Homeಚಳವಳಿವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -
- Advertisement -

ತಿಳಿ ಗುಲಾಬಿ ಸೀರೆಯ ಸಹೋದರಿಯರ ಮೊಗದಲ್ಲೊಂದು ಒಂದು ‘ಆಶಾ’ದಾಯಕ ಸಮಾಧಾನ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಕೊಂಡಿದೆ.

7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕಾರ್ಮಿಕ ಹಕ್ಕುಗಳ ರಕ್ಷಣೆ ಮತ್ತು ಕನಿಷ್ಠ ವೇತನವನ್ನು ಕೋರಿ ಮಹಾರಾಷ್ಟ್ರದ 70 ಸಾವಿರ ಆಶಾ ಕಾರ್ಯಕರ್ತೆಯರು ಜೂನ್ 15 ರಿಂದ ಮುಷ್ಕರ ನಡೆಸುತ್ತಿದ್ದರು. ಮಹಾರಾಷ್ಟ್ರ ಸರ್ಕಾರವು ತೀರಾ ಇತ್ತೀಚಿನವರೆಗೂ ಈ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ.

ಬುಧವಾರ, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದಾರೆ. ಮಾಸಿಕ ವೇತನದಲ್ಲಿ 1 ಸಾವಿರ ರೂ ಹೆಚ್ಚಳ ಮತ್ತು ಕೋವಿಡ್ ಪರಿಹಾರವಾಗಿ ಮಾಸಿಕ 500 ರೂ. ನೀಡಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ.

ಇದಲ್ಲದೆ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‍ ಕೂಡ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ನಂತರ ಸರ್ಕಾರದ ಈ ಪ್ರಕಟಣೆ ಬಂದಿದೆ.

ಸದ್ಯದ ಮಟ್ಟಿಗೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದು ದೊಡ್ಡ ಗೆಲುವೇ. ಆದರೆ ಹೋರಾಟದ ಹಾದಿ ಇನ್ನೂ ಸುದೀರ್ಘವಾಗಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ದೈನಂದಿನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಆಶಾ ಕಾರ್ಯಕರ್ತೆಯರ ಗುಂಪಿನ ಮುಖ್ಯಸ್ಥರಿಗೆ ಮಾಸಿಕ ಸಂಬಳದಲ್ಲಿ 1,200 ರೂ. ಹೆಚ್ಚಳ, ಜೊತೆಗೆ ಹೆಚ್ಚುವರಿ ಕೋವಿಡ್ ಭತ್ಯೆಯಾಗಿ ತಿಂಗಳಿಗೆ 500 ರೂ.ಗಳನ್ನು, ಲಸಿಕಾ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯರ್ತೆಯರಿಗೆ ಹೆಚ್ಚುವರಿ ಮಾಸಿಕ 200 ರೂ. ಭತ್ಯೆ ನೀಡಲೂ ಸರ್ಕಾರ ಒಪ್ಪಿದೆ. ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಕೋವಿಡ್ ಭತ್ಯೆ ಮತ್ತು ವೇತನ ಪರಿಷ್ಕರಣೆಯಿಂದಾಗಿ ಮಹಾರಾಷ್ಟ್ರದ ಆಶಾ ಕಾರ್ಯಕರ್ತೆಯರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಗಳ ನಡುವಿನ ಸೇತುವೆಯಾಗಿ ಆಶಾ ಕಾರ್ಯಕರ್ತೆಯರು ಅಮೂಲ್ಯ ಸೇವೆ ಮಾಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅವರನ್ನು ಇನ್ನೂ “ಆರೋಗ್ಯ ಸ್ವಯಂಸೇವಕರು” ಎಂದು ಗುರುತಿಸುತ್ತಿದೆ. ಮೂಲ ಅಗತ್ಯತೆಗಳು ಮತ್ತು  ಉದ್ಯೋಗ ಭದ್ರತೆಗಾಗಿ ಅವರು ಆಗ್ರಹಿಸುತ್ತಿದ್ದು, ಇದಕ್ಕಾಗಿ ತಮ್ಮನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರಾಗಿ ಗುರುತಿಸಬೇಕೆಂದು ನಿರಂತರವಾಗಿ ಒತ್ತಾಯಿಸಿದ್ದಾರೆ. “ಆರೋಗ್ಯ ಸ್ವಯಂಸೇವಕ” ಎಂಬ ಹಣೆಪಟ್ಟಿ ಹಚ್ಚುವ ಮೂಲಕ ಅವರ ಬೇಡಿಕೆಗಳಿಗೆ ಹಿನ್ನಡೆ ಮಾಡುತ್ತ ಬರಲಾಗಿದೆ.

ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ವರ್ಧನೆಗೆ ದಿನವೂ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಪ್ರಾಥಮಿಕ ಉಪಚಾರ ಮತ್ತು ಅವರನ್ನು ಹೆರಿಗೆ ಸಮಯದಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಜವಾಬ್ದಾರಿಗಳನ್ನು ಹೊತ್ತಿದ್ದಾರೆ. ಕೋವಿಡ್‍ ಸಂದರ್ಭದಲ್ಲಿ ಅವರ ಸೇವೆ ಅನುಪಮವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಶ್ರಮದ ನಂತರವೂ ಅವರಿಗೆ ಕೇವಲ 1,000 ದಿಂದ 3000 ರೂವರೆಗೆ ವೇತನ ನೀಡುತ್ತ ಬರಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಆಶಾ ಒಕ್ಕೂಟಗಳು ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತ ಬಂದಿವೆ. ಈಗ ಮಹಾರಾಷ್ಟ್ರದಲ್ಲಿ ಅವರಿಗೊಂದು ಜಯ ಸಿಕ್ಕಿದ್ದು ಮುಂದಿನ ಹೋರಾಟಕ್ಕೆ ದೊಡ್ಡ ಮೆಟ್ಟಿಲಾಗಿದೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...