Homeಮುಖಪುಟ5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ, ರಾಜ್ಯದ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಶಿಕ್ಷಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಹಿಂಪಡೆದಂತಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾನೂನು ಅಡೆತಡೆಗಳಿಂದಾಗಿ ಈ ಮೀಸಲಾತಿಯು ಜಾರಿಯಾಗಿರಲಿಲ್ಲ, ಅಲ್ಲದೆ ಮೀಸಲಾತಿ ನೀಡುವ ಸುಗ್ರೀವಾಜ್ಞೆಯು 2014ರಲ್ಲೇ ಅವಧಿ ಮುಕ್ತಾಯಗೊಂಡಿತ್ತು (ಲ್ಯಾಪ್ಸ್ ಆಗಿತ್ತು). ಮಂಗಳವಾರ ಹೊರಡಿಸಲಾದ ಸರ್ಕಾರದ ಆದೇಶವನ್ನು ಪ್ರಸ್ತುತ ಸ್ಥಿತಿಯನ್ನು ಅಧಿಕೃತವಾಗಿ ಘೋಷಿಸುವ ಒಂದು ತಾಂತ್ರಿಕ ಕ್ರಮವೆಂದು ಪರಿಗಣಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ಅಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಮುಸ್ಲಿಮರಿಗೆ ಮತ್ತು ಮರಾಠರಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಘೋಷಿಸಿತ್ತು. 2014ರ ವಿಧಾನಸಭಾ ಚುನಾವಣೆಗೆ ಮುನ್ನ ಅಂದಿನ ಸಚಿವ ಮತ್ತು ಕಾಂಗ್ರೆಸ್ ನಾಯಕ ಅರಿಫ್ ನಸೀಮ್ ಖಾನ್ ಈ ಘೋಷಣೆಯನ್ನು ಮಾಡಿದ್ದರು.

ಇದರ ಅಡಿಯಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಮರಾಠ ಮತ್ತು ಮುಸ್ಲಿಂ ವಿಭಾಗಗಳಿಗೆ ಕ್ರಮವಾಗಿ ಶೇಕಡ 16 ಮತ್ತು ಶೇಕಡ 5ರಷ್ಟು ಮೀಸಲಾತಿಯನ್ನು ನೀಡಬೇಕಾಗಿತ್ತು. ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ, ನಾರಾಯಣ ರಾಣೆ ಸಮಿತಿಯ ವರದಿಯು ಆಧಾರವಾಗಿತ್ತು. ಮುಸ್ಲಿಂ ಮೀಸಲಾತಿಯ ಬೇಡಿಕೆಯೂ ದೀರ್ಘಕಾಲದದಾಗಿದ್ದು, ಈ ಹಿಂದೆ ಸಾಚಾರ್ ಸಮಿತಿಯು ಕೂಡ ಇದಕ್ಕೆ ಶಿಫಾರಸು ಮಾಡಿತ್ತು.

2014ರಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್ಇಬಿಸಿ) ಅಡಿಯಲ್ಲಿ (ವಿಶೇಷ ಹಿಂದುಳಿದ ವರ್ಗ-ಎ ಅಥವಾ ಎಸ್‌ಬಿಸಿ-ಎ ಮೂಲಕ) ಮುಸ್ಲಿಮರಿಗೆ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡ 5ರಷ್ಟು ಮೀಸಲಾತಿಯನ್ನು ನೀಡುವ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ ಚುನಾವಣೆಯ ನಂತರ, ಬಿಜೆಪಿ ಅಧಿಕಾರಕ್ಕೆ ಬರುವುದರೊಂದಿಗೆ ಸರ್ಕಾರ ಬದಲಾಯಿತು. ನಿಗದಿತ ಆರು ತಿಂಗಳ ಕಾಲಮಿತಿಯೊಳಗೆ ಅದರ ಬಗ್ಗೆ ಕಾನೂನನ್ನು ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾದ ಕಾರಣ, 2014ರ ಡಿಸೆಂಬರ್ 23 ರಂದು ಆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿತ್ತು.

