Homeಚಳವಳಿವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -
- Advertisement -

ತಿಳಿ ಗುಲಾಬಿ ಸೀರೆಯ ಸಹೋದರಿಯರ ಮೊಗದಲ್ಲೊಂದು ಒಂದು ‘ಆಶಾ’ದಾಯಕ ಸಮಾಧಾನ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಕೊಂಡಿದೆ.

7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕಾರ್ಮಿಕ ಹಕ್ಕುಗಳ ರಕ್ಷಣೆ ಮತ್ತು ಕನಿಷ್ಠ ವೇತನವನ್ನು ಕೋರಿ ಮಹಾರಾಷ್ಟ್ರದ 70 ಸಾವಿರ ಆಶಾ ಕಾರ್ಯಕರ್ತೆಯರು ಜೂನ್ 15 ರಿಂದ ಮುಷ್ಕರ ನಡೆಸುತ್ತಿದ್ದರು. ಮಹಾರಾಷ್ಟ್ರ ಸರ್ಕಾರವು ತೀರಾ ಇತ್ತೀಚಿನವರೆಗೂ ಈ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ.

ಬುಧವಾರ, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದಾರೆ. ಮಾಸಿಕ ವೇತನದಲ್ಲಿ 1 ಸಾವಿರ ರೂ ಹೆಚ್ಚಳ ಮತ್ತು ಕೋವಿಡ್ ಪರಿಹಾರವಾಗಿ ಮಾಸಿಕ 500 ರೂ. ನೀಡಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ.

ಇದಲ್ಲದೆ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‍ ಕೂಡ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ನಂತರ ಸರ್ಕಾರದ ಈ ಪ್ರಕಟಣೆ ಬಂದಿದೆ.

ಸದ್ಯದ ಮಟ್ಟಿಗೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದು ದೊಡ್ಡ ಗೆಲುವೇ. ಆದರೆ ಹೋರಾಟದ ಹಾದಿ ಇನ್ನೂ ಸುದೀರ್ಘವಾಗಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ದೈನಂದಿನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಆಶಾ ಕಾರ್ಯಕರ್ತೆಯರ ಗುಂಪಿನ ಮುಖ್ಯಸ್ಥರಿಗೆ ಮಾಸಿಕ ಸಂಬಳದಲ್ಲಿ 1,200 ರೂ. ಹೆಚ್ಚಳ, ಜೊತೆಗೆ ಹೆಚ್ಚುವರಿ ಕೋವಿಡ್ ಭತ್ಯೆಯಾಗಿ ತಿಂಗಳಿಗೆ 500 ರೂ.ಗಳನ್ನು, ಲಸಿಕಾ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯರ್ತೆಯರಿಗೆ ಹೆಚ್ಚುವರಿ ಮಾಸಿಕ 200 ರೂ. ಭತ್ಯೆ ನೀಡಲೂ ಸರ್ಕಾರ ಒಪ್ಪಿದೆ. ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಕೋವಿಡ್ ಭತ್ಯೆ ಮತ್ತು ವೇತನ ಪರಿಷ್ಕರಣೆಯಿಂದಾಗಿ ಮಹಾರಾಷ್ಟ್ರದ ಆಶಾ ಕಾರ್ಯಕರ್ತೆಯರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಗಳ ನಡುವಿನ ಸೇತುವೆಯಾಗಿ ಆಶಾ ಕಾರ್ಯಕರ್ತೆಯರು ಅಮೂಲ್ಯ ಸೇವೆ ಮಾಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅವರನ್ನು ಇನ್ನೂ “ಆರೋಗ್ಯ ಸ್ವಯಂಸೇವಕರು” ಎಂದು ಗುರುತಿಸುತ್ತಿದೆ. ಮೂಲ ಅಗತ್ಯತೆಗಳು ಮತ್ತು  ಉದ್ಯೋಗ ಭದ್ರತೆಗಾಗಿ ಅವರು ಆಗ್ರಹಿಸುತ್ತಿದ್ದು, ಇದಕ್ಕಾಗಿ ತಮ್ಮನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರಾಗಿ ಗುರುತಿಸಬೇಕೆಂದು ನಿರಂತರವಾಗಿ ಒತ್ತಾಯಿಸಿದ್ದಾರೆ. “ಆರೋಗ್ಯ ಸ್ವಯಂಸೇವಕ” ಎಂಬ ಹಣೆಪಟ್ಟಿ ಹಚ್ಚುವ ಮೂಲಕ ಅವರ ಬೇಡಿಕೆಗಳಿಗೆ ಹಿನ್ನಡೆ ಮಾಡುತ್ತ ಬರಲಾಗಿದೆ.

ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ವರ್ಧನೆಗೆ ದಿನವೂ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಪ್ರಾಥಮಿಕ ಉಪಚಾರ ಮತ್ತು ಅವರನ್ನು ಹೆರಿಗೆ ಸಮಯದಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಜವಾಬ್ದಾರಿಗಳನ್ನು ಹೊತ್ತಿದ್ದಾರೆ. ಕೋವಿಡ್‍ ಸಂದರ್ಭದಲ್ಲಿ ಅವರ ಸೇವೆ ಅನುಪಮವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಶ್ರಮದ ನಂತರವೂ ಅವರಿಗೆ ಕೇವಲ 1,000 ದಿಂದ 3000 ರೂವರೆಗೆ ವೇತನ ನೀಡುತ್ತ ಬರಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಆಶಾ ಒಕ್ಕೂಟಗಳು ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತ ಬಂದಿವೆ. ಈಗ ಮಹಾರಾಷ್ಟ್ರದಲ್ಲಿ ಅವರಿಗೊಂದು ಜಯ ಸಿಕ್ಕಿದ್ದು ಮುಂದಿನ ಹೋರಾಟಕ್ಕೆ ದೊಡ್ಡ ಮೆಟ್ಟಿಲಾಗಿದೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...