆಯನ್ನು ನಾಗರಿಕರ ಧಾರ್ಮಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿ ಎಂದು ಬಣ್ಣಿಸಿದರು. ಭದ್ರತೆಯನ್ನು ಬಲಪಡಿಸುವ ಜೊತೆಗೆ ಮುಂದೆ ಈ ರೀತಿಯ ಘಟನೆಗಳನ್ನು ತಡೆಯಲು ಕ್ರಮ ತಗೆದುಕೊಳ್ಳಬೇಕು ಎಂದು ಕಾಲೇಜು ಮತ್ತು ಅಧಿಕಾರಿಗಳನ್ನು ಒತ್ತಾಯಿಸಿದರು.

ಕಾಲೇಜು ಅಧಿಕಾರಿಗಳು ಭದ್ರತೆಯಲ್ಲಿನ ಲೋಪಗಳನ್ನು ಒಪ್ಪಿಕೊಂಡರು. ಹೆಚ್ಚಿದ ಗಸ್ತು, ಸಿಸಿಟಿವಿ ಪರೀಕ್ಷೆ ಮತ್ತು ಸಾಮರಸ್ಯ ವರ್ಧನೆಯ ಪ್ರಯತ್ನಗಳ ಮೂಲಕ ಸುಧಾರಣೆಗಳನ್ನು ಭರವಸೆ ನೀಡಿದರು. ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ನೀಡಲು ಸಹ ಬದ್ಧರಾಗಿದ್ದೇವೆ. ಆದರೆ ಪೊಲೀಸ್ ದೂರು ದಾಖಲಿಸುವ ಬಗ್ಗೆ ಕಾನೂನು ಸಮಾಲೋಚನೆಗಳು ನಡೆಯುತ್ತಿವೆ ಎಂದು ದೃಢಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...