Homeಮುಖಪುಟ89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

- Advertisement -
- Advertisement -

ರಾಜ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ 89,000 ಕೋಟಿ ರೂ. ಮೌಲ್ಯದ ಬಿಲ್‌ಗಳನ್ನು ಪಾವತಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಹಾರಾಷ್ಟ್ರದ ಗುತ್ತಿಗೆದಾರರು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದ್ದಾರೆ. ಮುಂಬೈ, ನಾಗ್ಪುರ ಮತ್ತು ಛತ್ರಪತಿ ಸಂಭಾಜಿನಗರದ ಹೈಕೋರ್ಟ್ ಪೀಠಗಳ ಮುಂದೆ ಅರ್ಜಿಗಳನ್ನು ಸಲ್ಲಿಸುವುದಾಗಿ ಗುತ್ತಿಗೆದಾರರ ಸಂಘಟನೆ ಹೇಳಿದೆ ಎಂದು ವರದಿಯಾಗಿದೆ.

“ಸರ್ಕಾರದಿಂದ ಬರಬೇಕಿದ್ದ ನಮ್ಮ ಬಾಕಿ ಸುಮಾರು 89,000 ಕೋಟಿ ರೂ.ಗಳಿರುವಾಗ, ರಾಜ್ಯ ಸರ್ಕಾರ ಕೇವಲ 4,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುತ್ತಿದೆ. ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ ಮತ್ತು ರಾಜ್ಯ ಎಂಜಿನಿಯರ್‌ಗಳ ಸಂಘವು ಥಾಣೆಯಲ್ಲಿ ರಾಜ್ಯಮಟ್ಟದ ಸಭೆ ನಡೆಸಿ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವ ನಿರ್ಧಾರವನ್ನು ತೆಗೆದುಕೊಂಡಿತು” ಎಂದು ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಮಿಲಿಂಗ್ ಭೋಸ್ಲೆ ಹೇಳಿದ್ದಾರೆ. ಶುಕ್ರವಾರ ಥಾಣೆಯಲ್ಲಿ ಸಭೆ ನಡೆಯಿತು ಎಂದು ವರದಿಗಳು ಹೇಳಿವೆ.

ಕಳೆದ ವರ್ಷದಿಂದ ಎರಡೂ ಸಂಘಗಳು ಸರ್ಕಾರದಿಂದ ತಮ್ಮ ಬಾಕಿ ಹಣವನ್ನು ಕೇಳುತ್ತಿವೆ. ಫೆಬ್ರವರಿಯಲ್ಲಿ, ಅವರು ರಾಜ್ಯದ ಉನ್ನತ ನಾಯಕರಿಗೆ ಪತ್ರ ಬರೆದು, ಜುಲೈ 2024 ರಿಂದ ವಿವಿಧ ಇಲಾಖೆಗಳಿಂದ 89,000 ಕೋಟಿ ರೂ.ಗಳ ಪಾವತಿಗಳನ್ನು ಪಾವತಿಸದ ಕಾರಣ ನಡೆಯುತ್ತಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದರು. ರಾಜ್ಯಾದ್ಯಂತ ಹಂತ ಹಂತವಾಗಿ ಕೆಲಸಗಳನ್ನು ನಿಲ್ಲಿಸಿದರೂ, ಗುತ್ತಿಗೆದಾರರಿಗೆ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ ಎಂದು ವರದಿಯಾಗಿದೆ.

ಗುತ್ತಿಗೆದಾರರ “89,000 ಕೋಟಿ ರೂ. ಬಾಕಿ”ಯಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಯಿಂದ 46,000 ಕೋಟಿ ರೂ.ಗಳು ಬಾಕಿಯಿದ್ದು, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಡಿಯಲ್ಲಿ ಜಲ ಜೀವನ್ ಮಿಷನ್ ನಿಂದ 18,000 ಕೋಟಿ ರೂ.ಗಳು ಬಾಕಿಯಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 8,600 ಕೋಟಿ ರೂ.ಗಳು, ನೀರಾವರಿ ಇಲಾಖೆಯಿಂದ 19,700 ಕೋಟಿ ರೂ.ಗಳು ಮತ್ತು ಡಿಪಿಡಿಸಿ, ಶಾಸಕರ ನಿಧಿ ಮತ್ತು ಸಂಸದರ ನಿಧಿಯಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ 1,700 ಕೋಟಿ ರೂ.ಗಳನ್ನು ಸರ್ಕಾರ ಬಾಕಿಯಿಟ್ಟಿವೆ.

ಮಾರ್ಚ್‌ನಲ್ಲಿ ಬಿಡುಗಡೆಯಾದ 4,000 ಕೋಟಿ ರೂ.ಗಳು ಒಟ್ಟು ಬಾಕಿಯ ಕೇವಲ 5 ಪ್ರತಿಶತದಷ್ಟಿದ್ದು, ಗುತ್ತಿಗೆದಾರರು ಇಷ್ಟು ಸಣ್ಣ ಮೊತ್ತದ ಕಾಮಗಾರಿಗಳನ್ನು ಮುಂದುವರಿಸುವುದು ಅಸಾಧ್ಯ ಎಂದು ಮಿಲಿಂಗ್ ಭೋಸ್ಲೆ ಹೇಳಿದ್ದರೆ. “ಪರಿಣಾಮವಾಗಿ, ಬಿಲ್ ಮೊತ್ತವನ್ನು ಪಾವತಿಸದಿದ್ದರೆ, ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಇದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಖಂಡಿತವಾಗಿಯೂ ಸ್ಥಗಿತಗೊಳ್ಳಲು ಕಾರಣವಾಗುತ್ತದೆ” ಎಂದು ಭೋಸ್ಲೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...