Homeಚಳವಳಿವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -
- Advertisement -

ತಿಳಿ ಗುಲಾಬಿ ಸೀರೆಯ ಸಹೋದರಿಯರ ಮೊಗದಲ್ಲೊಂದು ಒಂದು ‘ಆಶಾ’ದಾಯಕ ಸಮಾಧಾನ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಕೊಂಡಿದೆ.

7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕಾರ್ಮಿಕ ಹಕ್ಕುಗಳ ರಕ್ಷಣೆ ಮತ್ತು ಕನಿಷ್ಠ ವೇತನವನ್ನು ಕೋರಿ ಮಹಾರಾಷ್ಟ್ರದ 70 ಸಾವಿರ ಆಶಾ ಕಾರ್ಯಕರ್ತೆಯರು ಜೂನ್ 15 ರಿಂದ ಮುಷ್ಕರ ನಡೆಸುತ್ತಿದ್ದರು. ಮಹಾರಾಷ್ಟ್ರ ಸರ್ಕಾರವು ತೀರಾ ಇತ್ತೀಚಿನವರೆಗೂ ಈ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ.

ಬುಧವಾರ, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದಾರೆ. ಮಾಸಿಕ ವೇತನದಲ್ಲಿ 1 ಸಾವಿರ ರೂ ಹೆಚ್ಚಳ ಮತ್ತು ಕೋವಿಡ್ ಪರಿಹಾರವಾಗಿ ಮಾಸಿಕ 500 ರೂ. ನೀಡಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ.

ಇದಲ್ಲದೆ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‍ ಕೂಡ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ನಂತರ ಸರ್ಕಾರದ ಈ ಪ್ರಕಟಣೆ ಬಂದಿದೆ.

ಸದ್ಯದ ಮಟ್ಟಿಗೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದು ದೊಡ್ಡ ಗೆಲುವೇ. ಆದರೆ ಹೋರಾಟದ ಹಾದಿ ಇನ್ನೂ ಸುದೀರ್ಘವಾಗಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ದೈನಂದಿನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಆಶಾ ಕಾರ್ಯಕರ್ತೆಯರ ಗುಂಪಿನ ಮುಖ್ಯಸ್ಥರಿಗೆ ಮಾಸಿಕ ಸಂಬಳದಲ್ಲಿ 1,200 ರೂ. ಹೆಚ್ಚಳ, ಜೊತೆಗೆ ಹೆಚ್ಚುವರಿ ಕೋವಿಡ್ ಭತ್ಯೆಯಾಗಿ ತಿಂಗಳಿಗೆ 500 ರೂ.ಗಳನ್ನು, ಲಸಿಕಾ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯರ್ತೆಯರಿಗೆ ಹೆಚ್ಚುವರಿ ಮಾಸಿಕ 200 ರೂ. ಭತ್ಯೆ ನೀಡಲೂ ಸರ್ಕಾರ ಒಪ್ಪಿದೆ. ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಕೋವಿಡ್ ಭತ್ಯೆ ಮತ್ತು ವೇತನ ಪರಿಷ್ಕರಣೆಯಿಂದಾಗಿ ಮಹಾರಾಷ್ಟ್ರದ ಆಶಾ ಕಾರ್ಯಕರ್ತೆಯರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಗಳ ನಡುವಿನ ಸೇತುವೆಯಾಗಿ ಆಶಾ ಕಾರ್ಯಕರ್ತೆಯರು ಅಮೂಲ್ಯ ಸೇವೆ ಮಾಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅವರನ್ನು ಇನ್ನೂ “ಆರೋಗ್ಯ ಸ್ವಯಂಸೇವಕರು” ಎಂದು ಗುರುತಿಸುತ್ತಿದೆ. ಮೂಲ ಅಗತ್ಯತೆಗಳು ಮತ್ತು  ಉದ್ಯೋಗ ಭದ್ರತೆಗಾಗಿ ಅವರು ಆಗ್ರಹಿಸುತ್ತಿದ್ದು, ಇದಕ್ಕಾಗಿ ತಮ್ಮನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರಾಗಿ ಗುರುತಿಸಬೇಕೆಂದು ನಿರಂತರವಾಗಿ ಒತ್ತಾಯಿಸಿದ್ದಾರೆ. “ಆರೋಗ್ಯ ಸ್ವಯಂಸೇವಕ” ಎಂಬ ಹಣೆಪಟ್ಟಿ ಹಚ್ಚುವ ಮೂಲಕ ಅವರ ಬೇಡಿಕೆಗಳಿಗೆ ಹಿನ್ನಡೆ ಮಾಡುತ್ತ ಬರಲಾಗಿದೆ.

ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ವರ್ಧನೆಗೆ ದಿನವೂ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಪ್ರಾಥಮಿಕ ಉಪಚಾರ ಮತ್ತು ಅವರನ್ನು ಹೆರಿಗೆ ಸಮಯದಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಜವಾಬ್ದಾರಿಗಳನ್ನು ಹೊತ್ತಿದ್ದಾರೆ. ಕೋವಿಡ್‍ ಸಂದರ್ಭದಲ್ಲಿ ಅವರ ಸೇವೆ ಅನುಪಮವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಶ್ರಮದ ನಂತರವೂ ಅವರಿಗೆ ಕೇವಲ 1,000 ದಿಂದ 3000 ರೂವರೆಗೆ ವೇತನ ನೀಡುತ್ತ ಬರಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಆಶಾ ಒಕ್ಕೂಟಗಳು ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತ ಬಂದಿವೆ. ಈಗ ಮಹಾರಾಷ್ಟ್ರದಲ್ಲಿ ಅವರಿಗೊಂದು ಜಯ ಸಿಕ್ಕಿದ್ದು ಮುಂದಿನ ಹೋರಾಟಕ್ಕೆ ದೊಡ್ಡ ಮೆಟ್ಟಿಲಾಗಿದೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...