Homeಮುಖಪುಟಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಮೊಬೈಲ್ ಫೋನ್ ಬಳಸಿದ್ದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ತನ್ನ ಮೇಲೆ ಜೈಲಿನಲ್ಲಿ “ಹಲ್ಲೆ ಮಾಡಲಾಗಿದೆ” ಮತ್ತು ತನ್ನ ಕುಟುಂಬವನ್ನು ಭೇಟಿಯಾಗಲು ಅನುಮತಿಸುತ್ತಿಲ್ಲ ಎಂದು ಆರೋಪಿಸಿದ ನಂತರ, ಮಹಾರಾಷ್ಟ್ರ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ತಮ್ಮ ಕಳವಳ ತಿಳಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಇಂದು ಬೆಳಿಗ್ಗೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ಮಾತನಾಡುತ್ತಾ ಜೈಲಿನಲ್ಲಿರುವ ಅರ್ನಾಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅರ್ನಾಬ್ ಗೋಸ್ವಾಮಿ ಕುಟುಂಬಸ್ಥರು ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ರಾಜ್ಯಪಾಲರು ಗೃಹ ಸಚಿವರನ್ನು ಕೇಳಿದ್ದಾರೆ.

ನಿನ್ನೆ ಬಂಧಿತ ಅರ್ನಾಬ್ ಮೊಬೈಲ್ ಫೋನ್ ಬಳಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಯಿತು. ಕಳೆದ ವಾರ ಅರ್ನಾಬ್ ಬಂಧನಕ್ಕೊಳಗಾದಾಗ ಅವರ ಫೋನ್ ವಶಪಡಿಸಿಕೊಂಡಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಇನ್ನೊಬ್ಬರ ಮೊಬೈಲ್ ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ನಿನ್ನೆ ತಲೋಜಾ ಜೈಲಿಗೆ ಕರೆದೊಯ್ಯುವಾಗ, ಅರ್ನಾಬ್ ಗೋಸ್ವಾಮಿ ಪೊಲೀಸ್ ವ್ಯಾನ್‌ನಿಂದಲೇ ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸಿದ್ದರು. ’ಶನಿವಾರ(ನ.7) ಸಂಜೆ ಅಲಿಬಾಗ್ ಜೈಲು ಅಧಿಕಾರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನ್ನ ಪ್ರಾಣಕ್ಕೆ ಅಪಾಯವಿದೆ ಮತ್ತು ನನ್ನ ವಕೀಲರೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ಅರ್ನಾಬ್ ಗೋಸ್ವಾಮಿ ಪತ್ನಿ ಸಂಬ್ರಾತಾ ರೇ ಗೋಸ್ವಾಮಿ ಕೂಡ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ’ನ್ಯಾಯಾಂಗ ಬಂಧನದಲ್ಲಿದ್ದ ನನ್ನ ಗಂಡನನ್ನು ಪೊಲೀಸ್ ವ್ಯಾನ್‌ನಲ್ಲಿ ಮಹಾರಾಷ್ಟ್ರ ಪೊಲೀಸರು ಎಳೆದೊಯ್ಯದಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಅವರು ಪದೇ ಪದೇ ಹೇಳುತ್ತಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ತನ್ನ ವಕೀಲರ ಜೊತೆಗೆ ಮಾತನಾಡಲು ಬಯಸಿದ್ದಕ್ಕೆ ಅವರ ಮೇಲೆ ಜೈಲರ್ ಹಲ್ಲೆ ನಡೆಸಿದ್ದಾರೆ ಎಂದು ಅವರು ಪದೇ ಪದೇ ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

“ನ್ಯಾಯಾಂಗ ಬಂಧನದಲ್ಲಿ ತನ್ನ ಮೇಲೆ ಹಲ್ಲೆ ಮಾಡಲಾಗಿದೆಯೆಂದು ಅವರು ವಿವರಿಸಿದರು. ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಮತ್ತು ಜಾಮೀನುಗಾಗಿ ಸುಪ್ರೀಂ ಕೋರ್ಟ್‌ಗೆ ಕೈ ಮುಗಿದು ಮನವಿ ಮಾಡಿದ್ದಾರೆ” ಎಂದರು.

ರಿಪಬ್ಲಿಕ್ ಟಿವಿಯ ಸೆಟ್‌ಗಳಲ್ಲಿ ಅವರು ಮಾಡಿದ ಕೆಲಸಕ್ಕೆ ಬಾಕಿ ಪಾವತಿಸದ ಆರೋಪದ ಮೇಲೆ 2018 ರಲ್ಲಿ ಇಂಟೀರಿಯರ್ ಡಿಸೈನರ್‌ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅಸಹಜ ಸಾವಿಗೆ ಸಂಬಂಧಿಸಿದಂತೆ ಅರ್ನಾಬ್ ಮತ್ತು ಇತರ ಇಬ್ಬರನ್ನು ಮಹಾರಾಷ್ಟ್ರ ಸಿಐಡಿ ಪೊಲೀಸರು ನವೆಂಬರ್ 4 ರಂದು ಬಂಧಿಸಿದ್ದರು. ಮೂವರನ್ನು ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.

ಇನ್ನು ಈ ಕುರಿತು ಇಂದು ಅರ್ನಾಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನಿರಾಕರಿಸಿದೆ. ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ((4 ದಿನಗಳು)) ನಿರ್ಧರಿಸುತ್ತದೆ ಎಂದಿದೆ.


ಇದನ್ನೂ ಓದಿ:ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...