Homeಮುಖಪುಟಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಮೊಬೈಲ್ ಫೋನ್ ಬಳಸಿದ್ದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ತನ್ನ ಮೇಲೆ ಜೈಲಿನಲ್ಲಿ “ಹಲ್ಲೆ ಮಾಡಲಾಗಿದೆ” ಮತ್ತು ತನ್ನ ಕುಟುಂಬವನ್ನು ಭೇಟಿಯಾಗಲು ಅನುಮತಿಸುತ್ತಿಲ್ಲ ಎಂದು ಆರೋಪಿಸಿದ ನಂತರ, ಮಹಾರಾಷ್ಟ್ರ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ತಮ್ಮ ಕಳವಳ ತಿಳಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಇಂದು ಬೆಳಿಗ್ಗೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ಮಾತನಾಡುತ್ತಾ ಜೈಲಿನಲ್ಲಿರುವ ಅರ್ನಾಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅರ್ನಾಬ್ ಗೋಸ್ವಾಮಿ ಕುಟುಂಬಸ್ಥರು ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ರಾಜ್ಯಪಾಲರು ಗೃಹ ಸಚಿವರನ್ನು ಕೇಳಿದ್ದಾರೆ.

ನಿನ್ನೆ ಬಂಧಿತ ಅರ್ನಾಬ್ ಮೊಬೈಲ್ ಫೋನ್ ಬಳಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಯಿತು. ಕಳೆದ ವಾರ ಅರ್ನಾಬ್ ಬಂಧನಕ್ಕೊಳಗಾದಾಗ ಅವರ ಫೋನ್ ವಶಪಡಿಸಿಕೊಂಡಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಇನ್ನೊಬ್ಬರ ಮೊಬೈಲ್ ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ನಿನ್ನೆ ತಲೋಜಾ ಜೈಲಿಗೆ ಕರೆದೊಯ್ಯುವಾಗ, ಅರ್ನಾಬ್ ಗೋಸ್ವಾಮಿ ಪೊಲೀಸ್ ವ್ಯಾನ್‌ನಿಂದಲೇ ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸಿದ್ದರು. ’ಶನಿವಾರ(ನ.7) ಸಂಜೆ ಅಲಿಬಾಗ್ ಜೈಲು ಅಧಿಕಾರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನ್ನ ಪ್ರಾಣಕ್ಕೆ ಅಪಾಯವಿದೆ ಮತ್ತು ನನ್ನ ವಕೀಲರೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ಅರ್ನಾಬ್ ಗೋಸ್ವಾಮಿ ಪತ್ನಿ ಸಂಬ್ರಾತಾ ರೇ ಗೋಸ್ವಾಮಿ ಕೂಡ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ’ನ್ಯಾಯಾಂಗ ಬಂಧನದಲ್ಲಿದ್ದ ನನ್ನ ಗಂಡನನ್ನು ಪೊಲೀಸ್ ವ್ಯಾನ್‌ನಲ್ಲಿ ಮಹಾರಾಷ್ಟ್ರ ಪೊಲೀಸರು ಎಳೆದೊಯ್ಯದಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಅವರು ಪದೇ ಪದೇ ಹೇಳುತ್ತಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ತನ್ನ ವಕೀಲರ ಜೊತೆಗೆ ಮಾತನಾಡಲು ಬಯಸಿದ್ದಕ್ಕೆ ಅವರ ಮೇಲೆ ಜೈಲರ್ ಹಲ್ಲೆ ನಡೆಸಿದ್ದಾರೆ ಎಂದು ಅವರು ಪದೇ ಪದೇ ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

“ನ್ಯಾಯಾಂಗ ಬಂಧನದಲ್ಲಿ ತನ್ನ ಮೇಲೆ ಹಲ್ಲೆ ಮಾಡಲಾಗಿದೆಯೆಂದು ಅವರು ವಿವರಿಸಿದರು. ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಮತ್ತು ಜಾಮೀನುಗಾಗಿ ಸುಪ್ರೀಂ ಕೋರ್ಟ್‌ಗೆ ಕೈ ಮುಗಿದು ಮನವಿ ಮಾಡಿದ್ದಾರೆ” ಎಂದರು.

ರಿಪಬ್ಲಿಕ್ ಟಿವಿಯ ಸೆಟ್‌ಗಳಲ್ಲಿ ಅವರು ಮಾಡಿದ ಕೆಲಸಕ್ಕೆ ಬಾಕಿ ಪಾವತಿಸದ ಆರೋಪದ ಮೇಲೆ 2018 ರಲ್ಲಿ ಇಂಟೀರಿಯರ್ ಡಿಸೈನರ್‌ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅಸಹಜ ಸಾವಿಗೆ ಸಂಬಂಧಿಸಿದಂತೆ ಅರ್ನಾಬ್ ಮತ್ತು ಇತರ ಇಬ್ಬರನ್ನು ಮಹಾರಾಷ್ಟ್ರ ಸಿಐಡಿ ಪೊಲೀಸರು ನವೆಂಬರ್ 4 ರಂದು ಬಂಧಿಸಿದ್ದರು. ಮೂವರನ್ನು ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.

ಇನ್ನು ಈ ಕುರಿತು ಇಂದು ಅರ್ನಾಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನಿರಾಕರಿಸಿದೆ. ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ((4 ದಿನಗಳು)) ನಿರ್ಧರಿಸುತ್ತದೆ ಎಂದಿದೆ.


ಇದನ್ನೂ ಓದಿ:ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...