Homeಮುಖಪುಟಮಹಾರಾಷ್ಟ್ರ: ಮಳೆಹಾನಿ ಪ್ರದೇಶಗಳಿಗೆ 10,000 ಕೋಟಿ ಪರಿಹಾರ ಪ್ಯಾಕೇಜ್

ಮಹಾರಾಷ್ಟ್ರ: ಮಳೆಹಾನಿ ಪ್ರದೇಶಗಳಿಗೆ 10,000 ಕೋಟಿ ಪರಿಹಾರ ಪ್ಯಾಕೇಜ್

ರೈತರಿಗೆ ಹೆಕ್ಟೇರಿಗೆ 6,800 ರೂ.ಗಳ ಪರಿಹಾರದ ಬದಲು, ಈ ಬಾರಿ ಅದನ್ನು ಹೆಕ್ಟೇರಿಗೆ 10,000 ರೂ.ಗೆ ಹೆಚ್ಚಿಸುತ್ತಿದ್ದೇವೆ. ಕೇಂದ್ರ ಸರ್ಕಾರ ಕೂಡ ಇದೇ ರೀತಿ ಪರಿಹಾರ ಹೆಚ್ಚಿಸಲು ನಾನು ಒತ್ತಾಯಿಸುತ್ತೇನೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಾಮಳೆಯಿಂದ ನಲುಗಿರುವ ಭಾಗಗಳಿಗೆ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 10,000 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದೆ. ದೀಪಾವಳಿ ಹಬ್ಬಕ್ಕೂ ಮೊದಲೇ ಪರಿಹಾರ ಮೊತ್ತ ವಿತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಕಚೇರಿ ದೃಢಪಡಿಸಿದೆ.

ಮಳೆಯಿಂದ ತೀವ್ರವಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿನ ಬೆಳೆ ಹಾನಿ, ಜೀವಹಾನಿ, ಮನೆ ಮತ್ತು ಕಟ್ಟಡಗಳಿಗೆ ಆಗಿರುವ ಹಾನಿ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆ ನಡೆಸಿದ ಕೆಲವೇ ದಿನಗಳ ನಂತರ 10,000 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಪ್ರಕಟಣೆ ಹೊರಬಿದ್ದಿದೆ.

ಮಹಾರಾಷ್ಟ್ರದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಸೋಯಾ ಬೀನ್, ಹತ್ತಿ, ಕಬ್ಬು, ದಾಳಿಂಬೆ ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿವೆ.  ಸೋಲಾಪುರ್, ಸಾಂಗ್ಲಿ, ಕೋಲ್ಹಾಪುರ್, ಸತಾರಾ, ಉಸ್ಮಾನಾಬಾದ್, ಬೀಡ್, ಔರಂಗಬಾದ್ ಹಾಗೂ ಲಾತುರ್‌ನ ರೈತರು ಈ ಬಾರಿ ಉತ್ತಮ ಫಸಲಿನ ನಿರೀಕ್ಷೆ ಮಾಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ಯನ್ನು ಹಿಂತೆಗೆದುಕೊಂಡ ಸರ್ಕಾರ

ಪರಿಹಾರ ಘೋಷಣೆ ನಂತರ, ಉದ್ಧವ್ ಠಾಕ್ರೆ, “ಪ್ರವಾಹ ಮತ್ತು ಮಳೆಯಿಂದ ಹಾನಿಗೊಳಗಾದವರಿಗೆ ಸಹಾಯ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಪರಿಶೀಲನಾ ಸಭೆಯ ನಂತರ, ರೈತರು ಮತ್ತು ಸಂತ್ರಸ್ತ ಜನರಿಗೆ ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ವಿವಿಧ ಕೆಲಸಗಳಿಗಾಗಿ 10,000 ಕೋಟಿ ರೂ. ಪರಿಹಾರ ಘೋಷಿಸಿದ್ದೇವೆ. ದೀಪಾವಳಿ ಹಬ್ಬಕ್ಕಿಂತ ಮೊದಲು ಈ ಪರಿಹಾರ ಪ್ಯಾಕೇಜ್ ತಲುಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

“ರೈತರಿಗೆ ಹೆಕ್ಟೇರಿಗೆ 6,800 ರೂ.ಗಳ ಪರಿಹಾರದ ಬದಲು, ಈ ಬಾರಿ ಅದನ್ನು ಹೆಕ್ಟೇರಿಗೆ 10,000 ರೂ.ಗೆ ಹೆಚ್ಚಿಸುತ್ತಿದ್ದೇವೆ. ಕೇಂದ್ರ ಸರ್ಕಾರ ಕೂಡ ಇದೇ ರೀತಿ ಪರಿಹಾರ ಹೆಚ್ಚಿಸಲು ನಾನು ಒತ್ತಾಯಿಸುತ್ತೇನೆ. ಇಲ್ಲಿಯವರೆಗೆ, ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಜ್ಯ ಸರ್ಕಾರದಿಂದ ಸುಮಾರು 3,800 ಕೋಟಿ ರೂ. ಪರಿಹಾರ ನೀಡಿದ್ದೇವೆ” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದರು.

ಇಂದು ಬೆಳಗ್ಗೆ ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ30 ವರ್ಷದ ಯುವ ರೈತರೊಬ್ಬರು ಮಳೆಯಿಂದಾಗಿ ಬೆಳೆ ನಾಶವಾದ ಹಿನ್ನೆಲೆ ನೇಣಿಗೆ ಶರಣಾಗಿದ್ದರು.


ಇದನ್ನೂ ಓದಿ: ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...