Homeಚಳವಳಿವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -
- Advertisement -

ತಿಳಿ ಗುಲಾಬಿ ಸೀರೆಯ ಸಹೋದರಿಯರ ಮೊಗದಲ್ಲೊಂದು ಒಂದು ‘ಆಶಾ’ದಾಯಕ ಸಮಾಧಾನ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಕೊಂಡಿದೆ.

7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕಾರ್ಮಿಕ ಹಕ್ಕುಗಳ ರಕ್ಷಣೆ ಮತ್ತು ಕನಿಷ್ಠ ವೇತನವನ್ನು ಕೋರಿ ಮಹಾರಾಷ್ಟ್ರದ 70 ಸಾವಿರ ಆಶಾ ಕಾರ್ಯಕರ್ತೆಯರು ಜೂನ್ 15 ರಿಂದ ಮುಷ್ಕರ ನಡೆಸುತ್ತಿದ್ದರು. ಮಹಾರಾಷ್ಟ್ರ ಸರ್ಕಾರವು ತೀರಾ ಇತ್ತೀಚಿನವರೆಗೂ ಈ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ.

ಬುಧವಾರ, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದಾರೆ. ಮಾಸಿಕ ವೇತನದಲ್ಲಿ 1 ಸಾವಿರ ರೂ ಹೆಚ್ಚಳ ಮತ್ತು ಕೋವಿಡ್ ಪರಿಹಾರವಾಗಿ ಮಾಸಿಕ 500 ರೂ. ನೀಡಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ.

ಇದಲ್ಲದೆ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‍ ಕೂಡ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ನಂತರ ಸರ್ಕಾರದ ಈ ಪ್ರಕಟಣೆ ಬಂದಿದೆ.

ಸದ್ಯದ ಮಟ್ಟಿಗೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದು ದೊಡ್ಡ ಗೆಲುವೇ. ಆದರೆ ಹೋರಾಟದ ಹಾದಿ ಇನ್ನೂ ಸುದೀರ್ಘವಾಗಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ದೈನಂದಿನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಆಶಾ ಕಾರ್ಯಕರ್ತೆಯರ ಗುಂಪಿನ ಮುಖ್ಯಸ್ಥರಿಗೆ ಮಾಸಿಕ ಸಂಬಳದಲ್ಲಿ 1,200 ರೂ. ಹೆಚ್ಚಳ, ಜೊತೆಗೆ ಹೆಚ್ಚುವರಿ ಕೋವಿಡ್ ಭತ್ಯೆಯಾಗಿ ತಿಂಗಳಿಗೆ 500 ರೂ.ಗಳನ್ನು, ಲಸಿಕಾ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯರ್ತೆಯರಿಗೆ ಹೆಚ್ಚುವರಿ ಮಾಸಿಕ 200 ರೂ. ಭತ್ಯೆ ನೀಡಲೂ ಸರ್ಕಾರ ಒಪ್ಪಿದೆ. ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಕೋವಿಡ್ ಭತ್ಯೆ ಮತ್ತು ವೇತನ ಪರಿಷ್ಕರಣೆಯಿಂದಾಗಿ ಮಹಾರಾಷ್ಟ್ರದ ಆಶಾ ಕಾರ್ಯಕರ್ತೆಯರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಗಳ ನಡುವಿನ ಸೇತುವೆಯಾಗಿ ಆಶಾ ಕಾರ್ಯಕರ್ತೆಯರು ಅಮೂಲ್ಯ ಸೇವೆ ಮಾಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅವರನ್ನು ಇನ್ನೂ “ಆರೋಗ್ಯ ಸ್ವಯಂಸೇವಕರು” ಎಂದು ಗುರುತಿಸುತ್ತಿದೆ. ಮೂಲ ಅಗತ್ಯತೆಗಳು ಮತ್ತು  ಉದ್ಯೋಗ ಭದ್ರತೆಗಾಗಿ ಅವರು ಆಗ್ರಹಿಸುತ್ತಿದ್ದು, ಇದಕ್ಕಾಗಿ ತಮ್ಮನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರಾಗಿ ಗುರುತಿಸಬೇಕೆಂದು ನಿರಂತರವಾಗಿ ಒತ್ತಾಯಿಸಿದ್ದಾರೆ. “ಆರೋಗ್ಯ ಸ್ವಯಂಸೇವಕ” ಎಂಬ ಹಣೆಪಟ್ಟಿ ಹಚ್ಚುವ ಮೂಲಕ ಅವರ ಬೇಡಿಕೆಗಳಿಗೆ ಹಿನ್ನಡೆ ಮಾಡುತ್ತ ಬರಲಾಗಿದೆ.

ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ವರ್ಧನೆಗೆ ದಿನವೂ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಪ್ರಾಥಮಿಕ ಉಪಚಾರ ಮತ್ತು ಅವರನ್ನು ಹೆರಿಗೆ ಸಮಯದಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಜವಾಬ್ದಾರಿಗಳನ್ನು ಹೊತ್ತಿದ್ದಾರೆ. ಕೋವಿಡ್‍ ಸಂದರ್ಭದಲ್ಲಿ ಅವರ ಸೇವೆ ಅನುಪಮವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಶ್ರಮದ ನಂತರವೂ ಅವರಿಗೆ ಕೇವಲ 1,000 ದಿಂದ 3000 ರೂವರೆಗೆ ವೇತನ ನೀಡುತ್ತ ಬರಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಆಶಾ ಒಕ್ಕೂಟಗಳು ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತ ಬಂದಿವೆ. ಈಗ ಮಹಾರಾಷ್ಟ್ರದಲ್ಲಿ ಅವರಿಗೊಂದು ಜಯ ಸಿಕ್ಕಿದ್ದು ಮುಂದಿನ ಹೋರಾಟಕ್ಕೆ ದೊಡ್ಡ ಮೆಟ್ಟಿಲಾಗಿದೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...