Homeಮುಖಪುಟಮಹಾರಾಷ್ಟ್ರ | ಮಹಾ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ; ಅಘಾಡಿಗೆ ಅಘಾತ!

ಮಹಾರಾಷ್ಟ್ರ | ಮಹಾ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ; ಅಘಾಡಿಗೆ ಅಘಾತ!

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಮಹಾಯುತಿ ಭಾರಿ ಬಹುಮತದತ್ತ ಸಾಗುತ್ತಿದ್ದು, ವಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಗೆ ತೀವ್ರ ಅಘಾತವಾಗಿದೆ. ಒಟ್ಟು 288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾಯುತಿ ಮೈತ್ರಿಗೆ ಈ ವರೆಗೆ 224 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾವಿಕಾಸ್ ಅಘಾಡಿಗೆ ಕೇವಲ 60 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರ ಪಕ್ಷಗಳು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಶನಿವಾರ ಎಣಿಕೆ ಆರಂಭವಾಗುತ್ತಿದ್ದಂತೆ ಆಡಳಿತಾರೂಢ ಮಹಾಯುತಿ ಬಹುಮತದ 105 ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಹಾಗೂ ಇರತ ಪಕ್ಷಗಳು ಇವೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಇತರ ಮಿತ್ರ ಪಕ್ಷಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈವರೆಗಿನ ಫಲಿತಾಂಶದಂತೆ ಬಿಜೆಪಿ ತಾನು ಸ್ಪರ್ಧಿಸಿದ್ದ 149 ಕ್ಷೇತ್ರಗಳಲ್ಲಿ 133 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಬಿಜೆಪಿ ರಾಜ್ಯದಲ್ಲಿ ಶಕ್ತಿ ಹೆಚ್ಚಿಸಿಕೊಂಡಿದ್ದು, 2019ರ ಚುನಾವಣೆಯಲ್ಲಿ ಪಕ್ಷವೂ 164 ಸ್ಥಾನಗಳಲ್ಲಿ ಸ್ಪರ್ಧಿಸಿ 105 ಕ್ಷೇತ್ರಗಳಲ್ಲಿ ಗೆದ್ದಿತ್ತು.

ಮಹಾಯುತಿ ಮೈತ್ರಿಯ ಶಿಂಧೆ ನೇತೃತ್ವದ ಶಿವಸೇನೆ 82 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು 50 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಅವಿಭಜಿತ ಶಿವಸೇನೆ 2019ರಲ್ಲಿ 126 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 56 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ, ಪಕ್ಷವೂ ಒಡೆದು ಶಿಂಧೆ ಬಣ ಬಿಜೆಪಿ ಜೊತೆಗೆ ಸೇರಿದ್ದರೆ, ಉದ್ಧವ್ ಠಾಕ್ರೆ ಬಣ ಕಾಂಗ್ರೆಸ್ ಜೊತೆಗೆ ಉಳಿದುಕೊಂಡಿತ್ತು.

ಮಹಾಯುತಿ ಮೈತ್ರಿಯಲ್ಲಿ ಇರುವ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 37 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. 2019ರಲ್ಲಿ ಅವಿಭಜಿತ ಎನ್‌ಸಿಪಿ 121 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 54 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ ನಂತರ, ಪಕ್ಷವೂ ಒಡೆದು ಅಜಿತ್ ಪವಾರ್ ಬಣ ಬಿಜೆಪಿ ಜೊತೆಗೆ ಸೇರಿದ್ದರೆ, ಶರದ್ ಪವಾರ್ ಬಣ ಕಾಂಗ್ರೆಸ್ ಜೊತೆಗೆ ಉಳಿದುಕೊಂಡಿತ್ತು.

ಅಷ್ಟೆ ಅಲ್ಲದೆ, ಮಹಾಯುತಿ ಮೈತ್ರಿಯಲ್ಲಿ ಇರುವ ಜೆಎಸ್‌ಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಆರ್‌ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ವಿಪಕ್ಷಗಳ ಮೈತ್ರಿಯಾದ ಮಹಾವಿಕಾಸ್ ಅಘಾಡಿಯ ಕಾಂಗ್ರೆಸ್ ಒಟ್ಟು 101 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ 17 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಪಕ್ಷವೂ 2019ರಲ್ಲಿ 147 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 44 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಮಹಾವಿಕಾಸ್ ಅಘಾಡಿಯ ಶರದ್ ಪವಾರ್ ನೇತೃತ್ವದ ಎನ್‌ಸಿಪಿ 86 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಕೇವಲ13 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆ ಕಾಯ್ದುಕೊಂಡಿದೆ. ಜೊತೆಗೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 96 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 26 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಅದೇ ರೀತಿ ಮೈತ್ರಿಯ ಪಕ್ಷಗಳಾದ ಸಮಾಜವಾದಿ ಪಕ್ಷ ಎರಡು ಕ್ಷೇತ್ರಗಳಲ್ಲಿ, ಸಿಪಿಐಎಂ ಮತ್ತು ಆರ್‌ಡಬ್ಲ್ಯೂಪಿಐ ಕ್ರಮವಾಗಿ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಎರಡು ಪ್ರಮುಖ ಮೈತ್ರಿಗಳಲ್ಲಿ ಇಲ್ಲದ ಇತರ ಪಕ್ಷಗಳಾದ SBP, AIMIM, ISLAM, RSPK ಪಕ್ಷಗಳು ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಇದನ್ನೂಓದಿ  ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...