Homeಮುಖಪುಟ89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

89,000 ಕೋಟಿ ರೂ. ಬಾಕಿ | ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ಗುತ್ತಿಗೆದಾರರು

- Advertisement -
- Advertisement -

ರಾಜ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ 89,000 ಕೋಟಿ ರೂ. ಮೌಲ್ಯದ ಬಿಲ್‌ಗಳನ್ನು ಪಾವತಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಹಾರಾಷ್ಟ್ರದ ಗುತ್ತಿಗೆದಾರರು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದ್ದಾರೆ. ಮುಂಬೈ, ನಾಗ್ಪುರ ಮತ್ತು ಛತ್ರಪತಿ ಸಂಭಾಜಿನಗರದ ಹೈಕೋರ್ಟ್ ಪೀಠಗಳ ಮುಂದೆ ಅರ್ಜಿಗಳನ್ನು ಸಲ್ಲಿಸುವುದಾಗಿ ಗುತ್ತಿಗೆದಾರರ ಸಂಘಟನೆ ಹೇಳಿದೆ ಎಂದು ವರದಿಯಾಗಿದೆ.

“ಸರ್ಕಾರದಿಂದ ಬರಬೇಕಿದ್ದ ನಮ್ಮ ಬಾಕಿ ಸುಮಾರು 89,000 ಕೋಟಿ ರೂ.ಗಳಿರುವಾಗ, ರಾಜ್ಯ ಸರ್ಕಾರ ಕೇವಲ 4,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುತ್ತಿದೆ. ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ ಮತ್ತು ರಾಜ್ಯ ಎಂಜಿನಿಯರ್‌ಗಳ ಸಂಘವು ಥಾಣೆಯಲ್ಲಿ ರಾಜ್ಯಮಟ್ಟದ ಸಭೆ ನಡೆಸಿ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವ ನಿರ್ಧಾರವನ್ನು ತೆಗೆದುಕೊಂಡಿತು” ಎಂದು ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಮಿಲಿಂಗ್ ಭೋಸ್ಲೆ ಹೇಳಿದ್ದಾರೆ. ಶುಕ್ರವಾರ ಥಾಣೆಯಲ್ಲಿ ಸಭೆ ನಡೆಯಿತು ಎಂದು ವರದಿಗಳು ಹೇಳಿವೆ.

ಕಳೆದ ವರ್ಷದಿಂದ ಎರಡೂ ಸಂಘಗಳು ಸರ್ಕಾರದಿಂದ ತಮ್ಮ ಬಾಕಿ ಹಣವನ್ನು ಕೇಳುತ್ತಿವೆ. ಫೆಬ್ರವರಿಯಲ್ಲಿ, ಅವರು ರಾಜ್ಯದ ಉನ್ನತ ನಾಯಕರಿಗೆ ಪತ್ರ ಬರೆದು, ಜುಲೈ 2024 ರಿಂದ ವಿವಿಧ ಇಲಾಖೆಗಳಿಂದ 89,000 ಕೋಟಿ ರೂ.ಗಳ ಪಾವತಿಗಳನ್ನು ಪಾವತಿಸದ ಕಾರಣ ನಡೆಯುತ್ತಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದರು. ರಾಜ್ಯಾದ್ಯಂತ ಹಂತ ಹಂತವಾಗಿ ಕೆಲಸಗಳನ್ನು ನಿಲ್ಲಿಸಿದರೂ, ಗುತ್ತಿಗೆದಾರರಿಗೆ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ ಎಂದು ವರದಿಯಾಗಿದೆ.

ಗುತ್ತಿಗೆದಾರರ “89,000 ಕೋಟಿ ರೂ. ಬಾಕಿ”ಯಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಯಿಂದ 46,000 ಕೋಟಿ ರೂ.ಗಳು ಬಾಕಿಯಿದ್ದು, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಡಿಯಲ್ಲಿ ಜಲ ಜೀವನ್ ಮಿಷನ್ ನಿಂದ 18,000 ಕೋಟಿ ರೂ.ಗಳು ಬಾಕಿಯಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 8,600 ಕೋಟಿ ರೂ.ಗಳು, ನೀರಾವರಿ ಇಲಾಖೆಯಿಂದ 19,700 ಕೋಟಿ ರೂ.ಗಳು ಮತ್ತು ಡಿಪಿಡಿಸಿ, ಶಾಸಕರ ನಿಧಿ ಮತ್ತು ಸಂಸದರ ನಿಧಿಯಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ 1,700 ಕೋಟಿ ರೂ.ಗಳನ್ನು ಸರ್ಕಾರ ಬಾಕಿಯಿಟ್ಟಿವೆ.

ಮಾರ್ಚ್‌ನಲ್ಲಿ ಬಿಡುಗಡೆಯಾದ 4,000 ಕೋಟಿ ರೂ.ಗಳು ಒಟ್ಟು ಬಾಕಿಯ ಕೇವಲ 5 ಪ್ರತಿಶತದಷ್ಟಿದ್ದು, ಗುತ್ತಿಗೆದಾರರು ಇಷ್ಟು ಸಣ್ಣ ಮೊತ್ತದ ಕಾಮಗಾರಿಗಳನ್ನು ಮುಂದುವರಿಸುವುದು ಅಸಾಧ್ಯ ಎಂದು ಮಿಲಿಂಗ್ ಭೋಸ್ಲೆ ಹೇಳಿದ್ದರೆ. “ಪರಿಣಾಮವಾಗಿ, ಬಿಲ್ ಮೊತ್ತವನ್ನು ಪಾವತಿಸದಿದ್ದರೆ, ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಇದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಖಂಡಿತವಾಗಿಯೂ ಸ್ಥಗಿತಗೊಳ್ಳಲು ಕಾರಣವಾಗುತ್ತದೆ” ಎಂದು ಭೋಸ್ಲೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...