Homeಮುಖಪುಟ5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ, ರಾಜ್ಯದ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಶಿಕ್ಷಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಹಿಂಪಡೆದಂತಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾನೂನು ಅಡೆತಡೆಗಳಿಂದಾಗಿ ಈ ಮೀಸಲಾತಿಯು ಜಾರಿಯಾಗಿರಲಿಲ್ಲ, ಅಲ್ಲದೆ ಮೀಸಲಾತಿ ನೀಡುವ ಸುಗ್ರೀವಾಜ್ಞೆಯು 2014ರಲ್ಲೇ ಅವಧಿ ಮುಕ್ತಾಯಗೊಂಡಿತ್ತು (ಲ್ಯಾಪ್ಸ್ ಆಗಿತ್ತು). ಮಂಗಳವಾರ ಹೊರಡಿಸಲಾದ ಸರ್ಕಾರದ ಆದೇಶವನ್ನು ಪ್ರಸ್ತುತ ಸ್ಥಿತಿಯನ್ನು ಅಧಿಕೃತವಾಗಿ ಘೋಷಿಸುವ ಒಂದು ತಾಂತ್ರಿಕ ಕ್ರಮವೆಂದು ಪರಿಗಣಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ಅಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಮುಸ್ಲಿಮರಿಗೆ ಮತ್ತು ಮರಾಠರಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಘೋಷಿಸಿತ್ತು. 2014ರ ವಿಧಾನಸಭಾ ಚುನಾವಣೆಗೆ ಮುನ್ನ ಅಂದಿನ ಸಚಿವ ಮತ್ತು ಕಾಂಗ್ರೆಸ್ ನಾಯಕ ಅರಿಫ್ ನಸೀಮ್ ಖಾನ್ ಈ ಘೋಷಣೆಯನ್ನು ಮಾಡಿದ್ದರು.

ಇದರ ಅಡಿಯಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಮರಾಠ ಮತ್ತು ಮುಸ್ಲಿಂ ವಿಭಾಗಗಳಿಗೆ ಕ್ರಮವಾಗಿ ಶೇಕಡ 16 ಮತ್ತು ಶೇಕಡ 5ರಷ್ಟು ಮೀಸಲಾತಿಯನ್ನು ನೀಡಬೇಕಾಗಿತ್ತು. ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ, ನಾರಾಯಣ ರಾಣೆ ಸಮಿತಿಯ ವರದಿಯು ಆಧಾರವಾಗಿತ್ತು. ಮುಸ್ಲಿಂ ಮೀಸಲಾತಿಯ ಬೇಡಿಕೆಯೂ ದೀರ್ಘಕಾಲದದಾಗಿದ್ದು, ಈ ಹಿಂದೆ ಸಾಚಾರ್ ಸಮಿತಿಯು ಕೂಡ ಇದಕ್ಕೆ ಶಿಫಾರಸು ಮಾಡಿತ್ತು.

2014ರಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್ಇಬಿಸಿ) ಅಡಿಯಲ್ಲಿ (ವಿಶೇಷ ಹಿಂದುಳಿದ ವರ್ಗ-ಎ ಅಥವಾ ಎಸ್‌ಬಿಸಿ-ಎ ಮೂಲಕ) ಮುಸ್ಲಿಮರಿಗೆ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡ 5ರಷ್ಟು ಮೀಸಲಾತಿಯನ್ನು ನೀಡುವ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ ಚುನಾವಣೆಯ ನಂತರ, ಬಿಜೆಪಿ ಅಧಿಕಾರಕ್ಕೆ ಬರುವುದರೊಂದಿಗೆ ಸರ್ಕಾರ ಬದಲಾಯಿತು. ನಿಗದಿತ ಆರು ತಿಂಗಳ ಕಾಲಮಿತಿಯೊಳಗೆ ಅದರ ಬಗ್ಗೆ ಕಾನೂನನ್ನು ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾದ ಕಾರಣ, 2014ರ ಡಿಸೆಂಬರ್ 23 ರಂದು ಆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿತ್ತು.

