Homeಎಕಾನಮಿರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ "ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು" ಎಂದಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಉತ್ತೇಜಿಸಲು, ಮಹಾರಾಷ್ಟ್ರ ಸರ್ಕಾರ 2020 ರ ಡಿಸೆಂಬರ್ 31 ರವರೆಗೆ ವಸತಿ ಘಟಕಗಳ ಮೇಲಿನ ಸ್ಟಾಂಪ್ ಶುಲ್ಕವನ್ನು ಶೇ. 5 ರಿಂದ ಶೇ. 2 ಕ್ಕೆ ತಾತ್ಕಾಲಿಕವಾಗಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2021 ರ ಜನವರಿ 1 ರಿಂದ ಮಾರ್ಚ್ 31, 2021 ರವರೆಗೆ ಮೂರು ತಿಂಗಳ ಕಾಲ ಸ್ಟಾಂಪ್ ಶುಲ್ಕ ಶೇ. 3 ರಷ್ಟು ಇರುತ್ತದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಸಮಯದಲ್ಲಿ ಆಸ್ತಿ ಖರೀದಿಸಲು ಮನೆ ಕೊಳ್ಳುವವರನ್ನು ಉತ್ತೇಜಿಸುವ ಸಲುವಾಗಿ ಸ್ಟಾಂಪ್ ಶುಲ್ಕವನ್ನು ಕಡಿತಗೊಳಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

“ಈ ಕ್ರಮವು ಗ್ರಾಹಕರಿಗೆ ಅನುಕೂಲವಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಹಲವು ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ. ಈ ಹಿಂದೆ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿದಾಗಲೆಲ್ಲಾ, ಇದು ಸರ್ಕಾರಿ ಖಜಾನೆಯ ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಕ್ರೆಡೈ ನ್ಯಾಷನಲ್ ನ ಅಧ್ಯಕ್ಷ ಜಾಕ್ಸೆ ಷಾ ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

“ಇದು ಸರ್ಕಾರವು ತೆಗೆದುಕೊಂಡ ಪೂರ್ವಭಾವಿ ಕ್ರಮವಾಗಿದೆ. ಇದು ಖಂಡಿತ ಅಗತ್ಯವಾಗಿದ್ದು, ಖರೀದಿದಾರರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ” ಎಂದು ಕಾನ್ಫಿಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಸತೀಶ್ ಮಗರ್ ತಿಳಿಸಿದರು.

ಇದನ್ನೂ ಓದಿ: ಬೇಹುಗಾರಿಕಾ ಬಂಡವಾಳಶಾಹಿಗಳು ಕೂತಲ್ಲೇ ನಿಮ್ಮನ್ನು ನಿಯಂತ್ರಿಸುತ್ತಿದ್ದಾರೆ – ಭಾಗ 1

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ “ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು” ಎಂದಿದ್ದಾರೆ.

“ಡಿಸೆಂಬರ್ 31 ರವರೆಗೆ ಸ್ಟಾಂಪ್ ಶುಲ್ಕವನ್ನು 5% ರಿಂದ 2% ಕ್ಕೆ ಇಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಎಂಎಂಆರ್ ರಿಯಾಲ್ಟಿಯ ಪುನರುಜ್ಜೀವನಕ್ಕೆ ಸಹಕಾರಿಯಾಗಿದೆ. ಕೊರೊನಾ ರೋಗದ ಮಧ್ಯೆ ಕುಂಠಿತಗೊಂಡಿರುವ ವಲಯಕ್ಕೆ ಇದು ಹೆಚ್ಚು ಅಗತ್ಯವಾಗಿದೆ. ಸ್ಟಾಂಪ್ ಶುಲ್ಕದ ಕಡಿಮೆ ವೆಚ್ಚವು ಮೊದಲ ಬಾರಿಗೆ ವ್ಯವಹರಿಸುವ ಮನೆ ಕೊಳ್ಳುವವರು ಮತ್ತು ಮರುಮಾರಾಟ ಮಾಡುವ ಫ್ಲಾಟ್ ಖರೀದಿದಾರರನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತದೆ” ಎಂದು ಕ್ರೆಡೈ-ಎಂಸಿಐಐ ಅಧ್ಯಕ್ಷ ನಯನ್ ಷಾ ಹೇಳಿದರು.

ಆಗಸ್ಟ್ 15 ರಂದು ರಾಜ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ರಾಜ್ಯದಲ್ಲಿ ಆಸ್ತಿ ನೋಂದಣಿಯ ಮೇಲಿನ ಸ್ಟಾಂಪ್ ಶುಲ್ಕವನ್ನು 2 ರಿಂದ 3 ಪ್ರತಿಶತದಷ್ಟು ಕಡಿತಗೊಳಿಸುವ ಸುಳಿವು ನೀಡಿದ್ದರು.

ಮುಂಬೈ, ಎಂಎಂಆರ್‌ಡಿಎ ಪ್ರದೇಶ ಮತ್ತು ಪುಣೆಗೆ ಎರಡು ವರ್ಷಗಳ ಅವಧಿಗೆ ಆಸ್ತಿಗಳ ಸ್ಟಾಂಪ್ ಶುಲ್ಕವನ್ನು 1% ರಷ್ಟು ಕಡಿಮೆಗೊಳಿಸುವುದಾಗಿ ಮಾರ್ಚ್ 6 ರಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.

ಇತರ ಪ್ರಮುಖ ರಾಜ್ಯಗಳಲ್ಲಿನ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಾಗಿ 5-8 ಪ್ರತಿಶತದ ನಡುವೆ ಇದೆ. ಆದರೆ ಕೆಲವು ರಾಜ್ಯಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯನ್ನು ಮಾಡಿಸಿದರೆ ಸ್ಟಾಂಪ್ ಶುಲ್ಕ ಕಡಿಮೆ ಇದೆ.

ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮಹಿಳಾ ಖರೀದಿದಾರರಿಗೆ ಸ್ಟಾಂಪ್ ಶುಲ್ಕದಲ್ಲಿ ವಿನಾಯತಿ ನೀಡಿವೆ.


ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...