Homeಮುಖಪುಟಹರ್ಯಾಣ, ಮಹಾರಾಷ್ಟ್ರ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಲಿಲ್ಲ ಏಕೆ..?

ಹರ್ಯಾಣ, ಮಹಾರಾಷ್ಟ್ರ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಲಿಲ್ಲ ಏಕೆ..?

- Advertisement -
- Advertisement -

ಜ್ಯೂನಿಯರ್ ಇಂದಿರಾ, ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಚಾರ ನಡೆಸಲಿಲ್ಲ. ಲೋಕಸಭೆ ಚುನಾವಣೆ ವೇಳೆ ದೇಶದ ವಿವಿಧ ಭಾಗಗಳಲ್ಲಿ ಪ್ರಚಾರ ಮತ್ತು ಪಕ್ಷ ಸಂಘಟನೆ ಮಾಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಯಾಕೆ ಮಹತ್ವ ನೀಡಲಿಲ್ಲ ಎಂಬ ಪ್ರಶ್ನೆ ಬಲವಾಗಿ ಕೇಳಿ ಬಂದಿತ್ತು. ಇದಕ್ಕೀಗ ಕಾಂಗ್ರೆಸ್ ಮುಖಂಡರು ಉತ್ತರ ನೀಡಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಕಳೆದು ಹೋಗಿರುವ ಪಕ್ಷದ ಜನಪ್ರಿಯತೆಯನ್ನು ಹೆಚ್ಚಿಸಲು, ಮತ್ತೆ ರಾಜ್ಯವನ್ನು ತಮ್ಮ ಪಕ್ಷದ ಸುಪರ್ದಿಗೆ ತೆಗೆದುಕೊಳ್ಳಲು, ಬೂತ್ ಮಟ್ಟದಿಂದ ಸಂಘಟನೆ ಮಾಡುತ್ತಿದ್ದಾರೆ. ಪಕ್ಷವನ್ನು ಪುನರುಜ್ಜೀವನಗೊಳಿಸಲು ಉತ್ಸುಕತೆಯಿಂದ ಕೆಲಸದಲ್ಲಿ ನಿರತರಾಗಿದ್ದಾರೆ’. ಹೀಗಾಗಿ ಅವರಿಗೆ ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸೈಡ್‍ಲೈನ್ ಆಗುತ್ತಿದೆ. ಕೆಲ ವರ್ಷಗಳಲ್ಲಿ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಮುನ್ನೆಲೆಗೆ ಬಂದಿವೆ. ಹೀಗಾಗಿ ಕಾಂಗ್ರೆಸ್ ಸ್ವಕ್ಷೇತ್ರದಲ್ಲಿ ಕ್ಷೀಣಿಸುತ್ತಿದೆ. ಹೀಗಾಗಿ ಪಕ್ಷದ ಸಂಘಟನೆ ಬಹುಮುಖ್ಯವಾಗಿದೆ. ಆದ್ದರಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ಮತ್ತು ಅಲ್ಲಿನ ಬೆಳವಣಿಗೆಗಳನ್ನು ನೋಡಿಕೊಳ್ಳುವುದರಲ್ಲಿ ಪ್ರಿಯಾಂಕಾ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

1989 ರ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜನಪ್ರಿಯತೆ ರಾಜಕೀಯವಾಗಿ ಕುಗ್ಗುತ್ತಾ ಹೋಯಿತು. ಇಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಪ್ರಾಬಲ್ಯ ಹೆಚ್ಚಿತು. 2019ರ ಲೋಕಸಭೆ ಚುನಾವಣೆ ವೇಳೆ ಉತ್ತರ ಪ್ರದೇಶದ ಅಮೇಠಿಯಲ್ಲಿ ರಾಹುಲ್ ಗಾಂಧಿ 50 ಸಾವಿರ ವೋಟ್ ಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋತರು. ರಾಯ್‍ಬರೇಲಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಗೆಲುವು ಸಾಧಿಸಿ, ಪಕ್ಷದ ಮರ್ಯಾದೆ ಉಳಿಸಿದ್ದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಉತ್ತರ ಪ್ರದೇಶ, ಗುಜರಾತ್, ಅಸ್ಸಾಂ, ಪಂಜಾಬ್, ಹರ್ಯಾಣ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜ್ಯೂನಿಯರ್ ಇಂದಿರಾ ಬೃಹತ್ ಕ್ಯಾಂಪೇನ್ ನಡೆಸಿದ್ದರು. ಜನವರಿ 23ರಲ್ಲಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹುದ್ದೆಗೇರಿದ ಪ್ರಿಯಾಂಕಾ, ಪಕ್ಷವನ್ನು ಕಟ್ಟುವಲ್ಲಿ ನಿರತರಾಗಿದ್ದಾರೆ. ನಿಶ್ಚಿತ ಗುರಿಯತ್ತ ದೃಷ್ಟಿ ನೆಟ್ಟಿರುವ ಪ್ರಿಯಾಂಕಾ ಪ್ರಮುಖ ಕಾರ್ಯಚಟುವಟಿಕೆಗಳನ್ನು ನಡೆಸಿ, ಪಕ್ಷವನ್ನು ಸದೃಢವಾಗಿಸುತ್ತಾರೆ. ನಶಿಸುತ್ತಿರುವ ಕಾಂಗ್ರೆಸ್‍ಗೆ ಪ್ರಿಯಾಂಕಾ ಬೂಸ್ಟ್ ನಂತೆ ಕೆಲಸ ಮಾಡುತ್ತಾರೆ ಎಂಬ ಮಾತುಗಳು, ಚರ್ಚೆಗಳು ನಡೆದಿದ್ದವು.

ಅದಾಗ್ಯೂ ಹರ್ಯಾಣದಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಚಾರಕ್ಕೆ ಅಣಿಯಾಗಿದ್ದರು. ಆದರೆ ಪ್ರಿಯಾಂಕ ಮಾತ್ರ ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ಕನಿಷ್ಠ ತಯಾರಿಯನ್ನೂ ಮಾಡಲಿಲ್ಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈಗ ಅದಕ್ಕೆ ಉತ್ತರ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...