2014ರಲ್ಲಿ ಸಂಜಿತ್ ಶುಕ್ಲಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ಮೂಲಕ ಈ ವಿಷಯವನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಉದ್ಯೋಗಗಳಲ್ಲಿನ ಶೇಕಡಾ 5 ರಷ್ಟು ಮೀಸಲಾತಿಯ ಅನುಷ್ಠಾನವನ್ನು ರದ್ದುಗೊಳಿಸಿತ್ತು, ಆದರೆ ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹಸಿರು ನಿಶಾನೆ ತೋರಿಸಿತ್ತು. ಆದರೆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿದ್ದರಿಂದ ಶಿಕ್ಷಣದಲ್ಲಿನ ಮೀಸಲಾತಿಯೂ ಜಾರಿಗೆ ಬರಲಿಲ್ಲ. ಆದಾಗ್ಯೂ, ಸರ್ಕಾರವು 2014 ಮತ್ತು 2015ರಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ವಿವಿಧ ಆದೇಶಗಳನ್ನು ಹೊರಡಿಸಿತ್ತು. ಜಾತಿ ಪ್ರಮಾಣಪತ್ರಗಳ ವಿತರಣೆ ಮತ್ತು ಸಿಂಧುತ್ವ ಪ್ರಕ್ರಿಯೆಯೂ ಅವುಗಳಲ್ಲಿ ಒಂದಾಗಿತ್ತು.

ಪ್ರಸ್ತುತ ಸರ್ಕಾರ ಈಗ 2014 ಮತ್ತು 2015ರಲ್ಲಿ ಈ ಸಂಬಂಧ ಹೊರಡಿಸಲಾಗಿದ್ದ ಎಲ್ಲಾ ಆದೇಶಗಳನ್ನು ಅಧಿಕೃತವಾಗಿ ರದ್ದುಗೊಳಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಎಸ್‌ಇಬಿಸಿ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡ 5ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು, ಬಿಜೆಪಿಗೆ ತನ್ನ ಪಕ್ಷದ ಅಥವಾ ತನ್ನ ಮಿತ್ರಪಕ್ಷಗಳ ಮುಸ್ಲಿಂ ನಾಯಕರ ಬಗ್ಗೆ ಯಾವುದೇ ಗೌರವವಿಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ. ಅಲ್ಲದೆ, ಈ ಮುಸ್ಲಿಂ ನಾಯಕರು ಬಿಜೆಪಿಯಿಂದ ನ್ಯಾಯ ಕೊಡಿಸಲು ಅಸಮರ್ಥರಾಗಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಎನ್‌ಸಿಪಿ-ಎಸ್‌ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಕಿಡಿಕಾರಿದ್ದಾರೆ.

ಶಿವಸೇನಾ ನಾಯಕ ಕೃಷ್ಣ ಹೆಗ್ಡೆ ಈ ಬಗ್ಗೆ ಪ್ರತಿಕ್ರಿಯಿಸಿ, “ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಈ ವಿಷಯದಲ್ಲಿ ಕಾನೂನು ರೂಪಿಸುವಲ್ಲಿ ವಿಫಲವಾಗಿತ್ತು ಮತ್ತು ಕೇವಲ ತಾತ್ಕಾಲಿಕ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಹಿಂದುಳಿದ ಸಮುದಾಯಗಳಿಂದ ಮೀಸಲಾತಿಯನ್ನು ಕಸಿದುಕೊಂಡಿತ್ತು. ಈಗ ಮಹಾಯುತಿ ಸರ್ಕಾರವು ಹಿಂದುಳಿದ ಸಮುದಾಯಗಳ ಸಂಪೂರ್ಣ ಮೀಸಲಾತಿಯನ್ನು ಮರುಸ್ಥಾಪಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...