Homeಎಕಾನಮಿರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ "ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು" ಎಂದಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಉತ್ತೇಜಿಸಲು, ಮಹಾರಾಷ್ಟ್ರ ಸರ್ಕಾರ 2020 ರ ಡಿಸೆಂಬರ್ 31 ರವರೆಗೆ ವಸತಿ ಘಟಕಗಳ ಮೇಲಿನ ಸ್ಟಾಂಪ್ ಶುಲ್ಕವನ್ನು ಶೇ. 5 ರಿಂದ ಶೇ. 2 ಕ್ಕೆ ತಾತ್ಕಾಲಿಕವಾಗಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2021 ರ ಜನವರಿ 1 ರಿಂದ ಮಾರ್ಚ್ 31, 2021 ರವರೆಗೆ ಮೂರು ತಿಂಗಳ ಕಾಲ ಸ್ಟಾಂಪ್ ಶುಲ್ಕ ಶೇ. 3 ರಷ್ಟು ಇರುತ್ತದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಸಮಯದಲ್ಲಿ ಆಸ್ತಿ ಖರೀದಿಸಲು ಮನೆ ಕೊಳ್ಳುವವರನ್ನು ಉತ್ತೇಜಿಸುವ ಸಲುವಾಗಿ ಸ್ಟಾಂಪ್ ಶುಲ್ಕವನ್ನು ಕಡಿತಗೊಳಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

“ಈ ಕ್ರಮವು ಗ್ರಾಹಕರಿಗೆ ಅನುಕೂಲವಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಹಲವು ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ. ಈ ಹಿಂದೆ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿದಾಗಲೆಲ್ಲಾ, ಇದು ಸರ್ಕಾರಿ ಖಜಾನೆಯ ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಕ್ರೆಡೈ ನ್ಯಾಷನಲ್ ನ ಅಧ್ಯಕ್ಷ ಜಾಕ್ಸೆ ಷಾ ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

“ಇದು ಸರ್ಕಾರವು ತೆಗೆದುಕೊಂಡ ಪೂರ್ವಭಾವಿ ಕ್ರಮವಾಗಿದೆ. ಇದು ಖಂಡಿತ ಅಗತ್ಯವಾಗಿದ್ದು, ಖರೀದಿದಾರರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ” ಎಂದು ಕಾನ್ಫಿಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಸತೀಶ್ ಮಗರ್ ತಿಳಿಸಿದರು.

ಇದನ್ನೂ ಓದಿ: ಬೇಹುಗಾರಿಕಾ ಬಂಡವಾಳಶಾಹಿಗಳು ಕೂತಲ್ಲೇ ನಿಮ್ಮನ್ನು ನಿಯಂತ್ರಿಸುತ್ತಿದ್ದಾರೆ – ಭಾಗ 1

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ “ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು” ಎಂದಿದ್ದಾರೆ.

“ಡಿಸೆಂಬರ್ 31 ರವರೆಗೆ ಸ್ಟಾಂಪ್ ಶುಲ್ಕವನ್ನು 5% ರಿಂದ 2% ಕ್ಕೆ ಇಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಎಂಎಂಆರ್ ರಿಯಾಲ್ಟಿಯ ಪುನರುಜ್ಜೀವನಕ್ಕೆ ಸಹಕಾರಿಯಾಗಿದೆ. ಕೊರೊನಾ ರೋಗದ ಮಧ್ಯೆ ಕುಂಠಿತಗೊಂಡಿರುವ ವಲಯಕ್ಕೆ ಇದು ಹೆಚ್ಚು ಅಗತ್ಯವಾಗಿದೆ. ಸ್ಟಾಂಪ್ ಶುಲ್ಕದ ಕಡಿಮೆ ವೆಚ್ಚವು ಮೊದಲ ಬಾರಿಗೆ ವ್ಯವಹರಿಸುವ ಮನೆ ಕೊಳ್ಳುವವರು ಮತ್ತು ಮರುಮಾರಾಟ ಮಾಡುವ ಫ್ಲಾಟ್ ಖರೀದಿದಾರರನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತದೆ” ಎಂದು ಕ್ರೆಡೈ-ಎಂಸಿಐಐ ಅಧ್ಯಕ್ಷ ನಯನ್ ಷಾ ಹೇಳಿದರು.

ಆಗಸ್ಟ್ 15 ರಂದು ರಾಜ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ರಾಜ್ಯದಲ್ಲಿ ಆಸ್ತಿ ನೋಂದಣಿಯ ಮೇಲಿನ ಸ್ಟಾಂಪ್ ಶುಲ್ಕವನ್ನು 2 ರಿಂದ 3 ಪ್ರತಿಶತದಷ್ಟು ಕಡಿತಗೊಳಿಸುವ ಸುಳಿವು ನೀಡಿದ್ದರು.

ಮುಂಬೈ, ಎಂಎಂಆರ್‌ಡಿಎ ಪ್ರದೇಶ ಮತ್ತು ಪುಣೆಗೆ ಎರಡು ವರ್ಷಗಳ ಅವಧಿಗೆ ಆಸ್ತಿಗಳ ಸ್ಟಾಂಪ್ ಶುಲ್ಕವನ್ನು 1% ರಷ್ಟು ಕಡಿಮೆಗೊಳಿಸುವುದಾಗಿ ಮಾರ್ಚ್ 6 ರಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.

ಇತರ ಪ್ರಮುಖ ರಾಜ್ಯಗಳಲ್ಲಿನ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಾಗಿ 5-8 ಪ್ರತಿಶತದ ನಡುವೆ ಇದೆ. ಆದರೆ ಕೆಲವು ರಾಜ್ಯಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯನ್ನು ಮಾಡಿಸಿದರೆ ಸ್ಟಾಂಪ್ ಶುಲ್ಕ ಕಡಿಮೆ ಇದೆ.

ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮಹಿಳಾ ಖರೀದಿದಾರರಿಗೆ ಸ್ಟಾಂಪ್ ಶುಲ್ಕದಲ್ಲಿ ವಿನಾಯತಿ ನೀಡಿವೆ.


ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....