2014ರಲ್ಲಿ ಸಂಜಿತ್ ಶುಕ್ಲಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ಮೂಲಕ ಈ ವಿಷಯವನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಉದ್ಯೋಗಗಳಲ್ಲಿನ ಶೇಕಡಾ 5 ರಷ್ಟು ಮೀಸಲಾತಿಯ ಅನುಷ್ಠಾನವನ್ನು ರದ್ದುಗೊಳಿಸಿತ್ತು, ಆದರೆ ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹಸಿರು ನಿಶಾನೆ ತೋರಿಸಿತ್ತು. ಆದರೆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿದ್ದರಿಂದ ಶಿಕ್ಷಣದಲ್ಲಿನ ಮೀಸಲಾತಿಯೂ ಜಾರಿಗೆ ಬರಲಿಲ್ಲ. ಆದಾಗ್ಯೂ, ಸರ್ಕಾರವು 2014 ಮತ್ತು 2015ರಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ವಿವಿಧ ಆದೇಶಗಳನ್ನು ಹೊರಡಿಸಿತ್ತು. ಜಾತಿ ಪ್ರಮಾಣಪತ್ರಗಳ ವಿತರಣೆ ಮತ್ತು ಸಿಂಧುತ್ವ ಪ್ರಕ್ರಿಯೆಯೂ ಅವುಗಳಲ್ಲಿ ಒಂದಾಗಿತ್ತು.

ಪ್ರಸ್ತುತ ಸರ್ಕಾರ ಈಗ 2014 ಮತ್ತು 2015ರಲ್ಲಿ ಈ ಸಂಬಂಧ ಹೊರಡಿಸಲಾಗಿದ್ದ ಎಲ್ಲಾ ಆದೇಶಗಳನ್ನು ಅಧಿಕೃತವಾಗಿ ರದ್ದುಗೊಳಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಎಸ್‌ಇಬಿಸಿ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡ 5ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು, ಬಿಜೆಪಿಗೆ ತನ್ನ ಪಕ್ಷದ ಅಥವಾ ತನ್ನ ಮಿತ್ರಪಕ್ಷಗಳ ಮುಸ್ಲಿಂ ನಾಯಕರ ಬಗ್ಗೆ ಯಾವುದೇ ಗೌರವವಿಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ. ಅಲ್ಲದೆ, ಈ ಮುಸ್ಲಿಂ ನಾಯಕರು ಬಿಜೆಪಿಯಿಂದ ನ್ಯಾಯ ಕೊಡಿಸಲು ಅಸಮರ್ಥರಾಗಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಎನ್‌ಸಿಪಿ-ಎಸ್‌ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಕಿಡಿಕಾರಿದ್ದಾರೆ.

ಶಿವಸೇನಾ ನಾಯಕ ಕೃಷ್ಣ ಹೆಗ್ಡೆ ಈ ಬಗ್ಗೆ ಪ್ರತಿಕ್ರಿಯಿಸಿ, “ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಈ ವಿಷಯದಲ್ಲಿ ಕಾನೂನು ರೂಪಿಸುವಲ್ಲಿ ವಿಫಲವಾಗಿತ್ತು ಮತ್ತು ಕೇವಲ ತಾತ್ಕಾಲಿಕ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಹಿಂದುಳಿದ ಸಮುದಾಯಗಳಿಂದ ಮೀಸಲಾತಿಯನ್ನು ಕಸಿದುಕೊಂಡಿತ್ತು. ಈಗ ಮಹಾಯುತಿ ಸರ್ಕಾರವು ಹಿಂದುಳಿದ ಸಮುದಾಯಗಳ ಸಂಪೂರ್ಣ ಮೀಸಲಾತಿಯನ್ನು ಮರುಸ್ಥಾಪಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...