Homeಮುಖಪುಟ89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

- Advertisement -
- Advertisement -

ರಾಜ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ 89,000 ಕೋಟಿ ರೂ. ಮೌಲ್ಯದ ಬಿಲ್‌ಗಳನ್ನು ಪಾವತಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಹಾರಾಷ್ಟ್ರದ ಗುತ್ತಿಗೆದಾರರು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದ್ದಾರೆ. ಮುಂಬೈ, ನಾಗ್ಪುರ ಮತ್ತು ಛತ್ರಪತಿ ಸಂಭಾಜಿನಗರದ ಹೈಕೋರ್ಟ್ ಪೀಠಗಳ ಮುಂದೆ ಅರ್ಜಿಗಳನ್ನು ಸಲ್ಲಿಸುವುದಾಗಿ ಗುತ್ತಿಗೆದಾರರ ಸಂಘಟನೆ ಹೇಳಿದೆ ಎಂದು ವರದಿಯಾಗಿದೆ.

“ಸರ್ಕಾರದಿಂದ ಬರಬೇಕಿದ್ದ ನಮ್ಮ ಬಾಕಿ ಸುಮಾರು 89,000 ಕೋಟಿ ರೂ.ಗಳಿರುವಾಗ, ರಾಜ್ಯ ಸರ್ಕಾರ ಕೇವಲ 4,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುತ್ತಿದೆ. ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ ಮತ್ತು ರಾಜ್ಯ ಎಂಜಿನಿಯರ್‌ಗಳ ಸಂಘವು ಥಾಣೆಯಲ್ಲಿ ರಾಜ್ಯಮಟ್ಟದ ಸಭೆ ನಡೆಸಿ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವ ನಿರ್ಧಾರವನ್ನು ತೆಗೆದುಕೊಂಡಿತು” ಎಂದು ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಮಿಲಿಂಗ್ ಭೋಸ್ಲೆ ಹೇಳಿದ್ದಾರೆ. ಶುಕ್ರವಾರ ಥಾಣೆಯಲ್ಲಿ ಸಭೆ ನಡೆಯಿತು ಎಂದು ವರದಿಗಳು ಹೇಳಿವೆ.

ಕಳೆದ ವರ್ಷದಿಂದ ಎರಡೂ ಸಂಘಗಳು ಸರ್ಕಾರದಿಂದ ತಮ್ಮ ಬಾಕಿ ಹಣವನ್ನು ಕೇಳುತ್ತಿವೆ. ಫೆಬ್ರವರಿಯಲ್ಲಿ, ಅವರು ರಾಜ್ಯದ ಉನ್ನತ ನಾಯಕರಿಗೆ ಪತ್ರ ಬರೆದು, ಜುಲೈ 2024 ರಿಂದ ವಿವಿಧ ಇಲಾಖೆಗಳಿಂದ 89,000 ಕೋಟಿ ರೂ.ಗಳ ಪಾವತಿಗಳನ್ನು ಪಾವತಿಸದ ಕಾರಣ ನಡೆಯುತ್ತಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದರು. ರಾಜ್ಯಾದ್ಯಂತ ಹಂತ ಹಂತವಾಗಿ ಕೆಲಸಗಳನ್ನು ನಿಲ್ಲಿಸಿದರೂ, ಗುತ್ತಿಗೆದಾರರಿಗೆ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ ಎಂದು ವರದಿಯಾಗಿದೆ.

ಗುತ್ತಿಗೆದಾರರ “89,000 ಕೋಟಿ ರೂ. ಬಾಕಿ”ಯಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಯಿಂದ 46,000 ಕೋಟಿ ರೂ.ಗಳು ಬಾಕಿಯಿದ್ದು, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಡಿಯಲ್ಲಿ ಜಲ ಜೀವನ್ ಮಿಷನ್ ನಿಂದ 18,000 ಕೋಟಿ ರೂ.ಗಳು ಬಾಕಿಯಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 8,600 ಕೋಟಿ ರೂ.ಗಳು, ನೀರಾವರಿ ಇಲಾಖೆಯಿಂದ 19,700 ಕೋಟಿ ರೂ.ಗಳು ಮತ್ತು ಡಿಪಿಡಿಸಿ, ಶಾಸಕರ ನಿಧಿ ಮತ್ತು ಸಂಸದರ ನಿಧಿಯಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ 1,700 ಕೋಟಿ ರೂ.ಗಳನ್ನು ಸರ್ಕಾರ ಬಾಕಿಯಿಟ್ಟಿವೆ.

ಮಾರ್ಚ್‌ನಲ್ಲಿ ಬಿಡುಗಡೆಯಾದ 4,000 ಕೋಟಿ ರೂ.ಗಳು ಒಟ್ಟು ಬಾಕಿಯ ಕೇವಲ 5 ಪ್ರತಿಶತದಷ್ಟಿದ್ದು, ಗುತ್ತಿಗೆದಾರರು ಇಷ್ಟು ಸಣ್ಣ ಮೊತ್ತದ ಕಾಮಗಾರಿಗಳನ್ನು ಮುಂದುವರಿಸುವುದು ಅಸಾಧ್ಯ ಎಂದು ಮಿಲಿಂಗ್ ಭೋಸ್ಲೆ ಹೇಳಿದ್ದರೆ. “ಪರಿಣಾಮವಾಗಿ, ಬಿಲ್ ಮೊತ್ತವನ್ನು ಪಾವತಿಸದಿದ್ದರೆ, ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಇದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಖಂಡಿತವಾಗಿಯೂ ಸ್ಥಗಿತಗೊಳ್ಳಲು ಕಾರಣವಾಗುತ್ತದೆ” ಎಂದು ಭೋಸ್ಲೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...