Homeಮುಖಪುಟ89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

- Advertisement -
- Advertisement -

ರಾಜ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ 89,000 ಕೋಟಿ ರೂ. ಮೌಲ್ಯದ ಬಿಲ್‌ಗಳನ್ನು ಪಾವತಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಹಾರಾಷ್ಟ್ರದ ಗುತ್ತಿಗೆದಾರರು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದ್ದಾರೆ. ಮುಂಬೈ, ನಾಗ್ಪುರ ಮತ್ತು ಛತ್ರಪತಿ ಸಂಭಾಜಿನಗರದ ಹೈಕೋರ್ಟ್ ಪೀಠಗಳ ಮುಂದೆ ಅರ್ಜಿಗಳನ್ನು ಸಲ್ಲಿಸುವುದಾಗಿ ಗುತ್ತಿಗೆದಾರರ ಸಂಘಟನೆ ಹೇಳಿದೆ ಎಂದು ವರದಿಯಾಗಿದೆ.

“ಸರ್ಕಾರದಿಂದ ಬರಬೇಕಿದ್ದ ನಮ್ಮ ಬಾಕಿ ಸುಮಾರು 89,000 ಕೋಟಿ ರೂ.ಗಳಿರುವಾಗ, ರಾಜ್ಯ ಸರ್ಕಾರ ಕೇವಲ 4,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುತ್ತಿದೆ. ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ ಮತ್ತು ರಾಜ್ಯ ಎಂಜಿನಿಯರ್‌ಗಳ ಸಂಘವು ಥಾಣೆಯಲ್ಲಿ ರಾಜ್ಯಮಟ್ಟದ ಸಭೆ ನಡೆಸಿ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವ ನಿರ್ಧಾರವನ್ನು ತೆಗೆದುಕೊಂಡಿತು” ಎಂದು ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಮಿಲಿಂಗ್ ಭೋಸ್ಲೆ ಹೇಳಿದ್ದಾರೆ. ಶುಕ್ರವಾರ ಥಾಣೆಯಲ್ಲಿ ಸಭೆ ನಡೆಯಿತು ಎಂದು ವರದಿಗಳು ಹೇಳಿವೆ.

ಕಳೆದ ವರ್ಷದಿಂದ ಎರಡೂ ಸಂಘಗಳು ಸರ್ಕಾರದಿಂದ ತಮ್ಮ ಬಾಕಿ ಹಣವನ್ನು ಕೇಳುತ್ತಿವೆ. ಫೆಬ್ರವರಿಯಲ್ಲಿ, ಅವರು ರಾಜ್ಯದ ಉನ್ನತ ನಾಯಕರಿಗೆ ಪತ್ರ ಬರೆದು, ಜುಲೈ 2024 ರಿಂದ ವಿವಿಧ ಇಲಾಖೆಗಳಿಂದ 89,000 ಕೋಟಿ ರೂ.ಗಳ ಪಾವತಿಗಳನ್ನು ಪಾವತಿಸದ ಕಾರಣ ನಡೆಯುತ್ತಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದರು. ರಾಜ್ಯಾದ್ಯಂತ ಹಂತ ಹಂತವಾಗಿ ಕೆಲಸಗಳನ್ನು ನಿಲ್ಲಿಸಿದರೂ, ಗುತ್ತಿಗೆದಾರರಿಗೆ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ ಎಂದು ವರದಿಯಾಗಿದೆ.

ಗುತ್ತಿಗೆದಾರರ “89,000 ಕೋಟಿ ರೂ. ಬಾಕಿ”ಯಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಯಿಂದ 46,000 ಕೋಟಿ ರೂ.ಗಳು ಬಾಕಿಯಿದ್ದು, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಡಿಯಲ್ಲಿ ಜಲ ಜೀವನ್ ಮಿಷನ್ ನಿಂದ 18,000 ಕೋಟಿ ರೂ.ಗಳು ಬಾಕಿಯಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 8,600 ಕೋಟಿ ರೂ.ಗಳು, ನೀರಾವರಿ ಇಲಾಖೆಯಿಂದ 19,700 ಕೋಟಿ ರೂ.ಗಳು ಮತ್ತು ಡಿಪಿಡಿಸಿ, ಶಾಸಕರ ನಿಧಿ ಮತ್ತು ಸಂಸದರ ನಿಧಿಯಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ 1,700 ಕೋಟಿ ರೂ.ಗಳನ್ನು ಸರ್ಕಾರ ಬಾಕಿಯಿಟ್ಟಿವೆ.

ಮಾರ್ಚ್‌ನಲ್ಲಿ ಬಿಡುಗಡೆಯಾದ 4,000 ಕೋಟಿ ರೂ.ಗಳು ಒಟ್ಟು ಬಾಕಿಯ ಕೇವಲ 5 ಪ್ರತಿಶತದಷ್ಟಿದ್ದು, ಗುತ್ತಿಗೆದಾರರು ಇಷ್ಟು ಸಣ್ಣ ಮೊತ್ತದ ಕಾಮಗಾರಿಗಳನ್ನು ಮುಂದುವರಿಸುವುದು ಅಸಾಧ್ಯ ಎಂದು ಮಿಲಿಂಗ್ ಭೋಸ್ಲೆ ಹೇಳಿದ್ದರೆ. “ಪರಿಣಾಮವಾಗಿ, ಬಿಲ್ ಮೊತ್ತವನ್ನು ಪಾವತಿಸದಿದ್ದರೆ, ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಇದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಖಂಡಿತವಾಗಿಯೂ ಸ್ಥಗಿತಗೊಳ್ಳಲು ಕಾರಣವಾಗುತ್ತದೆ” ಎಂದು ಭೋಸ್ಲೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...