Homeಮುಖಪುಟಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

- Advertisement -
- Advertisement -

ಸರ್ಕಾರಿ ಕಚೇರಿಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಎಲ್ಲಾ ಅಧಿಕೃತ ಸಂವಹನಗಳಿಗೆ ಮರಾಠಿ ಬಳಕೆಯನ್ನು ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯ ಯೋಜನಾ ಇಲಾಖೆ ಹೊರಡಿಸಿದ ಈ ಅಧಿಸೂಚನೆಯಲ್ಲಿ, ನಿರ್ದೇಶನವನ್ನು ಪಾಲಿಸದ ಸರ್ಕಾರಿ ನೌಕರರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಆದೇಶ ಪಾಲಿಸದಿರುವ ಬಗ್ಗೆ ಅಗತ್ಯ ಕ್ರಮಕ್ಕಾಗಿ ಕಚೇರಿ ಅಥವಾ ಇಲಾಖಾ ಮುಖ್ಯಸ್ಥರಿಗೆ ದೂರುಗಳನ್ನು ಸಲ್ಲಿಸಬಹುದು ಎಂದು ಅಧಿಸೂಚನೆ ಹೇಳಿದೆ. ರಾಜ್ಯದ ಎಲ್ಲಾ ರೀತಿಯ ಸಂವಹನ, ಅಧಿಕೃತ ಚಿಹ್ನೆಗಳು ಮತ್ತು ದಾಖಲಾತಿಗಳಿಗೆ ಈ ಆದೇಶವು ಅನ್ವಯಿಸುತ್ತದೆ ಎಂದು ಅಧಿಸೂಚನೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತದ ಹೊರಗಿನಿಂದ ಮತ್ತು ಮರಾಠಿ ಮಾತನಾಡದ ರಾಜ್ಯಗಳಿಂದ ಬರುವ ಸಂದರ್ಶಕರನ್ನು ಹೊರತುಪಡಿಸಿ, ಎಲ್ಲಾ ಅಧಿಕಾರಿಗಳು ಸಂದರ್ಶಕರೊಂದಿಗೆ ಸಂವಹನ ನಡೆಸುವಾಗ ಮರಾಠಿ ಭಾಷೆಯನ್ನು ಬಳಸಬೇಕು” ಎಂದು ಅಧಿಸೂಚನೆಯನ್ನು ಉಲ್ಲೇಖಿಸಿದೆ.

ಎಲ್ಲಾ ಸರ್ಕಾರಿ ಕಚೇರಿಗಳು, ಪುರಸಭೆ ಸಂಸ್ಥೆಗಳು, ರಾಜ್ಯ ನಿಗಮಗಳು ಮತ್ತು ಸಾರ್ವಜನಿಕ ಸಂಸ್ಥೆಗಳು ಕಂಪ್ಯೂಟರ್ ಕೀಪ್ಯಾಡ್‌ಗಳು ಮತ್ತು ಮುದ್ರಕಗಳಲ್ಲಿ ರೋಮನ್ ಅಕ್ಷರಗಳೊಂದಿಗೆ ಮರಾಠಿ ದೇವನಾಗರಿ ಲಿಪಿಯಲ್ಲಿ ಪಠ್ಯವನ್ನು ಪ್ರದರ್ಶಿಸಬೇಕು ಎಂದು ಆದೇಶ ಹೇಳಿದೆ ಪಿಟಿಐ ವರದಿ ಮಾಡಿದೆ.

ಹೊಸ ವ್ಯವಹಾರಗಳು ಇಂಗ್ಲಿಷ್‌ನಲ್ಲಿ ಅನುವಾದವಿಲ್ಲದೆ ಮರಾಠಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

“ಮಹಾರಾಷ್ಟ್ರ ಸರ್ಕಾರ ಅನುಮೋದಿತ ಕಂಪನಿಗಳು, ಮಂಡಳಿಗಳು, ನಿಗಮಗಳು, ಅರೆ ಸರ್ಕಾರಿ ಸಂಸ್ಥೆಗಳು, ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳು ಇತ್ಯಾದಿಗಳು ಮರಾಠಿ ಪತ್ರಿಕೆಗಳಲ್ಲಿ ನೀಡುವ ಎಲ್ಲಾ ಜಾಹೀರಾತುಗಳು, ಟೆಂಡರ್‌ಗಳು, ಸೂಚನೆಗಳು ಇತ್ಯಾದಿಗಳನ್ನು ಮರಾಠಿ ಭಾಷೆಯಲ್ಲಿ ಮಾತ್ರ ನೀಡಬೇಕು” ಎಂದು ಅಧಿಸೂಚನೆ ಹೇಳಿದೆ ಎಂದು ದಿ ಹಿಂದೂ ಉಲ್ಲೇಖಿಸಿದೆ.

ಕಳೆದ ವರ್ಷ, ರಾಜ್ಯ ಸಚಿವ ಸಂಪುಟವು ಮರಾಠಿ ಭಾಷಾ ನೀತಿಯನ್ನು ಅನುಮೋದಿಸಿತ್ತು. ಈ ನೀತಿಯು ಭಾಷೆಯ ಸಂರಕ್ಷಣೆ, ಪ್ರಚಾರ, ಪ್ರಸರಣ ಮತ್ತು ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸಾರ್ವಜನಿಕ ವ್ಯವಹಾರಗಳಲ್ಲಿ ಭಾಷೆಯನ್ನು ಬಳಸುವಂತೆ ಶಿಫಾರಸು ಮಾಡಿದೆ.

ಇದನ್ನೂಓದಿ:  ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...