Homeಮುಖಪುಟಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ-ಬಳಕೆ ನಿಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮನವಿ

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ-ಬಳಕೆ ನಿಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮನವಿ

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೋಲ್ಡ್ರಿಫ್ ಸಿರಪ್‌ಗೆ ಸಂಬಂಧಿಸಿದ ಮಕ್ಕಳ ಸಾವುಗಳು ವರದಿಯಾದ ನಂತರ, ಮಹಾರಾಷ್ಟ್ರ ಎಫ್‌ಡಿಎ ಸೋಮವಾರ ಜನರಿಗೆ ನಿರ್ದಿಷ್ಟ ಬ್ಯಾಚ್ ಕೋಲ್ಡ್ರಿಫ್ ಸಿರಪ್‌ನ ಮಾರಾಟ ಅಥವಾ ಬಳಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದೆ.

ಇದಕ್ಕೂ ಮೊದಲು ತಮಿಳುನಾಡು ಔಷಧ ನಿಯಂತ್ರಣ ಅಧಿಕಾರಿಗಳು ಅಕ್ಟೋಬರ್ 2 ರ ತಮ್ಮ ವರದಿಯಲ್ಲಿ, ಕಾಂಚೀಪುರಂನ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಕೋಲ್ಡ್ರಿಫ್ ಸಿರಪ್ ಮಾದರಿಯನ್ನು (ಬ್ಯಾಚ್ ಸಂಖ್ಯೆ SR-13; Mfg: ಮೇ 2025; ಅವಧಿ: ಏಪ್ರಿಲ್ 2027) ಕಲಬೆರಕೆ ಎಂದು ಘೋಷಿಸಿದರು. ಏಕೆಂದರೆ, ಅದು ಡೈಥಿಲೀನ್ ಗ್ಲೈಕಾಲ್ (48.6% w/v) ಅನ್ನು ಹೊಂದಿತ್ತು, ಇದು ‘ಮಾರಕ’ ಕೆಮ್ಮಿನ ಸಿರಪ್ ಸೇವನೆಗೆ ಸಂಬಂಧಿಸಿದ ವಿಷಕಾರಿ ವಸ್ತುವಾಗಿದೆ.

‘ವಿಷಕಾರಿ’ ಕೆಮ್ಮಿನ ಸಿರಪ್ ಸೇವನೆಗೆ ಸಂಬಂಧಿಸಿದ ಶಂಕಿತ ಮೂತ್ರಪಿಂಡ ವೈಫಲ್ಯದಿಂದಾಗಿ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಿಂದ 14 ಮಕ್ಕಳ ಸಾವುಗಳು ವರದಿಯಾಗಿವೆ.

“ಸಾರ್ವಜನಿಕರು ಜಾಗರೂಕರಾಗಿರಲು ಮತ್ತು ಕೋಲ್ಡ್ರಿಫ್ ಸಿರಪ್ ಬ್ಯಾಚ್ ಸಂಖ್ಯೆ ಎಸ್‌ಆರ್‌-13 ಅನ್ನು ಹೊಂದಿದ್ದರೆ ಹತ್ತಿರದ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ತಡಮಾಡದೆ ವರದಿ ಮಾಡಲು ಕೋರಲಾಗಿದೆ” ಎಂದು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ವಿವಾದಿತ ಬ್ಯಾಚ್ ವಿಷಕಾರಿ ರಾಸಾಯನಿಕವಾದ ಡೈಥಿಲೀನ್ ಗ್ಲೈಕೋಲ್‌ನೊಂದಿಗೆ ಕಲಬೆರಕೆಯಾಗಿದೆ ಎಂದು ಶಂಕಿಸಲಾಗಿದೆ ಎಂದು ಎಫ್‌ಡಿಎ ಎಚ್ಚರಿಸಿದೆ.

ಮಹಾರಾಷ್ಟ್ರದಲ್ಲಿ ವಿವಾದಿತ ಬ್ಯಾಚ್‌ನ ವಿತರಣೆಯನ್ನು ಪತ್ತೆಹಚ್ಚಲು ತಮಿಳುನಾಡು ಔಷಧ ನಿಯಂತ್ರಣ ಆಡಳಿತದೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ ಎಂದು ಎಫ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಲಭ್ಯವಿರುವ ಯಾವುದೇ ಸ್ಟಾಕ್ ಅನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಚಿಲ್ಲರೆ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು ಮತ್ತು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲು ಎಲ್ಲ ಔಷಧ ನಿರೀಕ್ಷಕರು ಮತ್ತು ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಮತ್ತು ಜೀವಕ್ಕೆ ಯಾವುದೇ ಅಪಾಯವನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಎಫ್‌ಡಿಎ ಮತ್ತಷ್ಟು ಹೇಳಿದೆ.

ಫಿನೈಲ್ಫ್ರಿನ್ ಹೈಡ್ರೋಕ್ಲೋರೈಡ್ ಮತ್ತು ಕ್ಲೋರ್ಫೆನಿರಮೈನ್ ಮಲೇಟ್ ಅನ್ನು ಹೊಂದಿರುವ ಸಿರಪ್ ಅನ್ನು ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಸುಂಗುವರ್ಚತ್ರಂನಲ್ಲಿ ಶ್ರೀಸನ್ ಫಾರ್ಮಾ ಉತ್ಪಾದಿಸಿದೆ ಎಂದು ಹೇಳಿಕೆ ತಿಳಿಸಿದೆ.

14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...