Homeಎಕಾನಮಿರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಸ್ಟಾಂಪ್ ಶುಲ್ಕ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ!

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ "ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು" ಎಂದಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಉತ್ತೇಜಿಸಲು, ಮಹಾರಾಷ್ಟ್ರ ಸರ್ಕಾರ 2020 ರ ಡಿಸೆಂಬರ್ 31 ರವರೆಗೆ ವಸತಿ ಘಟಕಗಳ ಮೇಲಿನ ಸ್ಟಾಂಪ್ ಶುಲ್ಕವನ್ನು ಶೇ. 5 ರಿಂದ ಶೇ. 2 ಕ್ಕೆ ತಾತ್ಕಾಲಿಕವಾಗಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2021 ರ ಜನವರಿ 1 ರಿಂದ ಮಾರ್ಚ್ 31, 2021 ರವರೆಗೆ ಮೂರು ತಿಂಗಳ ಕಾಲ ಸ್ಟಾಂಪ್ ಶುಲ್ಕ ಶೇ. 3 ರಷ್ಟು ಇರುತ್ತದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಸಮಯದಲ್ಲಿ ಆಸ್ತಿ ಖರೀದಿಸಲು ಮನೆ ಕೊಳ್ಳುವವರನ್ನು ಉತ್ತೇಜಿಸುವ ಸಲುವಾಗಿ ಸ್ಟಾಂಪ್ ಶುಲ್ಕವನ್ನು ಕಡಿತಗೊಳಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

“ಈ ಕ್ರಮವು ಗ್ರಾಹಕರಿಗೆ ಅನುಕೂಲವಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಹಲವು ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ. ಈ ಹಿಂದೆ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿದಾಗಲೆಲ್ಲಾ, ಇದು ಸರ್ಕಾರಿ ಖಜಾನೆಯ ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಕ್ರೆಡೈ ನ್ಯಾಷನಲ್ ನ ಅಧ್ಯಕ್ಷ ಜಾಕ್ಸೆ ಷಾ ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

“ಇದು ಸರ್ಕಾರವು ತೆಗೆದುಕೊಂಡ ಪೂರ್ವಭಾವಿ ಕ್ರಮವಾಗಿದೆ. ಇದು ಖಂಡಿತ ಅಗತ್ಯವಾಗಿದ್ದು, ಖರೀದಿದಾರರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ” ಎಂದು ಕಾನ್ಫಿಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಸತೀಶ್ ಮಗರ್ ತಿಳಿಸಿದರು.

ಇದನ್ನೂ ಓದಿ: ಬೇಹುಗಾರಿಕಾ ಬಂಡವಾಳಶಾಹಿಗಳು ಕೂತಲ್ಲೇ ನಿಮ್ಮನ್ನು ನಿಯಂತ್ರಿಸುತ್ತಿದ್ದಾರೆ – ಭಾಗ 1

ಕರ್ನಾಟಕದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿ “ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಇದು ಸರಿಯಾದ ನಿರ್ಧಾರವಾಗಿದೆ. ಕರ್ನಾಟಕ ಸರ್ಕಾರವೂ ಸಹ ಸ್ಟಾಂಪ್ ಶುಲ್ಕವನ್ನು ಕಡಿಮೆ ಮಾಡಿ ಆರ್ಥಿಕತೆಯನ್ನು ಉತ್ತೇಜಿಸಬೇಕು” ಎಂದಿದ್ದಾರೆ.

“ಡಿಸೆಂಬರ್ 31 ರವರೆಗೆ ಸ್ಟಾಂಪ್ ಶುಲ್ಕವನ್ನು 5% ರಿಂದ 2% ಕ್ಕೆ ಇಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಎಂಎಂಆರ್ ರಿಯಾಲ್ಟಿಯ ಪುನರುಜ್ಜೀವನಕ್ಕೆ ಸಹಕಾರಿಯಾಗಿದೆ. ಕೊರೊನಾ ರೋಗದ ಮಧ್ಯೆ ಕುಂಠಿತಗೊಂಡಿರುವ ವಲಯಕ್ಕೆ ಇದು ಹೆಚ್ಚು ಅಗತ್ಯವಾಗಿದೆ. ಸ್ಟಾಂಪ್ ಶುಲ್ಕದ ಕಡಿಮೆ ವೆಚ್ಚವು ಮೊದಲ ಬಾರಿಗೆ ವ್ಯವಹರಿಸುವ ಮನೆ ಕೊಳ್ಳುವವರು ಮತ್ತು ಮರುಮಾರಾಟ ಮಾಡುವ ಫ್ಲಾಟ್ ಖರೀದಿದಾರರನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತದೆ” ಎಂದು ಕ್ರೆಡೈ-ಎಂಸಿಐಐ ಅಧ್ಯಕ್ಷ ನಯನ್ ಷಾ ಹೇಳಿದರು.

ಆಗಸ್ಟ್ 15 ರಂದು ರಾಜ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ರಾಜ್ಯದಲ್ಲಿ ಆಸ್ತಿ ನೋಂದಣಿಯ ಮೇಲಿನ ಸ್ಟಾಂಪ್ ಶುಲ್ಕವನ್ನು 2 ರಿಂದ 3 ಪ್ರತಿಶತದಷ್ಟು ಕಡಿತಗೊಳಿಸುವ ಸುಳಿವು ನೀಡಿದ್ದರು.

ಮುಂಬೈ, ಎಂಎಂಆರ್‌ಡಿಎ ಪ್ರದೇಶ ಮತ್ತು ಪುಣೆಗೆ ಎರಡು ವರ್ಷಗಳ ಅವಧಿಗೆ ಆಸ್ತಿಗಳ ಸ್ಟಾಂಪ್ ಶುಲ್ಕವನ್ನು 1% ರಷ್ಟು ಕಡಿಮೆಗೊಳಿಸುವುದಾಗಿ ಮಾರ್ಚ್ 6 ರಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.

ಇತರ ಪ್ರಮುಖ ರಾಜ್ಯಗಳಲ್ಲಿನ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಾಗಿ 5-8 ಪ್ರತಿಶತದ ನಡುವೆ ಇದೆ. ಆದರೆ ಕೆಲವು ರಾಜ್ಯಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯನ್ನು ಮಾಡಿಸಿದರೆ ಸ್ಟಾಂಪ್ ಶುಲ್ಕ ಕಡಿಮೆ ಇದೆ.

ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮಹಿಳಾ ಖರೀದಿದಾರರಿಗೆ ಸ್ಟಾಂಪ್ ಶುಲ್ಕದಲ್ಲಿ ವಿನಾಯತಿ ನೀಡಿವೆ.


ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...