Homeಮುಖಪುಟಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಮೊಬೈಲ್ ಫೋನ್ ಬಳಸಿದ್ದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ತನ್ನ ಮೇಲೆ ಜೈಲಿನಲ್ಲಿ “ಹಲ್ಲೆ ಮಾಡಲಾಗಿದೆ” ಮತ್ತು ತನ್ನ ಕುಟುಂಬವನ್ನು ಭೇಟಿಯಾಗಲು ಅನುಮತಿಸುತ್ತಿಲ್ಲ ಎಂದು ಆರೋಪಿಸಿದ ನಂತರ, ಮಹಾರಾಷ್ಟ್ರ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ತಮ್ಮ ಕಳವಳ ತಿಳಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಇಂದು ಬೆಳಿಗ್ಗೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ಮಾತನಾಡುತ್ತಾ ಜೈಲಿನಲ್ಲಿರುವ ಅರ್ನಾಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅರ್ನಾಬ್ ಗೋಸ್ವಾಮಿ ಕುಟುಂಬಸ್ಥರು ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ರಾಜ್ಯಪಾಲರು ಗೃಹ ಸಚಿವರನ್ನು ಕೇಳಿದ್ದಾರೆ.

ನಿನ್ನೆ ಬಂಧಿತ ಅರ್ನಾಬ್ ಮೊಬೈಲ್ ಫೋನ್ ಬಳಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಯಿತು. ಕಳೆದ ವಾರ ಅರ್ನಾಬ್ ಬಂಧನಕ್ಕೊಳಗಾದಾಗ ಅವರ ಫೋನ್ ವಶಪಡಿಸಿಕೊಂಡಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಇನ್ನೊಬ್ಬರ ಮೊಬೈಲ್ ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ನಿನ್ನೆ ತಲೋಜಾ ಜೈಲಿಗೆ ಕರೆದೊಯ್ಯುವಾಗ, ಅರ್ನಾಬ್ ಗೋಸ್ವಾಮಿ ಪೊಲೀಸ್ ವ್ಯಾನ್‌ನಿಂದಲೇ ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸಿದ್ದರು. ’ಶನಿವಾರ(ನ.7) ಸಂಜೆ ಅಲಿಬಾಗ್ ಜೈಲು ಅಧಿಕಾರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನ್ನ ಪ್ರಾಣಕ್ಕೆ ಅಪಾಯವಿದೆ ಮತ್ತು ನನ್ನ ವಕೀಲರೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ಅರ್ನಾಬ್ ಗೋಸ್ವಾಮಿ ಪತ್ನಿ ಸಂಬ್ರಾತಾ ರೇ ಗೋಸ್ವಾಮಿ ಕೂಡ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ’ನ್ಯಾಯಾಂಗ ಬಂಧನದಲ್ಲಿದ್ದ ನನ್ನ ಗಂಡನನ್ನು ಪೊಲೀಸ್ ವ್ಯಾನ್‌ನಲ್ಲಿ ಮಹಾರಾಷ್ಟ್ರ ಪೊಲೀಸರು ಎಳೆದೊಯ್ಯದಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಅವರು ಪದೇ ಪದೇ ಹೇಳುತ್ತಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ತನ್ನ ವಕೀಲರ ಜೊತೆಗೆ ಮಾತನಾಡಲು ಬಯಸಿದ್ದಕ್ಕೆ ಅವರ ಮೇಲೆ ಜೈಲರ್ ಹಲ್ಲೆ ನಡೆಸಿದ್ದಾರೆ ಎಂದು ಅವರು ಪದೇ ಪದೇ ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

“ನ್ಯಾಯಾಂಗ ಬಂಧನದಲ್ಲಿ ತನ್ನ ಮೇಲೆ ಹಲ್ಲೆ ಮಾಡಲಾಗಿದೆಯೆಂದು ಅವರು ವಿವರಿಸಿದರು. ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಮತ್ತು ಜಾಮೀನುಗಾಗಿ ಸುಪ್ರೀಂ ಕೋರ್ಟ್‌ಗೆ ಕೈ ಮುಗಿದು ಮನವಿ ಮಾಡಿದ್ದಾರೆ” ಎಂದರು.

ರಿಪಬ್ಲಿಕ್ ಟಿವಿಯ ಸೆಟ್‌ಗಳಲ್ಲಿ ಅವರು ಮಾಡಿದ ಕೆಲಸಕ್ಕೆ ಬಾಕಿ ಪಾವತಿಸದ ಆರೋಪದ ಮೇಲೆ 2018 ರಲ್ಲಿ ಇಂಟೀರಿಯರ್ ಡಿಸೈನರ್‌ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅಸಹಜ ಸಾವಿಗೆ ಸಂಬಂಧಿಸಿದಂತೆ ಅರ್ನಾಬ್ ಮತ್ತು ಇತರ ಇಬ್ಬರನ್ನು ಮಹಾರಾಷ್ಟ್ರ ಸಿಐಡಿ ಪೊಲೀಸರು ನವೆಂಬರ್ 4 ರಂದು ಬಂಧಿಸಿದ್ದರು. ಮೂವರನ್ನು ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.

ಇನ್ನು ಈ ಕುರಿತು ಇಂದು ಅರ್ನಾಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನಿರಾಕರಿಸಿದೆ. ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ((4 ದಿನಗಳು)) ನಿರ್ಧರಿಸುತ್ತದೆ ಎಂದಿದೆ.


ಇದನ್ನೂ ಓದಿ:ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...