Homeಎಕಾನಮಿರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ "ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು" ಎಂದಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಉತ್ತೇಜಿಸಲು, ಮಹಾರಾಷ್ಟ್ರ ಸರ್ಕಾರ 2020 ರ ಡಿಸೆಂಬರ್ 31 ರವರೆಗೆ ವಸತಿ ಘಟಕಗಳ ಮೇಲಿನ ಸ್ಟಾಂಪ್ ಶುಲ್ಕವನ್ನು ಶೇ. 5 ರಿಂದ ಶೇ. 2 ಕ್ಕೆ ತಾತ್ಕಾಲಿಕವಾಗಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2021 ರ ಜನವರಿ 1 ರಿಂದ ಮಾರ್ಚ್ 31, 2021 ರವರೆಗೆ ಮೂರು ತಿಂಗಳ ಕಾಲ ಸ್ಟಾಂಪ್ ಶುಲ್ಕ ಶೇ. 3 ರಷ್ಟು ಇರುತ್ತದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಸಮಯದಲ್ಲಿ ಆಸ್ತಿ ಖರೀದಿಸಲು ಮನೆ ಕೊಳ್ಳುವವರನ್ನು ಉತ್ತೇಜಿಸುವ ಸಲುವಾಗಿ ಸ್ಟಾಂಪ್ ಶುಲ್ಕವನ್ನು ಕಡಿತಗೊಳಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

“ಈ ಕ್ರಮವು ಗ್ರಾಹಕರಿಗೆ ಅನುಕೂಲವಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಹಲವು ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ. ಈ ಹಿಂದೆ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿದಾಗಲೆಲ್ಲಾ, ಇದು ಸರ್ಕಾರಿ ಖಜಾನೆಯ ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಕ್ರೆಡೈ ನ್ಯಾಷನಲ್ ನ ಅಧ್ಯಕ್ಷ ಜಾಕ್ಸೆ ಷಾ ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

“ಇದು ಸರ್ಕಾರವು ತೆಗೆದುಕೊಂಡ ಪೂರ್ವಭಾವಿ ಕ್ರಮವಾಗಿದೆ. ಇದು ಖಂಡಿತ ಅಗತ್ಯವಾಗಿದ್ದು, ಖರೀದಿದಾರರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ” ಎಂದು ಕಾನ್ಫಿಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಸತೀಶ್ ಮಗರ್ ತಿಳಿಸಿದರು.

ಇದನ್ನೂ ಓದಿ: ಬೇಹುಗಾರಿಕಾ ಬಂಡವಾಳಶಾಹಿಗಳು ಕೂತಲ್ಲೇ ನಿಮ್ಮನ್ನು ನಿಯಂತ್ರಿಸುತ್ತಿದ್ದಾರೆ – ಭಾಗ 1

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ “ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು” ಎಂದಿದ್ದಾರೆ.

“ಡಿಸೆಂಬರ್ 31 ರವರೆಗೆ ಸ್ಟಾಂಪ್ ಶುಲ್ಕವನ್ನು 5% ರಿಂದ 2% ಕ್ಕೆ ಇಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಎಂಎಂಆರ್ ರಿಯಾಲ್ಟಿಯ ಪುನರುಜ್ಜೀವನಕ್ಕೆ ಸಹಕಾರಿಯಾಗಿದೆ. ಕೊರೊನಾ ರೋಗದ ಮಧ್ಯೆ ಕುಂಠಿತಗೊಂಡಿರುವ ವಲಯಕ್ಕೆ ಇದು ಹೆಚ್ಚು ಅಗತ್ಯವಾಗಿದೆ. ಸ್ಟಾಂಪ್ ಶುಲ್ಕದ ಕಡಿಮೆ ವೆಚ್ಚವು ಮೊದಲ ಬಾರಿಗೆ ವ್ಯವಹರಿಸುವ ಮನೆ ಕೊಳ್ಳುವವರು ಮತ್ತು ಮರುಮಾರಾಟ ಮಾಡುವ ಫ್ಲಾಟ್ ಖರೀದಿದಾರರನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತದೆ” ಎಂದು ಕ್ರೆಡೈ-ಎಂಸಿಐಐ ಅಧ್ಯಕ್ಷ ನಯನ್ ಷಾ ಹೇಳಿದರು.

ಆಗಸ್ಟ್ 15 ರಂದು ರಾಜ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ರಾಜ್ಯದಲ್ಲಿ ಆಸ್ತಿ ನೋಂದಣಿಯ ಮೇಲಿನ ಸ್ಟಾಂಪ್ ಶುಲ್ಕವನ್ನು 2 ರಿಂದ 3 ಪ್ರತಿಶತದಷ್ಟು ಕಡಿತಗೊಳಿಸುವ ಸುಳಿವು ನೀಡಿದ್ದರು.

ಮುಂಬೈ, ಎಂಎಂಆರ್‌ಡಿಎ ಪ್ರದೇಶ ಮತ್ತು ಪುಣೆಗೆ ಎರಡು ವರ್ಷಗಳ ಅವಧಿಗೆ ಆಸ್ತಿಗಳ ಸ್ಟಾಂಪ್ ಶುಲ್ಕವನ್ನು 1% ರಷ್ಟು ಕಡಿಮೆಗೊಳಿಸುವುದಾಗಿ ಮಾರ್ಚ್ 6 ರಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.

ಇತರ ಪ್ರಮುಖ ರಾಜ್ಯಗಳಲ್ಲಿನ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಾಗಿ 5-8 ಪ್ರತಿಶತದ ನಡುವೆ ಇದೆ. ಆದರೆ ಕೆಲವು ರಾಜ್ಯಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯನ್ನು ಮಾಡಿಸಿದರೆ ಸ್ಟಾಂಪ್ ಶುಲ್ಕ ಕಡಿಮೆ ಇದೆ.

ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮಹಿಳಾ ಖರೀದಿದಾರರಿಗೆ ಸ್ಟಾಂಪ್ ಶುಲ್ಕದಲ್ಲಿ ವಿನಾಯತಿ ನೀಡಿವೆ.


ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...