Homeಮುಖಪುಟಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ ಭಾವಚಿತ್ರದ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಿದ್ದಾರೆ.

ವಿವಾದಿತ ವೀಡಿಯೊ ವೈರಲ್ ಆದ ಬಳಿಕ, ಕಾಲೇಜಿನಲ್ಲಿ ಬಹುಧರ್ಮೀಯ ನಿಯೋಗದ ರಚನೆಗೆ ಕಾರಣವಾಯಿತು. ಯಾವುದೇ ತರಗತಿಗೆ ಅಡ್ಡಿಪಡಿಸದೆ ಪ್ರಾರ್ಥನೆ ಸಲ್ಲಿಸಿದರೂ ವಿದ್ಯಾರ್ಥಿಗಳು ಮಾನಸಿಕವಾಗಿ ತೊಂದರೆಗೊಳಗಾಗಿದ್ದರಿಂದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಥಾಣೆಯ ಕಲ್ಯಾಣ್ ಪೂರ್ವದ ಐಡಿಯಲ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನವೆಂಬರ್ 21 ರಂದು ಘಟನೆ ನಡೆದಿದೆ. ವಿದ್ಯಾರ್ಥಿಗಳ ಪ್ರಾರ್ಥನೆಗಾಗಿ ಖಾಲಿ ತರಗತಿಯನ್ನು ಬಳಸಲು ಅನುಮತಿಸಲಾಗಿತ್ತು. ಆದರೆ, ಸಹ ವಿದ್ಯಾರ್ಥಿಯೊಬ್ಬರು ಪ್ರಾರ್ಥನೆ ಮಾಡುವುದನ್ನು ರೆಕಾರ್ಡ್ ಮಾಡಿ, ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾನೆ. ಇದರಿಂದಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ. ಶೈಕ್ಷಣಿಕ ಚಟುವಟಿಕೆಯ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸಹ ವಿವಾದ ಸೃಷ್ಟಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ.

ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಈ ಘಟನೆಯಿಂದಾಗಿ, ಸಾಮಾಜಿಕ ಕಾರ್ಯಕರ್ತ ದುರ್ಗೇಶ್ ಗಾಯಕ್ವಾಡ್, ಸಮೀರ್ ಖುರೇಷಿ, ಮೊಯಿನ್ ಡಾನ್, ಸಾಲಿಮ್ ಶೇಖ್, ಆನಂದ್ ಕುಮಾರ್, ಅಶ್ಫಾಕ್ ಶೇಖ್, ಜಮೀರ್ ಖಾನ್, ಅಲ್ತಮಾಶ್ ಕಾರ್ಟೆ ಮತ್ತು ಶೆಹಜಾದ್ ಸಾಗರ್ ಅವರು ನವೆಂಬರ್ 27 ರಂದು ಕಾಲೇಜು ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ವಿದ್ಯಾರ್ಥಿಗಳನ್ನು ಬೆದರಿಸಿದವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್‌) ಸಲ್ಲಿಸಲು, ವೀಡಿಯೊ ರೆಕಾರ್ಡಿಂಗ್ ಮತ್ತು ಪ್ರಸಾರಕ್ಕೆ ಕಾರಣವಾದ ವಿದ್ಯಾರ್ಥಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಿ, ಬಾಧಿತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮತ್ತು ಎಲ್ಲಾ ಧರ್ಮದ ವಿದ್ಯಾರ್ಥಿಗಳು ಭಯವಿಲ್ಲದೆ ಧಾರ್ಮಿಕ ಆಚರಣೆಗೆ ಸ್ಥಳ ನಿಗದಿಪಡಿಸುವಂತೆ ಒತ್ತಾಯಿಸುವ ಮೂಲಕ ಗುಂಪು ಮನವಿ ಪತ್ರ ಸಲ್ಲಿಸಿತು.

ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತನಾಡಲು ಇಷ್ಟವಿಲ್ಲದ ಕಾರಣ, ಭಾವನಾತ್ಮಕವಾಗಿ ತೊಂದರೆಗೀಡಾದ ಕಾರಣ ಅವರನ್ನು ಭೇಟಿ ಮಾಡುವಲ್ಲಿ ತೊಂದರೆಯಾಗಿದೆ ಎಂದು ನಿಯೋಗ ಹೇಳಿಕೊಂಡಿದೆ. ಆದರೆ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ಸಾಲಿಮ್ ಶೇಖ್, ಈ ಘರ್ಷಣೆಯನ್ನು ನಾಗರಿಕರ ಧಾರ್ಮಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿ ಎಂದು ಬಣ್ಣಿಸಿದರು. ಭದ್ರತೆಯನ್ನು ಬಲಪಡಿಸುವ ಜೊತೆಗೆ ಮುಂದೆ ಈ ರೀತಿಯ ಘಟನೆಗಳನ್ನು ತಡೆಯಲು ಕ್ರಮ ತಗೆದುಕೊಳ್ಳಬೇಕು ಎಂದು ಕಾಲೇಜು ಮತ್ತು ಅಧಿಕಾರಿಗಳನ್ನು ಒತ್ತಾಯಿಸಿದರು.

ಕಾಲೇಜು ಅಧಿಕಾರಿಗಳು ಭದ್ರತೆಯಲ್ಲಿನ ಲೋಪಗಳನ್ನು ಒಪ್ಪಿಕೊಂಡರು. ಹೆಚ್ಚಿದ ಗಸ್ತು, ಸಿಸಿಟಿವಿ ಪರೀಕ್ಷೆ ಮತ್ತು ಸಾಮರಸ್ಯ ವರ್ಧನೆಯ ಪ್ರಯತ್ನಗಳ ಮೂಲಕ ಸುಧಾರಣೆಗಳನ್ನು ಭರವಸೆ ನೀಡಿದರು. ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ನೀಡಲು ಸಹ ಬದ್ಧರಾಗಿದ್ದೇವೆ. ಆದರೆ ಪೊಲೀಸ್ ದೂರು ದಾಖಲಿಸುವ ಬಗ್ಗೆ ಕಾನೂನು ಸಮಾಲೋಚನೆಗಳು ನಡೆಯುತ್ತಿವೆ ಎಂದು ದೃಢಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....