Homeಎಕಾನಮಿರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ "ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು" ಎಂದಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಉತ್ತೇಜಿಸಲು, ಮಹಾರಾಷ್ಟ್ರ ಸರ್ಕಾರ 2020 ರ ಡಿಸೆಂಬರ್ 31 ರವರೆಗೆ ವಸತಿ ಘಟಕಗಳ ಮೇಲಿನ ಸ್ಟಾಂಪ್ ಶುಲ್ಕವನ್ನು ಶೇ. 5 ರಿಂದ ಶೇ. 2 ಕ್ಕೆ ತಾತ್ಕಾಲಿಕವಾಗಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2021 ರ ಜನವರಿ 1 ರಿಂದ ಮಾರ್ಚ್ 31, 2021 ರವರೆಗೆ ಮೂರು ತಿಂಗಳ ಕಾಲ ಸ್ಟಾಂಪ್ ಶುಲ್ಕ ಶೇ. 3 ರಷ್ಟು ಇರುತ್ತದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಸಮಯದಲ್ಲಿ ಆಸ್ತಿ ಖರೀದಿಸಲು ಮನೆ ಕೊಳ್ಳುವವರನ್ನು ಉತ್ತೇಜಿಸುವ ಸಲುವಾಗಿ ಸ್ಟಾಂಪ್ ಶುಲ್ಕವನ್ನು ಕಡಿತಗೊಳಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

“ಈ ಕ್ರಮವು ಗ್ರಾಹಕರಿಗೆ ಅನುಕೂಲವಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಹಲವು ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ. ಈ ಹಿಂದೆ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿದಾಗಲೆಲ್ಲಾ, ಇದು ಸರ್ಕಾರಿ ಖಜಾನೆಯ ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಕ್ರೆಡೈ ನ್ಯಾಷನಲ್ ನ ಅಧ್ಯಕ್ಷ ಜಾಕ್ಸೆ ಷಾ ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

“ಇದು ಸರ್ಕಾರವು ತೆಗೆದುಕೊಂಡ ಪೂರ್ವಭಾವಿ ಕ್ರಮವಾಗಿದೆ. ಇದು ಖಂಡಿತ ಅಗತ್ಯವಾಗಿದ್ದು, ಖರೀದಿದಾರರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ” ಎಂದು ಕಾನ್ಫಿಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಸತೀಶ್ ಮಗರ್ ತಿಳಿಸಿದರು.

ಇದನ್ನೂ ಓದಿ: ಬೇಹುಗಾರಿಕಾ ಬಂಡವಾಳಶಾಹಿಗಳು ಕೂತಲ್ಲೇ ನಿಮ್ಮನ್ನು ನಿಯಂತ್ರಿಸುತ್ತಿದ್ದಾರೆ – ಭಾಗ 1

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ “ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು” ಎಂದಿದ್ದಾರೆ.

“ಡಿಸೆಂಬರ್ 31 ರವರೆಗೆ ಸ್ಟಾಂಪ್ ಶುಲ್ಕವನ್ನು 5% ರಿಂದ 2% ಕ್ಕೆ ಇಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಎಂಎಂಆರ್ ರಿಯಾಲ್ಟಿಯ ಪುನರುಜ್ಜೀವನಕ್ಕೆ ಸಹಕಾರಿಯಾಗಿದೆ. ಕೊರೊನಾ ರೋಗದ ಮಧ್ಯೆ ಕುಂಠಿತಗೊಂಡಿರುವ ವಲಯಕ್ಕೆ ಇದು ಹೆಚ್ಚು ಅಗತ್ಯವಾಗಿದೆ. ಸ್ಟಾಂಪ್ ಶುಲ್ಕದ ಕಡಿಮೆ ವೆಚ್ಚವು ಮೊದಲ ಬಾರಿಗೆ ವ್ಯವಹರಿಸುವ ಮನೆ ಕೊಳ್ಳುವವರು ಮತ್ತು ಮರುಮಾರಾಟ ಮಾಡುವ ಫ್ಲಾಟ್ ಖರೀದಿದಾರರನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತದೆ” ಎಂದು ಕ್ರೆಡೈ-ಎಂಸಿಐಐ ಅಧ್ಯಕ್ಷ ನಯನ್ ಷಾ ಹೇಳಿದರು.

ಆಗಸ್ಟ್ 15 ರಂದು ರಾಜ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ರಾಜ್ಯದಲ್ಲಿ ಆಸ್ತಿ ನೋಂದಣಿಯ ಮೇಲಿನ ಸ್ಟಾಂಪ್ ಶುಲ್ಕವನ್ನು 2 ರಿಂದ 3 ಪ್ರತಿಶತದಷ್ಟು ಕಡಿತಗೊಳಿಸುವ ಸುಳಿವು ನೀಡಿದ್ದರು.

ಮುಂಬೈ, ಎಂಎಂಆರ್‌ಡಿಎ ಪ್ರದೇಶ ಮತ್ತು ಪುಣೆಗೆ ಎರಡು ವರ್ಷಗಳ ಅವಧಿಗೆ ಆಸ್ತಿಗಳ ಸ್ಟಾಂಪ್ ಶುಲ್ಕವನ್ನು 1% ರಷ್ಟು ಕಡಿಮೆಗೊಳಿಸುವುದಾಗಿ ಮಾರ್ಚ್ 6 ರಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.

ಇತರ ಪ್ರಮುಖ ರಾಜ್ಯಗಳಲ್ಲಿನ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಾಗಿ 5-8 ಪ್ರತಿಶತದ ನಡುವೆ ಇದೆ. ಆದರೆ ಕೆಲವು ರಾಜ್ಯಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯನ್ನು ಮಾಡಿಸಿದರೆ ಸ್ಟಾಂಪ್ ಶುಲ್ಕ ಕಡಿಮೆ ಇದೆ.

ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮಹಿಳಾ ಖರೀದಿದಾರರಿಗೆ ಸ್ಟಾಂಪ್ ಶುಲ್ಕದಲ್ಲಿ ವಿನಾಯತಿ ನೀಡಿವೆ.


ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...